ರಾಜ್ಯ ಸರ್ಕಾರ ಶೀಘ್ರದಲ್ಲಿ ಸೈಬರ್ ಸೆಕ್ಯೂರಿಟಿ ಪಾಲಿಸಿ ಜಾರಿಗೆ ತರಲಿದೆ: ಗೃಹ ಸಚಿವ ಡಾ.‌ಜಿ.ಪರಮೇಶ್ವರ್

Date:

ರಾಜ್ಯ ಸರ್ಕಾರವು ಶೀಘ್ರದಲ್ಲಿ ಸೈಬರ್ ಸೆಕ್ಯೂರಿಟಿ ಪಾಲಿಸಿಯನ್ನು ಜಾರಿಗೆ ತರಲಿದೆ. ಬೆಂಗಳೂರು ನಗರದಲ್ಲಿ ಐಟಿ-ಬಿಟಿ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿರುವುದರಿಂದ ಅನುಕೂಲವಾಗುತ್ತದೆ. ಈ ದೃಷ್ಟಿಯಲ್ಲಿ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಒಂದು ಹೆಜ್ಜೆ ಮುಂದಿದೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ್ ಹೇಳಿದರು.

ರಾಜ್ಯ ಪೊಲೀಸ್ ಇಲಾಖೆ, ಸಿಐಡಿ ಹಾಗೂ ಸೈಬರ್ ಕ್ರೈಂ ತನಿಖಾ ತರಬೇತಿ ಮತ್ತು ಸಂಶೋಧನಾ ಸಂಸ್ಥೆಯು ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಆಯೋಜಿಸಿದ್ದ ‘ಸೈಬರ್ ಅಪರಾಧ ತನಿಖಾ‌ ಶೃಂಗ ಸಭೆ-2024’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ದೇಶದ ಬಹುತೇಕ ವಲಯಗಳಲ್ಲಿ ಡಿಜಿಟಲ್ ಸೇವೆಗಳು ಹೆಚ್ಚಾಗಿ ನಡೆಯುತ್ತಿದ್ದು, ಇದಕ್ಕೆ‌ ಪೂರಕವಾಗಿ ಸೈಬರ್ ಭದ್ರತೆ ಕುರಿತು ಅರಿತುಕೊಳ್ಳುವುದು ಅಗತ್ಯ. ಸರ್ಕಾರದ ಹಲವು ಇಲಾಖೆಗಳು ಜನರಿಗೆ ಸುಲಭವಾಗಿ ಸೇವೆ ಒದಗಿಸಲು ಡಿಜಿಟಲ್ ಮೊರೆ ಹೋಗುತ್ತಿವೆ‌. ಸೇವಾಸಿಂಧು, ಮೊಬೈಲ್ ಬ್ಯಾಂಕಿಂಗ್, ವರ್ಚ್ಯುವಲ್ ಕ್ಲಾಸ್‌ಗಳು ಸೇರಿದಂತೆ ವಿವಿಧ ರೀತಿಯ ಡಿಜಿಟಲ್ ವ್ಯವಸ್ಥೆ ಅಳವಡಿಸಿಕೊಳ್ಳುತ್ತಿದ್ದಾರೆ. ಇದನ್ನು ಅಳವಡಿಸಿಕೊಳ್ಳುವ ಮೊದಲು ಸೈಬರ್ ಸುರಕ್ಷತೆ ಮತ್ತು ಭದ್ರತೆ ಬಗ್ಗೆ ಗಮನಹರಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 43 ಸೈಬರ್ ಕ್ರೈಮ್ ಪೊಲೀಸ್ ಠಾಣೆಗಳು, ಸೈಬರ್ ವಂಚನೆಗೊಳಗಾದ ಜನರಿಗೆ ಸುರಕ್ಷತೆ ಒದಗಿಸುವ ಕೆಲಸ ಮಾಡುತ್ತಿವೆ. ಸೈಬರ್ ಅಪರಾಧಿಗಳು ಡಿಜಿಟಲ್ ಜಗತ್ತಿನಲ್ಲಿ ಹ್ಯಾಕಿಂಗ್ ಮೂಲಕ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ದತ್ತಾಂಶವನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳುವುದೇ ಇದಕ್ಕೆ ಪರಿಹಾರ. ಈ ಬಗ್ಗೆ ಹೆಚ್ಚು ಅರಿವು ಮೂಡಿಸುವ ಕೆಲಸವಾಗಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿದೇಶಿ ಪ್ರವಾಸಿ ಮೇಲೆ ಅತ್ಯಾಚಾರ; ʼಅತಿಥಿ ದೇವೋಭವʼ ಎಂದ ದೇಶದಲ್ಲಿ ಇದೆಂಥಾ ಕ್ರೌರ್ಯ!

“ರಾಜ್ಯ ಸರ್ಕಾರವು ಸೈಬರ್ ಕ್ರೈಂ ವಿಭಾಗದ ಬಲ ಹೆಚ್ಚಿಸಲು ಕೃತಕ ಬುದ್ಧಿಮತ್ತೆ, ಸೈಬರ್ ಭದ್ರತೆ, ಕ್ಲೌಡ್ ಕಂಪ್ಯೂಟಿಂಗ್ ಸೇರಿದಂತೆ ವಿವಿಧ ತಂತ್ರಜ್ಞಾನ ವಲಯಗಳಲ್ಲಿ ಪರಿಣತಿ ಹೊಂದಿರುವ ಕಂಪನಿಗಳ ನೆರವು ಪಡೆದುಕೊಳ್ಳಲಾಗುವುದು. ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ.‌ ಪೊಲೀಸ್, ನ್ಯಾಯಾಂಗ ಮತ್ತು ಭಾರತೀಯ ರಕ್ಷಣೆ ಪಡೆಗಳ 33 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳು ಸಿಐಡಿ ಕಚೇರಿಯಲ್ಲಿ ಸ್ಥಾಪಿಸಿರುವ ಸಿಸಿಐಟಿಆರ್‌ನಲ್ಲಿ ಆರೋಜಿಸುತ್ತಿರುವ ತರಬೇತಿ ಕಾರ್ಯಕ್ರಮಗಳ ಪ್ರಯೋಜನ ಪಡೆದುಕೊಂಡಿದ್ದಾರೆ” ಎಂದು ವಿವರಿಸಿದರು.

“ಸೈಬರ್ ಅಪರಾಧಿಗಳು ಜಗತ್ತಿನ ಯಾವುದೋ ಪ್ರದೇಶದಲ್ಲಿ ಕುಳಿತುಕೊಂಡು ಇನ್ನೊಂದು ಪ್ರದೇಶದ ಮೇಲೆ ಬೆದರಿಕೆ, ವಂಚನೆ ಸೇರಿದಂತೆ ಇನ್ನಿತರ ಸೈಬರ್ ದಾಳಿ ನಡೆಸುತ್ತಾರೆ. ಇದು ಆಯಾ ವಲಯದ ಮಾರುಕಟ್ಟೆ, ಹೂಡಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ತನಿಖೆ ನಡೆಸಿ ಅಪರಾಧಿಗಳನ್ನು ಮಟ್ಟಹಾಕಲು ಜಾಗತಿಕ ಮಟ್ಟದಲ್ಲಿ ಸಹಯೋಗ ಅಗತ್ಯವಾಗುತ್ತದೆ” ಎಂದು ಹೇಳಿದರು.

“ಡೀಪ್‌ಫೇಕ್, ಅಕ್ರಮ ಹಣ ವರ್ಗಾವಣೆ, ಆನ್ಲೈನ್ ಬ್ಯಾಂಕಿಂಗ್, ಲೋನ್ ಆ್ಯಪ್ ವಂಚನೆ ಸೇರಿದಂತೆ ಇನ್ನಿತರ ಪ್ರಕರಣಗಳು ಹೆಚ್ಚಾಗುತ್ತಿವೆ. ಗಂಭೀರ ಪ್ರಕರಣಗಳಲ್ಲಿ ವಿದೇಶಿ ಕಂಪನಿಗಳ ನೆರವು ಸಿಗದಿದ್ದರೆ ತನಿಖೆ ಕಷ್ಟವಾಗುತ್ತದೆ. ಸೈಬರ್ ಕ್ರೈಂ ಜಾಗತಿಕ ಸವಾಲು ಮತ್ತು ಸಮಸ್ಯೆಯಾಗಿದೆ. ಹೀಗಾಗಿ ಹಲವು ಕಂಪನಿಗಳು ಸೈಬರ್ ಅಪರಾಧ ತಡೆಗಟ್ಟಲು ಸಂಶೋಧನೆಗೆ ಇಳಿದಿವೆ” ಎಂದು ತಿಳಿಸಿದರು.

ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಡಿಜಿಪಿ ಡಾ. ಎಂ.ಎ.ಸಲೀಂ, ಎಡಿಜಿಪಿ ಪ್ರಣಬ್ ಮೊಹಂತಿ,‌ ಇನ್ಫೋಸಿಸ್ ಫೌಂಡೇಷನ್‌ ಟ್ರಸ್ಟಿ ಸುನೀಲ್ ಕುಮಾರ್ ಧಾರೇಶ್ವರ್, ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾ ಸಂಸ್ಥೆಯ ಸಿಇಓ ವಿನಾಯಕ್ ಗೋಡ್ಸೆ ಉಪಸ್ಥಿತರಿದ್ದರು‌.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...