ನೇಕಾರರಿಗೆ ಉದ್ಯೋಗ ಒದಗಿಸಲು ಕ್ರಮ: ಜವಳಿ ಸಚಿವ ಶಿವಾನಂದ ಪಾಟೀಲ

Date:

ನೇಕಾರರಿಗೆ ಉದ್ಯೋಗ ನೀಡಲು ರಾಜ್ಯ ಸರ್ಕಾರ ಹಲವು ಉಪಕ್ರಮಗಳನ್ನು ಕೈಗೊಂಡಿದ್ದು, ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ಗಳು, ಆರೋಗ್ಯ ಕೇಂದ್ರಗಳಿಗೆ ಬೆಡ್‌ಶೀಟ್‌ ಹಾಗೂ ಟವೆಲ್‌ಗಳನ್ನು ಪೂರೈಕೆ ಮಾಡಲು ಬೇಡಿಕೆ ಪಡೆಯಲಾಗುತ್ತಿದೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ ವಿಧಾನಸಭೆಗೆ ತಿಳಿಸಿದ್ದಾರೆ.

ಸಿದ್ದು ಸವದಿ ಅವರ ಗಮನ ಸೆಳೆಯುವ ಸೂಚನೆ ನಿಯಮ 73ರ ವಿಷಯಕ್ಕೆ ಉತ್ತರಿಸಿದ ಸಚಿವರು, ನೇಕಾರರಿಗೆ ನೆರವಾಗಲು ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. 2025-26ನೇ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಣ ಇಲಾಖೆಯ ಸಮವಸ್ತ್ರಕ್ಕೆ ಅಗತ್ಯವಾದ 21.15 ಲಕ್ಷ ಮೀಟರ್ ಬಟ್ಟೆಯನ್ನು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ 3,567 ನೋಂದಾಯಿತ ನೇಕಾರರಿಂದ ತಯಾರಿಸಿ ಪೂರೈಕೆ ಮಾಡಲಾಗುವುದು” ಎಂದು ಹೇಳಿದರು.

“ವಿದ್ಯಾವಿಕಾಸ ಸಮವಸ್ತ್ರ ಸರಬರಾಜಿಗೆ ಅಗತ್ಯ ಒಟ್ಟು ಬಟ್ಟೆಯ ಪ್ರಮಾಣಕ್ಕೆ ಅನುಗುಣವಾಗಿ ಅಲ್ಲಿನ ಉಪಕೇಂದ್ರಗಳಲ್ಲಿ ಎಲ್ಲ ನೇಕಾರರಿಗೆ ನಿರಂತರ ನೂಲು ಸರಬರಾಜು ಮಾಡುತ್ತಿದ್ದು, ನೇಕಾರರು ನೇಯುವ ಬಟ್ಟೆಗೆ ನಿಗದಿತ ಪರಿವರ್ತನಾ ಶುಲ್ಕ ಪಾವತಿ ಮಾಡಲಾಗುವುದು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮವು ಬಾಗಲಕೋಟ ಜಿಲ್ಲೆಯ ತೇರದಾಳ ವ್ಯಾಪ್ತಿಯ ರಬಕವಿ, ಬನಹಟ್ಟಿ, ತೇರದಾಳ, ಚಿಮ್ಮಡ, ಕೆಂಗೇರಿಮಡಿ, ಮಹಾಲಿಂಗಪುರ, ಹೊಸೂರು ಮತ್ತು ನಾವಲಗಿಯಲ್ಲಿ ಉಪಕೇಂದ್ರಗಳನ್ನು ಹೊಂದಿದ್ದು, ಈ ಕೇಂದ್ರಗಳಲ್ಲಿ ವಿದ್ಯಾ ವಿಕಾಸ ಯೋಜನೆಯ ಸಮವಸ್ತ್ರ ಬಟ್ಟೆ ತಯಾರಿಸಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2024-25ನೇ ಸಾಲಿನಲ್ಲಿ 21 ಸಹಕಾರ ಸಂಘ ಹಾಗೂ ಸಹಕಾರ ಬ್ಯಾಂಕುಗಳ ಮೂಲಕ 752 ನೇಕಾರರಿಗೆ ಒಟ್ಟು 59.31 ಲಕ್ಷ ರೂ. ಬಡ್ಡಿ ಸಹಾಯಧನ ಬಿಡುಗಡೆ ಮಾಡಲಾಗಿದೆ. ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷೀಕ ಐದು ಸಾವಿರ ರೂ.ಗಳನ್ನು ಡಿಬಿಟಿ ಮೂಲಕ ಪಾವತಿಸಲಾಗುತ್ತಿದೆ. ಕೈಮಗ್ಗ ವಿಕಾಸ ಯೋಜನೆಯಡಿ ಕೈಮಗ್ಗ ಮತ್ತು ಅಗತ್ಯ ಸಲಕರಣೆಗಳನ್ನು ಖರೀದಿಸಲು ಘಟಕ ವೆಚ್ಚದ ಪ್ರತಿಶತ 50ರಷ್ಟು ಸಹಾಯಧನ ಒದಗಿಸಲಾಗುತ್ತಿದೆ” ಎಂದು ಹೇಳಿದರು.

“ಕಚ್ಚಾ ಮಾಲ್ ಖರೀದಿ ಮೇಲೆ ಕೈಮಗ್ಗ ಸಹಕಾರ ಸಂಘಗಳಿಗೆ ಪ್ರತಿ ಕೆಜಿಗೆ 15‌ ರೂ. ಸಹಾಯಧನ ನೀಡಲಾಗುವುದು. ನೇಕಾರಿಕೆಗೆ ಸಹಕಾರ ಸಂಘ ಮತ್ತು ಸಹಕಾರ ಬ್ಯಾಂಕುಗಳಿಂದ ಪಡೆಯುವ ಸಾಲಕ್ಕೆ ಶೂನ್ಯ ಹಾಗೂ ಪ್ರತಿಶತ ಒಂದರ ಬಡ್ಡಿ ದರದಲ್ಲಿ 2 ಲಕ್ಷ ಹಾಗೂ ಪ್ರತಿಶತ 3 ರ ಬಡ್ಡಿ ದರದಲ್ಲಿ 2 ರಿಂದ 5 ಲಕ್ಷದವರೆಗೆ ಸಾಲ ನೀಡಲಾಗುವುದು” ಎಂದು ವಿವರಿಸಿದರು.

“ಕೈಮಗ್ಗ ಉತ್ಪನ್ನಗಳ ಮಾರಾಟಕ್ಕಾಗಿ ರಾಷ್ಟ್ರೀಯ ಹಾಗೂ ರಾಜ್ಯ ಕೈಮಗ್ಗ ಮೇಳ ಆಯೋಜಿಸಲಾಗುತ್ತಿದೆ. ಇಲಕಲ್ ಸೀರೆ, ಗುಳೇದಗುಡ್ಡ ಖಣ, ಮೊಳಕಾಲ್ಮುರು ರೇಷ್ಮೆ ಸೀರೆ ಮತ್ತು ಉಡುಪಿಯ ಕಾಟನ್ ಸೀರೆಗಳನ್ನು ಜಿಯಾಗ್ರಫಿಕಲ್ ಇಂಡಿಕೇಷನ್ ಕಾಯ್ದೆ ಅಡಿಯಲ್ಲಿ ನೋಂದಾಯಿಸಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...