ಮಧ್ಯಪ್ರದೇಶದಲ್ಲಿ ಕಲ್ಲು ತೂರಾಟ | ಪೊಲೀಸರು ಸೇರಿ ಐವರಿಗೆ ಗಂಭೀರ ಗಾಯ, ಬಿಜೆಪಿ ಶಾಸಕ ವಶಕ್ಕೆ

Date:

ದೇವಸ್ಥಾನದ ಜಾಗವನ್ನು ಅತಿಕ್ರಮಿಸಿ ನಿರ್ಮಿಸಿದ ಗೋಡೆಯನ್ನು ತೆರವುಗೊಳಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಕಲ್ಲು ತೂರಾಟ ನಡೆದಿರುವ ಘಟನೆ ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ದೇವ್ರಾ ಗ್ರಾಮದಲ್ಲಿ ನಡೆದಿದೆ.

ಪರಿಸ್ಥಿತಿ ತಿಳಿಗೊಳಿಸಲು ಬಂದಿದ್ದ ಪೊಲೀಸರಿಗೂ ಕಿಡಿಗೇಡಿಗಳು ಕಲ್ಲು ಹೊಡೆದಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಜೆಪಿ ಶಾಸಕ ಪ್ರದೀಪ್ ಪಟೇಲ್ ಪೊಲೀಸ್‌ ವಶಕ್ಕೆ
ದೇವಸ್ಥಾನದ ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಹಾಗಾಗಿ ಕ್ರಮ ಕೈಗೊಳ್ಳುವಂತೆ ಆ ಕ್ಷೇತ್ರದ ಶಾಸಕರು ಸ್ಥಳೀಯ ಆಡಳಿತಕ್ಕೆ ಸೂಚಿಸಿದ್ದರು. ಆದರೆ, ಸ್ಥಳೀಯ ಅಧಿಕಾರಿಗಳು ಕ್ರಮಕೈಗೊಳ್ಳದಿದ್ದಾಗ ಖುದ್ದು ಬಿಜೆಪಿ ಶಾಸಕ ಪ್ರದೀಪ್ ಪಟೇಲ್ ಅವರು ತಮ್ಮ ಬೆಂಬಲಿಗರೊಂದಿಗೆ ದೇವಸ್ಥಾನದ ಬಳಿ ಬಂದಿದ್ದರು. ಇದೇ ಸಂದರ್ಭದಲ್ಲಿ ಶಾಸಕರು ಬೆಂಬಲಿಗರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿದೆ. ಕೆಲವು ಕಿಡಿಗೇಡಿಗಳು ಗುಡಿಸಲಿಗೆ ಬೆಂಕಿ ಹಚ್ಚಿದ್ದಾರೆ.

ಮೌಗಂಜ್‌ ಎಸ್‌ಪಿ ರಸ್ನಾ ಠಾಕೂರ್ ಈ ಬಗ್ಗೆ ಮಾತನಾಡಿದ್ದು, “ದೇವ್ರಾ ಗ್ರಾಮದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಹಾಗೂ ಶಾಂತಿ ಕಾಪಾಡಲು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...