ಕೇಂದ್ರ ₹22.50 ಬೆಲೆಗೆ ಅಕ್ಕಿ ಕೊಟ್ಟರೂ ಖರೀದಿಸದ ರಾಜ್ಯ ಸರ್ಕಾರ: ಸಚಿವ ಪ್ರಲ್ಹಾದ ಜೋಶಿ ಆರೋಪ

Date:

ಕೇಂದ್ರ ಸರ್ಕಾರ ಈಗ ರಾಜ್ಯಕ್ಕೆ ₹22.50 ಬೆಲೆಗೆ ಅಕ್ಕಿ ಕೊಟ್ಟು ವಾರ್ಷಿಕ ₹2,280 ಕೋಟಿ ಉಳಿಸಿಕೊಡಲು ಮುಂದಾದರೆ ರಾಜ್ಯ ಸರ್ಕಾರವೇ ಇದಕ್ಕೆ ಸಿದ್ಧವಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.

“ರಾಜ್ಯದ ಜನತೆಗೆ 10 ಕೆಜಿ ಅಕ್ಕಿಯೂ ಇಲ್ಲ, 5 ಕೆಜಿಯ ದುಡ್ದೂ ಲಭಿಸುತ್ತಿಲ್ಲ” ಎಂಬ ಮಾದ್ಯಮಗಳ ವರದಿಗೆ ಕೇಂದ್ರ ಆಹಾರ ಸಚಿವರು, ಸಾಮಾಜಿಕ ಜಾಲತಾಣ X ಖಾತೆಯಲ್ಲಿ ಹೀಗೆ ಪ್ರತಿಕ್ರಿಯಿಸಿದ್ದಾರೆ.

“ರಾಜ್ಯ ಸರ್ಕಾರ ₹34ರ ದರದಲ್ಲಿ ಅಕ್ಕಿ ಖರೀದಿಸಬೇಕಾಗುತ್ತದೆ. ಆದರೆ, ಕೇಂದ್ರ ಸರ್ಕಾರ ₹10 ಕಡಿಮೆ ಮಾಡಿ ಕೇವಲ ₹22.50 ಬೆಲೆಗೆ ಕೊಡುತ್ತೇವೆಂದರೂ ಖರೀದಿಸಲು ಮುಂದೆ ಬಂದಿಲ್ಲ. ಕೇಂದ್ರದಿಂದ ₹22.50 ಗೆ ಅಕ್ಕಿ ಖರೀದಿಸಿದಲ್ಲಿ ರಾಜ್ಯ ಸರ್ಕಾರಕ್ಕೆ ವಾರ್ಷಿಕ ₹2,280 ಕೋಟಿ ಉಳಿತಾಯವಾಗುತ್ತದೆ. ಆದರೆ, ಇದಕ್ಕೆ ಮುಂದಾಗದ ಸಿದ್ದರಾಮಯ್ಯ ಸರ್ಕಾರ ಜಾಣ ಕುರುಡುತನ ಪ್ರದರ್ಶಿಸುತ್ತಿದೆ” ಎಂದು ಜೋಶಿ ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯಕ್ಕೆ ಎಷ್ಟು ಬೇಕಾದರೂ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂಬುದನ್ನು ಹೇಳಿದ್ದೇವೆ. ಹಾಗಿದ್ದರೂ ಸಿದ್ದರಾಮಯ್ಯ ಸರ್ಕಾರ ಕೇಂದ್ರದಿಂದ ಅಕ್ಕಿ ಖರೀದಿಸಲು ಸಿದ್ಧವಿದ್ದಂತಿಲ್ಲ. ರಾಜ್ಯದ ಜನತೆಗೆ ಗ್ಯಾರಂಟಿಗಳ ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ, ಯಾವುದನ್ನೂ ಸರಿ ನೀಡುತ್ತಿಲ್ಲ. ಅಕ್ಕಿ ಬದಲು ನೀಡುತ್ತಿದ್ದ ಹಣ, ಗೃಹಲಕ್ಷ್ಮಿ ಹಣ ನೀಡದೆ ರಾಜ್ಯದ ಜನತೆಗೆ ಗ್ಯಾರಂಟಿ ಮೋಸ ಮಾಡಿದೆ” ಎಂದು ಟೀಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು

“ಮುಂದಾಲೋಚನೆ ಇಲ್ಲದ ಅವೈಜ್ಞಾನಿಕ ರೀತಿಯ ಯೋಜನೆಗಳ ಘೋಷಣೆ, ಅನುಷ್ಠಾನದಿಂದಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ರಾಜ್ಯದ ಬೊಕ್ಕಸವನ್ನು ಬರಿದು ಮಾಡಿದೆ. ಇತ್ತ, ಜನರಿಗೆ ಬೆಲೆ ಏರಿಕೆಯ ಬರೆ ಎಳೆಯುತ್ತಿದೆ. ಈ ಸರ್ಕಾರಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ” ಎಂದಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಏರಿದಾಗ ಸರ್ಕಾರ ಎಷ್ಟೇ ಮನವಿ ಮಾಡಿದರು ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರವು ಅಕ್ಕಿ ನೀಡಲು ನಿರಾಕರಿಸಿತ್ತು. ಈ ಬಗ್ಗೆ ಕೇಂದ್ರದ ಧೋರಣೆ ಖಂಡಿಸಿ ಕಾಂಗ್ರೆಸ್‌ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು. ಕೇಂದ್ರ ಸರ್ಕಾರದ ಕಡೆಯಿಂದ ಸ್ಪಂದನೆಯೇ ಸಿಗದಿದ್ದಾಗ ಕೊನೆಗೆ ರಾಜ್ಯ ಸರ್ಕಾರ ಅಕ್ಕಿ ಕೊರತೆ ಸರಿದೂಗಿಸಲು ತಲಾ ಐದು ಕೆಜಿ ಅಕ್ಕಿ ಬದಲು ಹಣ ವಿತರಿಸಲು ಆರಂಭಿಸಿತು. ತಲಾ ಒಂದು ಕೆಜಿಗೆ 34 ರೂಪಾಯಿಯಂತೆ 170 ರೂಪಾಯಿ ಖಾತೆಗೆ ಸರ್ಕಾರ ನೀಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...