ಕಲ್ಲಡ್ಕ ಪ್ರಭಾಕರ ಭಟ್ ಭಾಷಣವನ್ನು ಬರಹ ರೂಪದಲ್ಲಿ ಸಲ್ಲಿಸಿ: ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಸೂಚನೆ

Date:

  • ಪ್ರಭಾಕರ್ ಭಟ್ ದ್ವೇಷ ಭಾಷಣ ವಿಡಿಯೋ ಪ್ರದರ್ಶನಕ್ಕೆ ಅವಕಾಶ ಕೊಡಿ: ಎಸ್ ಬಾಲನ್
  • ಕಲ್ಲಡ್ಕ ಪ್ರಭಾಕರ ಭಟ್ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ಇಲ್ಲ

ಎಫ್ಐಆರ್ ರದ್ದುಗೊಳಿಸಬೇಕು ಮತ್ತು ವಿಚಾರಣೆಗೆ ತಡೆ ನೀಡಬೇಕು ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಿತು. ಕಲ್ಲಡ್ಕ ಪ್ರಭಾಕರ ಭಟ್ ಪರ ಹಿರಿಯ ವಕೀಲ ಅರುಣ್ ಶ್ಯಾಂ ಅವರು ವಾದ ಮಂಡಿಸಿದರು.

“ಎಫ್ಐಆರ್‌ನಲ್ಲಿ ಸೆಕ್ಷನ್‌ಗಳನ್ನು ಹಾಕಲೆಂದೇ ಭಾಷಣದ ಮಧ್ಯದಿಂದ ಪದಗಳನ್ನು ಹೆಕ್ಕಿ ತೆಗೆಯಲಾಗಿದೆ. ದೂರುದಾರರು ರಾಜಕೀಯ ಕಾರ್ಯಕರ್ತೆಯಾಗಿದ್ದಾರೆ. ಭಾಷಣದ ಕೆಲ ಪದಗಳನ್ನು ಹೆಕ್ಕಿ ತೆಗೆದು ಅದಕ್ಕೆ ಅಪರಾಧದ ಬಣ್ಣ ನೀಡಲಾಗಿದೆ. ಈ ಹಿಂದೆ ಸರ್ಕಾರವೇ ಹೈಕೋರ್ಟ್‌ನಲ್ಲಿ ಪ್ರಭಾಕರ ಭಟ್ ಬಂಧನ ಮಾಡಲ್ಲ ಎಂದು ಹೇಳಿದೆ. ಅದರ ಅರ್ಥ, ಪೊಲೀಸರು ರಾಜಕೀಯ ಒತ್ತಡದಿಂದ ಪ್ರಕರಣ ದಾಖಲಿಸಿದ್ದಾರೆ ಎಂಬುದು ಸರ್ಕಾರಕ್ಕೆ ಮನವರಿಕೆ ಆಗಿದೆ. ಸುಳ್ಳು ದೂರನ್ನು ಉದ್ದೇಶಪೂರ್ವಕವಾಗಿ ದಾಖಲಿಸಿದ್ದಾರೆ. ಹಾಗಾಗಿ ತಕ್ಷಣಕ್ಕೆ ತಡೆಯಾಜ್ಞೆ ನೀಡಬೇಕು” ಎಂದು ಕೋರಿಕೊಂಡರು.

ದೂರುದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಎಸ್ ಬಾಲನ್ “ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ ಅಬಿಚ್ಯುವಲ್ ಅಫೆಂಡರ್(ನಿರಂತರ ತಪ್ಪು ಎಸಗುವವ) ಆಗಿದ್ದಾನೆ. ರಾಜ್ಯಾದ್ಯಂತ ದ್ವೇಷ ಭಾಷಣ ಮಾಡುತ್ತಾ, ಕೋಮುಗಲಭೆ ಸೃಷ್ಟಿಸಿ ಹಿಂಸಾಚಾರಗಳನ್ನು ಮಾಡಿದ ಇತಿಹಾಸ ಇದೆ. ಈವರೆಗೆ ಈತನ ವಿರುದ್ದ ದಾಖಲಾದ ದೂರುಗಳನ್ನು ಪೀಠ ತರಿಸಿಕೊಳ್ಳಬೇಕು” ಎಂದು ವಿನಂತಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಸ್ಲಿಮರಿಗೆ ದಿನಕ್ಕೊಬ್ಬ ಗಂಡ ಎಂದು ಆರೋಪಿ ಹೇಳಿರುವುದು ಇಡೀ ಮುಸ್ಲಿಂ ಸಮುದಾಯಕ್ಕೆ ಮಾಡಿದ ಅವಮಾನ. ಹಾಗಾಗಿ, ರಾಜ್ಯಾದ್ಯಂತ ಮುಸ್ಲಿಂ ಸಮುದಾಯ ಬೀದಿಗಿಳಿದು ಪ್ರತಿಭಟನೆ ನಡೆಸಿದೆ. ಸುಪ್ರಿಂ ಕೋರ್ಟ್ ತೀರ್ಪುಗಳು, ಕಾನೂನುಗಳು ಈ ರೀತಿಯ ದ್ವೇಷ ಭಾಷಣಕ್ಕೆ ಅವಕಾಶ ಕೊಡುವುದಿಲ್ಲ. ಆರೋಪಿ ಪರ ವಕೀಲರು ಭಾಷಣವನ್ನು ಬರಹ ರೂಪದಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ. ಆ ಕೆಲಸವನ್ನು ಸರ್ಕಾರ ಮಾಡಬೇಕೇ ಹೊರತು ಆರೋಪಿ ಪರ ವಕೀಲರಲ್ಲ. ಸರ್ಕಾರಕ್ಕೆ ಈ ನಿಟ್ಟಿನಲ್ಲಿ ನಿರ್ದೇಶನ ನೀಡಬೇಕು. ಅದಲ್ಲದೇ, ಆರೋಪಿಯ ಪೂರ್ತಿ ಭಾಷಣವನ್ನು ಕಲಾಪದಲ್ಲಿ ಕೇಳಲು ಕೋರ್ಟ್ ನಲ್ಲಿ ವಿಡಿಯೋ ಪ್ರದರ್ಶನಕ್ಕೆ ಅವಕಾಶ ಕೊಡಬೇಕು. ಆರೋಪಿಯ ಪ್ರಕರಣಕ್ಕೆ ತಡೆಯಾಜ್ಞೆ ನೀಡಬಾರದು” ಎಂದು ಎಸ್ ಬಾಲನ್ ಮನವಿ ಮಾಡಿದರು.

“ತಡೆಯಾಜ್ಞೆ ಕೊಡಲು ಆಗಲ್ಲ‌. ಆರೋಪಿಯನ್ನು ಬಂಧಿಸುವುದಿಲ್ಲ ಎಂದು ಸರ್ಕಾರ ಈ ಹಿಂದೆ ನೀಡಿದ ಹೇಳಿಕೆಯಂತೆ ಕೋರ್ಟ್ ನೀಡಿದ ರಿಲೀಫ್ ಮುಂದಿನ ದಿನಾಂಕದವರೆಗೆ ಮುಂದುವರೆಯಲಿದೆ. ಆರೋಪಿಯ ಭಾಷಣದ ಪೂರ್ಣಪಾಠವನ್ನು ಬರಹ ರೂಪದಲ್ಲಿ ಕೋರ್ಟ್ ಗೆ ಸಲ್ಲಿಸಿ” ಎಂದು ನ್ಯಾಯಮೂರ್ತಿಗಳು ಸರ್ಕಾರಕ್ಕೆ ನಿರ್ದೇಶನ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...