ಕಾಂಗ್ರೆಸ್‌ ವಿರುದ್ಧ ‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟ: ಡಾ. ಸಿ ಎನ್ ಅಶ್ವತ್ಥನಾರಾಯಣ

Date:

  • ಜು. 4ರಂದು ಬಿಎಸ್ವೈ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ
  • ಸದನದ ಒಳಗೆ ಬಿಜೆಪಿ ಶಾಸಕರಿಂದ ಹೋರಾಟ ನಡೆಯಲಿದೆ

ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ತಮ್ಮ ಆಶ್ವಾಸನೆ ಈಡೇರಿಸದೆ ಮಾತಿಗೆ ತಪ್ಪಿದೆ. ಇದರ ವಿರುದ್ಧ ‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟಕ್ಕೆ ಬಿಜೆಪಿ ಮುಂದಾಗಿದೆ ಎಂದು ಮಾಜಿ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಅನುಷ್ಠಾನದ ವಿಚಾರದಲ್ಲಿ ಭಂಡತನ ತೋರುತ್ತಿದೆ. ಕಂಡಿಷನ್ ಇಲ್ಲದೆ ಗ್ಯಾರಂಟಿಗಳನ್ನು ಜಾರಿ ಮಾಡಲು ಆಗ್ರಹಿಸಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲಿದ್ದೇವೆ” ಎಂದು ಹೇಳಿದರು.

“ಶೇ. 50 ಕ್ಕಿಂತ ಹೆಚ್ಚು ವಿದ್ಯುತ್ ದರ ಏರಿಸಿದ್ದು, ಕೈಗಾರಿಕೆಗಳು, ಜನಸಾಮಾನ್ಯರು ವಿದ್ಯುತ್ ದರ ಏರಿಕೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ ಏರಿಕೆ ಮಾಡಿರುವ ವಿದ್ಯುತ್‌ ದರವನ್ನು ಕೂಡಲೇ ಇಳಿಕೆ ಮಾಡಬೇಕು. ಈ ಸರ್ಕಾರ ಬೆಲೆ ಏರಿಕೆ, ಭ್ರಷ್ಟಾಚಾರಕ್ಕೆ ಸಾಕ್ಷಿಯಾಗುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಅಧಿಕಾರಕ್ಕೆ ಬಂದಾಕ್ಷಣ ಅವುಗಳ ಅನುಷ್ಠಾನ ಮಾಡುವುದಾಗಿ ತಿಳಿಸಿತ್ತು. ಆದರೆ, ಅದನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ. ಗ್ಯಾರಂಟಿಗಳ ಅನುಷ್ಠಾನಕ್ಕೆ ಆಗ್ರಹಿಸಿ ಜುಲೈ 4ರಂದು ಹೋರಾಟ ರೂಪಿಸಲಾಗುತ್ತಿದೆ. ಅಂದು ಸದನದ ಹೊರಗೆ ಪಕ್ಷದ ಹಿರಿಯರಾದ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಸದನದ ಒಳಗೆ ಬಿಜೆಪಿ ಶಾಸಕರಿಂದ ಹೋರಾಟ ನಡೆಯಲಿದೆ” ಎಂದು ಮಾಹಿತಿ ನೀಡಿದರು.

“10 ಕೆಜಿ ಅಕ್ಕಿ ಈಗ 5 ಕೆಜಿಗೆ ಬಂದಿದೆ. ಈಗ 5 ಕೆಜಿ ಕೊಡಲು ಬಹಳ ಕಷ್ಟಪಡುತ್ತಿದ್ದಾರೆ. ಮಾತಿನಂತೆ 10 ಕೆಜಿ ಅಕ್ಕಿ ಕೊಡಿ. 200 ಯೂನಿಟ್ ಉಚಿತ ವಿದ್ಯುತ್ ಎಂದಿದ್ದರು. ಈಗ 200 ಯೂನಿಟ್ ಮಾಯವಾಗಿ 10 ತಿಂಗಳ ಸರಾಸರಿ ಮಾಡಿ ಹೆಚ್ಚುವರಿ ಶೇ. 10 ಕರೆಂಟ್ ಕೊಡುವ ಮಾತನಾಡುತ್ತಿದ್ದಾರೆ. ಎಲ್ಲರೂ ಇಲೆಕ್ಟ್ರಿಕ್ ಸ್ಟವ್ ಕೊಂಡುಕೊಂಡು ಕಾಯುತ್ತಿದ್ದಾರೆ. ಕಂಡಿಷನ್ ಇಲ್ಲದೆ 200 ಯೂನಿಟ್ ವಿದ್ಯುತ್ ನೀಡಬೇಕು” ಎಂದರು.

“ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮಹಿಳೆಗೆ 2 ಸಾವಿರ ರೂ. ಕೊಡುವುದಾಗಿ ಪ್ರಿಯಾಂಕಾ ಗಾಂಧಿ ಅವರೇ ಘೋಷಿಸಿದ್ದರು. ಈಗ ಮನೆಯೊಡತಿಗೆ ಮಾತ್ರ ಎನ್ನುವ ಮೂಲಕ ಮನೆಯಲ್ಲಿ ಜಗಳ ತಂದಿಡುವ ಕೆಲಸ ಮಾಡುತ್ತಿದ್ದಾರೆ. ಪ್ರತಿ ಮಹಿಳೆಗೂ ಹಣ ಕೊಡಿ” ಎಂದು ಒತ್ತಾಯಿಸಿದರು.

“2022-23ರಲ್ಲಿ ಪಾಸಾಗಿ ಉದ್ಯೋಗ ಸಿಗದವರು ಮಾತ್ರ ನಿರುದ್ಯೋಗಿಗಳೇ? ಹಿಂದಿನ ನಿರುದ್ಯೋಗಿಗಳನ್ನು ಪರಿಗಣಿಸಬೇಕಲ್ಲವೇ? ಚುನಾವಣೆ ವೇಳೆ ಇದೇ ಮಾತನ್ನು ಹೇಳಿದ್ದೀರಾ? ಪ್ರತಿಯೊಬ್ಬ ಪದವಿ ಪಡೆದು ನಿರುದ್ಯೋಗಿ ಆಗಿರುವವರಿಗೆ 3 ಸಾವಿರ ಮತ್ತು ಡಿಪ್ಲೊಮಾ ನಿರುದ್ಯೋಗಿಗಳಿಗೆ 1,500 ರೂ. ಭತ್ಯೆ ಕೊಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ವಿಪಕ್ಷ ನಾಯಕ ಸ್ಥಾನದ ಬಗ್ಗೆ ಕಾಂಗ್ರೆಸ್‌ ತಲೆ ಕೆಡಿಸಿಕೊಳ್ಳುವುದು ಬೇಡ; ಬಿಜೆಪಿ ತಿರುಗೇಟು

“ರಾಜ್ಯದಲ್ಲಿ ಶಕ್ತಿ ಯೋಜನೆ ಘೋಷಿಸಲಾಗಿದೆ. ಆದರೆ, ಸಾಕಷ್ಟು ಬಸ್ಸುಗಳಿಲ್ಲ. ಮೂರು ಮತ್ತೊಂದು ಬಸ್‍ಗಳಿವೆ. ಹಲವಷ್ಟು ರಿಪೇರಿಗೆ ಬಂದಿವೆ. ವಿದ್ಯಾರ್ಥಿಗಳಿಗೆ, ಕೆಲಸಕ್ಕೆ ಹೋಗುವವರಿಗೆ ಅನಾನುಕೂಲತೆ ಉಂಟಾಗಿದೆ. ಬೇಕಾಬಿಟ್ಟಿ ಘೋಷಣೆ ಮಾಡಿದ್ದಾರೆ. ಅವರಾಗಲೀ, ಅವರ ಕುಟುಂಬದವರಾಗಲೀ ಈ ಬಸ್‍ಗಳಲ್ಲಿ ಓಡಾಡಬೇಕಿಲ್ಲವಲ್ಲವೇ. ಜನರಿಗೆ ನರಕಯಾತನೆ ಆಗುತ್ತಿದೆ” ಎಂದು ಆರೋಪಿಸಿದರು.

“ವಿಪಕ್ಷ ನಾಯಕನ ನೇಮಕಾತಿ ಶೀಘ್ರವೇ ಆಗಲಿದೆ” ಎಂದ ಅವರು, “ಈ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿಗೆ ಹೇಳುವ ನೈತಿಕತೆ ಇಲ್ಲ. ವಿಪಕ್ಷ ನಾಯಕನ ಸ್ಥಾನಕ್ಕೆ ಯಾರೂ ಅರ್ಜಿ ಹಾಕುತ್ತಿಲ್ಲ, ಯಾಕೆಂದರೆ ಇದು ಕಾಂಗ್ರೆಸ್ ಪಕ್ಷವಲ್ಲ. ಅಂಥ ಸಂಸ್ಕೃತಿ ನಮ್ಮದಲ್ಲ” ಎಂದು ಪ್ರಶ್ನೆಗೆ ಉತ್ತರಿಸಿದರು.

“ನಮ್ಮದು ಕುಟುಂಬದ ಪಕ್ಷವಲ್ಲ. ಇದು ಜನರ ಪಕ್ಷ. ಜನರ ಭಾವನೆ, ಮಿಡಿತಗಳನ್ನು ಗಮನಿಸಿ ನಮ್ಮ ಪಕ್ಷ ಕೆಲಸ ಮಾಡುತ್ತಿದೆ. ಅವರಲ್ಲಿ ನಿವೃತ್ತಿ ಆಗುತ್ತೇನೆ ಎಂದವರು ಮುಖ್ಯಮಂತ್ರಿ ಆಗಿದ್ದಾರೆ. ಅವರಲ್ಲಿ ಎಷ್ಟು ಗುಂಪಿದೆ ನೋಡಿ. ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ, ವರ್ಗಾವಣೆ ದಂಧೆ ಶುರುವಾಗಿದೆ” ಎಂದು ಆರೋಪಿಸಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಮಹೇಶ್ ಟೆಂಗಿನಕಾಯಿ, ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷ ಮಂಜುನಾಥ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...