ರಾಜ್ಯಪಾಲರ ಮೂಲಕ ಕೇಂದ್ರದ ಪ್ರಾಯೋಜಿತ ಪ್ರಜಾಪ್ರಭುತ್ವ ಕಗ್ಗೊಲೆ ನಿಲ್ಲಲಿ: ಪ್ರಜ್ಞಾವಂತರ ಆಗ್ರಹ

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹೂಡಿರುವ ಸಂವಿಧಾನ ವಿರೋಧಿ ಬಿಜೆಪಿ ಮತ್ತು ರಾಜ್ಯಪಾಲರ ಕುತಂತ್ರಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದು ಪ್ರಜ್ಞಾವಂತ ವಲಯ ಹೇಳಿದೆ.

ರಾಜ್ಯಪಾಲರ ನಡೆ ಖಂಡಿಸಿ ಸಹಿ ಚಳವಳಿ ನಡೆಸಿರುವ ಪ್ರಜ್ಞಾವಂತ ವಲಯ, “ರಾಜ್ಯಪಾಲರ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡು, ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿರುವ ಸರ್ಕಾರವನ್ನು ರಾಜಕೀಯ ಕುತಂತ್ರದಿಂದ ಅಸ್ಥಿರಗೊಳಿಸಿ ಕೇಂದ್ರ ಸರ್ಕಾರ ಮುಂದಾಗಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರದ ನಡೆಯನ್ನು ಪ್ರಜ್ಞಾವಂತರಾದ ನಾವು ಒಕ್ಕೊರಲಿನಿಂದ ಖಂಡಿಸುತ್ತೇವೆ” ಎಂದು ಸುಮಾರು 200 ಹೆಚ್ಚು ಜನ ಸಾಹಿತಿಗಳು, ಪ್ರಾಧ್ಯಾಪಕರು, ಚಿಂತಕರು, ಶಿಕ್ಷಣ ತಜ್ಞರು ಹಾಗೂ ಪತ್ರಕರ್ತರು ಸಹಿ ಮಾಡಿದ್ದಾರೆ.

“ತಪ್ಪು ಮಾಡಿದವರಿಗೆ ನೆಲದ ಕಾನೂನಿನ ರೀತಿ ಶಿಕ್ಷೆಯಾಗುವುದನ್ನು ಒಪ್ಪುತ್ತಲೇ,ಅದನ್ನು ರಾಜಕೀಯವಾಗಿ ಬಳಸಿಕೊಂಡು ವಾಮ ಮಾರ್ಗದಿಂದ ಚುನಾಯಿತ ಸರ್ಕಾರಗಳನ್ನು ಬೀಳಿಸುವ ಎಲ್ಲ ಬಗೆಯ ಹುನ್ನಾರಗಳನ್ನು ಬಹಿರಂಗಗೊಳಿಸಬೇಕಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಭ್ರಷ್ಟಾಚಾರ ಮುಕ್ತ ಜನಪರ ಆಡಳಿತ ನಡೆಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದು ಇಂದಿನ ತುರ್ತು ಅಗತ್ಯವಾಗಿದ್ದು , ಸಂವಿಧಾನ ಉಳಿಸಿ ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಏಕೈಕ ಮಾರ್ಗವಾಗಿದೆ ಎಂದು ನಾವು ಬಲವಾಗಿ ನಂಬಿದ್ದೇವೆ” ಎಂದು ಪ್ರಜ್ಞಾವಂತ ವಲಯ ಹೇಳಿದೆ.

“ಎಲ್ಲ ಬಗೆಯ ಭ್ರಷ್ಟಾಚಾರಣಕ್ಕೆ ಕಾರಣವಾಗಿರುವ ಭ್ರಷ್ಟ ಚುನಾವಣಾ ವ್ಯವಸ್ಥೆಯನ್ನು ಸಮಗ್ರವಾಗಿ ಬದಲಾಯಿಸಿ ಸುಧಾರಣೆಗಳನ್ನು ತರಲು ಸರ್ಕಾರಗಳು ಕ್ರಮವಹಿಸಬೇಕು” ಎಂದು ಇದೇ ವೇಳೆ ಆಗ್ರಹಿಸಲಾಗಿದೆ.

ಪ್ರೊ. ನಿರಂಜನಾರಾಧ್ಯ ವಿ ಪಿ ಬೆಂಗಳೂರು, ಬಸವರಾಜ ಸೂಳಿಭಾವಿ ಗದಗ, ರಂಜಾನ್ ದರ್ಗಾ ಧಾರವಾಡ, ಡಾ. ಎಚ್ ಎಸ್ ಅನುಪಮಾ ಕವಲಕ್ಕಿ, ನಾ ದಿವಾಕರ ಮೈಸೂರ, ಕೆ.ಶ್ರೀನಾಥ್ ಬೆಂಗಳೂರ, ಡಿ.ಉಮಾಪತಿ ದೆಹಲಿ, ಡಾ ವಿಜಯಾ ಬೆಂಗಳೂರ, ಎಂ.ಅಬ್ದುಲ್ ರೆಹಮಾನ್ ಪಾಷ ಬೆಂಗಳೂರ, ಜಿ ಪಿ ಬಸವರಾಜು ಮೈಸೂರ, ಬಿ. ಸುರೇಶ ಬೆಂಗಳೂರ, ಕೆ. ಪಿ. ಸುರೇಶ್ ಬೆಂಗಳೂರ ಸೇರಿದಂತೆ ನೂರಾರು ಜನರು ಸಹಿ ಚಳವಳಿಯಲ್ಲಿ ಭಾಗಿಯಾಗಿದ್ದಾರೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

    ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

    ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

    ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

    ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

    ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...