ಬಿಎಸ್‌ವೈ ಮನೆ ಮೇಲೆ ಕಲ್ಲು ತೂರಾಟ; ಕಾಂಗ್ರೆಸ್ ಕೈವಾಡವಿದೆ ಎಂದ ಸಿಎಂ ಬೊಮ್ಮಾಯಿ

Date:

  • ಸಮಾಜದ ಮುಖಂಡರೊಂದಿಗೆ ಚರ್ಚಿಸುವೆ ಎಂದ ಬಿಎಸ್‌ವೈ
  • ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದ ತೀವ್ರ ವಿರೋಧ

ಯಡಿಯೂರಪ್ಪ ಅವರ ಮನೆ‌ ಮೇಲೆ ಕಲ್ಲು ತೂರಾಟ ಮಾಡಿದ್ದು ಅತ್ಯಂತ ನೋವುಂಟು ಮಾಡಿದೆ. ಈ ಘಟನೆಯ ಹಿಂದೆ ಕಾಂಗ್ರೆಸ್ ಪಕ್ಷದ ಕೈವಾಡವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದೆ. ಪ್ರತಿಭಟನಾಕಾರರು ಯಡಿಯೂರಪ್ಪ ಮನೆಯ ಕಿಟಕಿ ಗಾಜು ಒಡೆದು ಹಾಕಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಸವರಾಜ ಬೊಮ್ಮಾಯಿ, “ಯಡಿಯೂರಪ್ಪ ಅವರು ಎಲ್ಲ ಸಮುದಾಯಗಳನ್ನು ಅತ್ಯಂತ ಪ್ರೀತಿ ವಿಶ್ವಾಸದಿಂದ ತೆಗೆದುಕೊಂಡು ಹೋದವರು. ತಾಂಡಾ ಅಭಿವೃದ್ಧಿ ನಿಗಮವನ್ನು ಪ್ರಾರಂಭ ಮಾಡಿದ್ದು ಅವರು. ಕೆಲವರ ತಪ್ಪು ಕಲ್ಪನೆಯಿಂದ ಮತ್ತು ಕೆಲವರ ಪ್ರಚೋದನೆಯಿಂದ ಅವರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಾಡಾಳ್‌ ವಿರೂಪಾಕ್ಷಪ್ಪರನ್ನು ತನಿಖಾಧಿಕಾರಿ ಮುಂದೆ ಹಾಜರುಪಡಿಸಿದ ಲೋಕಾಯುಕ್ತ ಪೊಲೀಸ್‌

ವಿಪಕ್ಷಗಳ ಪ್ರಚೋದನೆಯಿಂದ ಕಲ್ಲು ತೂರಾಟ ನಡೆದಿರುವುದಾಗಿ ಆರೋಪಿಸಿದ ಬಸವರಾಜ ಬೊಮ್ಮಾಯಿ, “ವಿರೋಧ ಪಕ್ಷಗಳ ಪ್ರಚೋದನೆಯಿಂದಲೇ ಈ ಘಟನೆ ಇದೆ. ನಮ್ಮ ನೀತಿಯಿಂದ ಇದು ಜರುಗಿಲ್ಲ.‌ ಎಲ್ಲರಿಗೂ ನ್ಯಾಯ ಕೊಟ್ಟಿದ್ದೇವೆ. ಇದು ರಾಜಕೀಯ ಪ್ರೇರಿತ ಘಟನೆ” ಎಂದಿದ್ದಾರೆ.

“ಯಾವ ವರದಿಯಲ್ಲಿ ಈ ಬಗ್ಗೆ ಆತಂಕ ಇತ್ತೋ, ಅದನ್ನು ನಾವು ಒಪ್ಪಿಕೊಂಡಿಲ್ಲ. ನಾವು ಕ್ಯಾಬಿನೆಟ್ ಉಪಸಮಿತಿ ವರದಿಯಂತೆ ಶೇ. 4.5ಕ್ಕೆ ಹೆಚ್ಚಳ ಮಾಡಿದ್ದೇವೆ. ಅವರ ಆತಂಕ ದೂರ ಮಾಡಿ ಹೆಚ್ಚಿನ ಮೀಸಲಾತಿ ಕೊಟ್ಟಿದ್ದೇವೆ. ರಾಜಕೀಯ ಪ್ರಚೋದನೆ ಮಾಡುವ ಕೆಲಸ ನಿಲ್ಲಬೇಕು. ಈ ಸಂಬಂಧ ಯಡಿಯೂರಪ್ಪ ಅವರಿಗೆ ಸಂಬಂಧವೇ ಇಲ್ಲ. ಅವರಿಗೆ ಹೀಗೆ ಮಾಡಿದ್ದು ನಿಜಕ್ಕೂ ನೋವು ತರಿಸಿದೆ” ಎಂದು ಹೇಳಿದ್ದಾರೆ.

ತಮ್ಮ ನಿವಾಸದ ಮೇಲಿನ ಕಲ್ಲು ತೂರಾಟದ ಕುರಿತು ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, “ಬಂಜಾರ ಸಮುದಾಯದ ಜನರು ಯಾರದೋ ತಪ್ಪು ಗ್ರಹಿಕೆಯಿಂದ ನನ್ನ ಮನೆ ಮೇಲೆ ದಾಳಿ ಮಾಡಿದ್ದಾರೆ. ಘಟನೆಯ ಸಂಬಂಧ ಯಾರನ್ನೂ ಬಂಧಿಸದಂತೆ ಪೊಲೀಸ್‌ ವರಿಷ್ಠಾಧಿಕಾರಿಗೆ ಮನವಿ ಮಾಡಿದ್ದೇನೆ. ನಾನು ಶಿಕಾರಿಪುರಕ್ಕೆ ಹೋಗಿ ಸಮಾಜದ ಮುಖಂಡರ ಜೊತೆಗೆ ಚರ್ಚಿಸುತ್ತೇನೆ. ಅವರ ಸಮಸ್ಯೆ ಪರಿಹರಿಸಲು ಯತ್ನಿಸುತ್ತೇನೆ” ಎಂದಿದ್ದಾರೆ.

“ಕೆಲವು ತಪ್ಪು ಗ್ರಹಿಕೆಯಿಂದ ನಡೆದಿರುವಂತಿದೆ. ಘಟನೆಯ ಸಂಬಂಧ ಯಾರನ್ನೂ ಬಂಧಿಸದಂತೆ ಪೊಲೀಸ್‌ ವರಿಷ್ಠಾಧಿಕಾರಿಗೆ ಮನವಿ ಮಾಡಿದ್ದೇನೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...