ಗ್ಯಾರಂಟಿಗಳ ಕಾರಣದಿಂದ ತಲಾ ಆದಾಯದಲ್ಲಿ ದೇಶದಲ್ಲೇ ರಾಜ್ಯ ನಂಬರ್ ಒನ್ : ಸಿದ್ದರಾಮಯ್ಯ

Date:

ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

“ಕ್ಷೇತ್ರದ ಜನಪರ ಅಭಿವೃದ್ಧಿ ಕೆಲಸ ಮಾಡುವುದರಲ್ಲೇ ಇರಲಿ, ವಿಧಾನಸಭೆಯಲ್ಲಿ ಪಕ್ಷ ಮತ್ತು ಸರ್ಕಾರದ ಜನಪರ ಕಾರ್ಯಗಳನ್ನು ಸಮರ್ಥವಾಗಿ ಮಂಡಿಸುವುದರಲ್ಲೂ ಮುಂದಿದ್ದಾರೆ. ನಾಲ್ಕು ಬಾರಿ ಶಾಸಕರಾಗಿರುವ ಶಿವಲಿಂಗೇಗೌಡರು ಮುಂದಿನ ಚುನಾವಣೆಯಲ್ಲೂ ಗೆಲ್ಲುವುದು ಶತಸಿದ್ಧ” ಎಂದು ಭರವಸೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

148 ಕೋಟಿ ವೆಚ್ಚದಲ್ಲಿ 10 ಕೆರೆಗಳನ್ನು ತುಂಬಿಸುವ, ಕುಡಿಯುವ ನೀರು ಕೊಡುವ ಪುಣ್ಯದ ಕೆಲಸವನ್ನು ಶಿವಲಿಂಗೇಗೌಡರು ಮಾಡಿದ್ದಾರೆ ಎಂದು ವಿವರಿಸಿದರು.

ತಲಾ ಆದಾಯದಲ್ಲಿ ರಾಜ್ಯ ನಂಬರ್ ಒನ್

“ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ಇಡಿ ದೇಶದಲ್ಲಿ ನಂಬರ್ ಒನ್ ಆಗಿದೆ. ಇದಕ್ಕೆ ಪ್ರಮುಖ ಕಾರಣ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿರುವುದು. ಕೊಳ್ಳುವ ಶಕ್ತಿ ಹೆಚ್ಚಾಗಲು ನಮ್ಮ ಗ್ಯಾರಂಟಿ ಯೋಜನೆಗಳು ಪ್ರಮುಖ ಕಾರಣ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥ ಆಗೋದಿಲ್ಲ. ಅದಕ್ಕೇ ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು, ಅಪಪ್ರಚಾರ ಮಾಡುತ್ತಿದ್ದಾರೆ. ರಾಜಕೀಯ ಪ್ರೇರಿತ ಸುಳ್ಳುಗಳನ್ನು ಹೇಳಿ ರಾಜ್ಯದ ಜನರ ದಾರಿ ತಪ್ಪಿಸುವ ಯತ್ನ ಮಾಡಿದರೂ ರಾಜ್ಯದ ಜನತೆ ಯಾಮಾರುವುದಿಲ್ಲ” ಎಂದರು.

“ಸರ್ಕಾರದ ಸಾಧನಾ ಸಮಾವೇಶದಲ್ಲಿ ಲಕ್ಷ ಲಕ್ಷ ಜನ ಫಲಾನುಭವಿಗಳು ಸೇರಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಇದು ನುಡಿದಂತೆ ನಡೆದ ನಮ್ಮ ಸರ್ಕಾರದ ಸಾಧನೆ. ನಾವು ಅಭಿವೃದ್ಧಿ ಯೋಜನೆಗಳಿಗೆ 1.20 ಲಕ್ಷ ಕೋಟಿ ಖರ್ಚು ಮಾಡುವುದರ ಜೊತೆಗೆ ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ಖರ್ಚು ಮಾಡಿ ಜನರ ಮನೆ ಬಾಗಿಲಿಗೆ ಅಭಿವೃದ್ಧಿ ಕಾರ್ಯಗಳನ್ನು ತಲುಪಿಸಿದ್ದೇವೆ” ಎಂದು ವಿವರಿಸಿದರು.

ಶಿವಲಿಂಗೇಗೌಡರಿಗೆ ರಾಜಕೀಯ ಭವಿಷ್ಯವಿದೆ: ಮಂತ್ರಿಯಾಗುವ ಅರ್ಹತೆ ಹೊಂದಿದ್ದಾರೆ: ಸಿಎಂ

“ಶಿವಲಿಂಗೇಗೌಡರಿಗೆ ರಾಜಕೀಯ ಭವಿಷ್ಯವಿದೆ. ಮಂತ್ರಿಯಾಗುವ ಎಲ್ಲಾ ಅರ್ಹತೆ ಹೊಂದಿದ್ದಾರೆ. ಜೊತೆಗೆ ಕ್ಷೇತ್ರದ ಜನರ ಆಶೀರ್ವಾದವೂ ಗಟ್ಟಿಯಾಗಿದೆ. ಈ ಕಾರಣಕ್ಕೇ ನಾಲ್ಕು ಬಾರಿ ಗೆದ್ದಿರುವ ಶಿವಲಿಂಗೇಗೌಡರು ಮುಂದಿನ ಬಾರಿಯೂ ಗೆದ್ದು ಬರುತ್ತಾರೆ. ಆದರೆ ಕೆಲವೊಂದು ರಾಜಕೀಯ ಸಂಗತಿಗಳನ್ನು ಬಹಿರಂಗವಾಗಿ ಚರ್ಚಿಸಲು ಸಾಧ್ಯವಿಲ್ಲ” ಎಂದರು.

ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ

ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಹಾಸನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಹಾಸನ ಮಹಾನಗರ ಪಾಲಿಕೆಗೆ ಅನುದಾನದ ಲಭ್ಯತೆ ಬಗ್ಗೆ ಪರಿಶೀಲನೆ

ಆರ್ಥಿಕ ಇಲಾಖೆ ಅಧೀನ ಕಾರ್ಯದರ್ಶಿಗಳು ಹಾಸನ ಮಹಾನಗರ ಪಾಲಿಕೆಗೆ ಇನ್ನೂ ಮೂರು ವರ್ಷ ಯಾವುದೇ ಅನುದಾನ ಅಥವಾ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಿಲ್ಲ ಎಂದು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...