ಕಚೇರಿಗಳಿಗೆ ಅನಗತ್ಯ ಅಲೆದಾಟಕ್ಕೆ ಬ್ರೇಕ್; ಇನ್ನು ಮುಂದೆ ಮನೆಯಿಂದಲೇ ರಿಜಿಸ್ಟ್ರೇಷನ್: ಸಚಿವ ಕೃಷ್ಣ ಬೈರೇಗೌಡ

Date:

• ನೋಂದಣಿ ತಿದ್ದುಪಡಿ ವಿಧೇಯಕ-2024 ಮಂಡಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ
• ಎರಡೂ ಕಡೆಯವರ ಉಪಸ್ಥಿತಿಗೆ ವಿನಾಯಿತಿ; ತಿದ್ದುಪಡಿಯಲ್ಲಿ ಪೇಪರ್ ಖಾತಾ ನೋಂದಣಿಗೆ ತಡೆ

ನೋಂದಣಿ ಪ್ರಕ್ರಿಯೆಯಲ್ಲಿ ನಾಗರಿಕ ಸೇವೆಯನ್ನು ಮತ್ತಷ್ಟು ಸರಳ ಮತ್ತು ಜನಸ್ನೇಹಿಗೊಳಿಸುವ ಉದ್ದೇಶದಿಂದ ನೋಂದಣಿ ತಿದ್ದುಪಡಿ ವಿಧೇಯಕ-2024 ಮಂಡಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಬುಧವಾರ ವಿಧಾನಸಭೆಯಲ್ಲಿ ನೋಂದಣಿ ತಿದ್ದುಪಡಿ ವಿಧೇಯಕ-2024 ಅನ್ನು ಮಂಡಿಸಿ ಮಾತನಾಡಿದ ಅವರು, “ನೋಂದಣಿ ಕಚೇರಿಗಳಲ್ಲಿ ಜನಸಂದಣಿಯನ್ನು ನಿಯಂತ್ರಿಸುವ ಸಲುವಾಗಿ ಎರಡು ಮಹತ್ವದ ತಿದ್ದುಪಡಿಗಳನ್ನು ತರಲಾಗಿದೆ. ಆ ಪೈಕಿ ಮೊದಲ ತಿದ್ದುಪಡಿ ಆಸ್ತಿ ಮಾರಾಟಗಾರರು ಹಾಗೂ ಕೊಳ್ಳುವವರು ಇಬ್ಬರ ಉಪಸ್ಥಿತಿಯೂ ಇಲ್ಲದೆ ತಾವಿದ್ದಲ್ಲಿದಂಲೇ ತಾಂತ್ರಿಕವಾಗಿ ಆಸ್ತಿ ನೋಂದಣಿ ಮಾಡಿಸಿಕೊಳ್ಳಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಹಿಂದೆ ಉಪ ನೋಂದಣಾಧಿಕಾರಿ ಕಚೇರಿಗೆ ಎರಡೂ ಕಡೆಯವರ ಉಪಸ್ಥಿತಿ ಅನಿವಾರ್ಯವಾಗಿತ್ತು. ಹೀಗಾಗಿ ಸರ್ಕಾರಿ ಕಚೇರಿಯಲ್ಲಿ ಜನಸಂದಣಿ ಹೆಚ್ಚಾಗಿತ್ತು. ಎಲ್ಲರಿಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ಅಸಾಧ್ಯವಾಗಿತ್ತು. ಹೀಗಾಗಿ ಜನಸಾಮಾನ್ಯರು ಅನಗತ್ಯವಾಗಿ ಉಪ ನೋಂದಣಾಧಿಕಾರಿ ಕಚೇರಿಗೆ ಓಡಾಡುವುದನ್ನು ತಪ್ಪಿಸುವ ಸಲುವಾಗಿ ತಾಂತ್ರಿಕ ನೋಂದಣಿಗೆ ಅಂಕಿತ ಹಾಕಲಾಗಿದೆ” ಎಂದು ವಿವರಿಸಿದರು.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ), ಕರ್ನಾಟಕ ಹೌಸಿಂಗ್ ಬೋರ್ಡ್, ಸ್ಲಂ ಬೋರ್ಡ್ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಂತಹ ನಂಬಿಕಾರ್ಹ ಮೂಲಗಳ ಸಹಾಯದಿಂದ ನಾಗರಿಕರು ತಾಂತ್ರಿಕವಾಗಿಯೇ ಆಸ್ತಿ ನೋಂದಣಿ ಮಾಡಿಕೊಳ್ಳಬಹುದು. ಈ ಹೊಸ ಮಾದರಿ ಈಗಾಗಲೇ ಮಹಾರಾಷ್ಟ್ರದಲ್ಲಿ ಯಶಸ್ವಿಯಾಗಿದ್ದು, ಕರ್ನಾಟಕದಲ್ಲೂಸಹ ಜನರಿಗೆ ಉತ್ತಮ ಆಡಳಿತ ನೀಡಲು ಸಹಕಾರಿಯಾಗಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪೇಪರ್ ಖಾತಾ ನೋಂದಣಿಗೆ ತಡೆ:

ನೋಂದಣಿ ಪ್ರಕ್ರಿಯೆಯಲ್ಲಿ ಅಕ್ರಮ ಹಾಗೂ ಹಣ ಸೋರಿಕೆಯನ್ನು ತಡೆಯುವ ಸಲುವಾಗಿ ಪೇಪರ್ ಖಾತಾ ನೋಂದಣಿಗೆ ತಡೆಯೊಡ್ಡಲು ವಿಧೇಯಕದಲ್ಲಿ ತಿದ್ದುಪಡಿ ತರಲಾಗಿದೆ ಎಂದು ಸದನಕ್ಕೆ ಸಚಿವರು ಮಾಹಿತಿ ನೀಡಿದರು.

“ನಗರ ಭಾಗದಲ್ಲಿ ಪೇಪರ್ ಖಾತಾ ಮೂಲಕವೂ ನೋಂದಣಿ ನಡೆಸಲಾಗುತ್ತಿದೆ. ಅನೇಕ ಪ್ರಕರಣಗಳಲ್ಲಿ ನಕಲಿ ಪೇಪರ್ ಖಾತಾ ಬಳಸಿ ನೋಂದಣಿ ಮಾಡುತ್ತಿರುವುದು ತಿಳಿದುಬಂದಿದೆ. ಅಲ್ಲದೆ, ಈ ಹಿಂದಿನ ಅವಧಿಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ರೆವೆನ್ಯೂ ಲೇಔಟ್‌ಗಳಲ್ಲಿ ಮೂಲ ಮಾರ್ಗಸೂಚಿ ದರವನ್ನೇ ಇಳಿಸಿ ನೋಂದಣಿ ಮಾಡಲಾಗಿತ್ತು. ಪರಿಣಾಮ ಸರ್ಕಾರಕ್ಕೆ 400 ಕೋಟಿ ರೂ. ನಷ್ಟ ಉಂಟಾಗಿತ್ತು. ಇದಕ್ಕೆಲ್ಲ ಕಡಿವಾಣ ಹಾಕಲು ಈ ನಿರ್ಧಾರ ಮಾಡಲಾಗಿದೆ” ಎಂದು ವಿವರಿಸಿದರು.

ಇದನ್ನು ಓದಿದ್ದೀರಾ? ಮಾರ್ಚ್ 15ಕ್ಕೆ ಥಿಯೇಟರ್‌ಗೆ ಬರಲಿದೆ ಲಾಕ್‌ಡೌನ್ ಕಾಲದ ಕಥೆ ‘ಫೋಟೋ’

ಇನ್ನು ಮುಂದೆ ಇ-ಆಸ್ತಿ ಮೂಲಕ ಖಾತೆ ಆಗಿದ್ದರೆ ಮಾತ್ರ ನೋಂದಣಿ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೌಸಿಂಗ್ ಬೋರ್ಡ್ ಹಾಗೂ ಕಾವೇರಿ ಡೇಟಾಬೇಸ್‌ನಿಂದ ಅಸಲಿ ಖಾತಾ ಪರಿಶೀಲನೆ ನಡೆಸಿದ ನಂತರವೇ ನೋಂದಣಿ ಮುಂದುವರೆಯಲಿದೆ. ಆ ಮೂಲಕ ಇ-ಖಾತಾವನ್ನು ನೀಡಲಾಗುವುದು. ಇಂತಹ ಕ್ರಮಗಳಿಂದ ಅಕ್ರಮಗಳಿಗೂ ತಡೆಯೊಡ್ಡಿದಂತಾಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...