ಧಾರವಾಡ | ಕಮ್ಯೂನಿಸ್ಟ್ ಪಕ್ಷವು ಅಧಿಕಾರ ದಾಹದಿಂದ ಚುನಾವಣೆ ಎದುರಿಸುವುದಿಲ್ಲ: ರಾಮಾಂಜನಪ್ಪ ಆಲ್ದಳ್ಳಿ

Date:

  • ಎಸ್‌ಯುಸಿಐ (ಕಮ್ಯೂನಿಸ್ಟ್) ಪಕ್ಷದ 75ನೇ ಸಂಸ್ಥಾಪನಾ ದಿನಚರಣೆ
  • ವೈಚಾರಿಕ, ಸೈದ್ಧಾಂತಿಕ ಹಿನ್ನೆಲೆಯಲ್ಲಿ ಚುನಾವಣೆ ಎದುರಿಸಲು ಕರೆ

ಎಸ್‌ಯುಸಿಐ (ಕಮ್ಯೂನಿಸ್ಟ್) ಪಕ್ಷವು ಅಧಿಕಾರ, ಸಂಪತ್ತಿನ ದಾಹದಿಂದ ಚುನಾವಣೆಯನ್ನು ಎದುರಿಸುವುದಿಲ್ಲ. ಪಕ್ಷದ ವೈಚಾರಿಕತೆ ಹಾಗೂ ಸಿದ್ಧಾಂತವನ್ನು ಜನಸಮುದಾಯದ ಮಧ್ಯೆ ಕೊಂಡೊಯ್ಯುವ ನಿಟ್ಟಿನಲ್ಲಿ ಚುನಾವಣೆಯಲ್ಲಿ ಭಾಗವಹಿಸುತ್ತೇವೆ ಎಂದು ಎಸ್‌ಯುಸಿಐ (ಸಿ) ಪಕ್ಷದ ರಾಜ್ಯ ಕಾರ್ಯಕಾರಿ ಸದಸ್ಯ ಕಾಮ್ರೇಡ್ ರಾಮಾಂಜನಪ್ಪ ಆಲ್ದಳ್ಳಿ ಹೇಳಿದರು.

ಧಾರವಾಡ ಜಿಲ್ಲೆಯ ಮುಗಳಿ ಗ್ರಾಮದಲ್ಲಿ ನಡೆದ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಪಕ್ಷದ 75ನೇ ಸಂಸ್ಥಾಪನಾ ದಿನ ಸಮಾರಂಭದಲ್ಲಿ ಅವರು ಮಾತನಾಡಿದರು.

“ಪ್ರಸಕ್ತ ವರ್ಷ ಎಸ್‌ಯುಸಿಐ ಪಕ್ಷದ ಸಂಸ್ಥಾಪಕ ಕಾಮ್ರೇಡ್ ಶಿವದಾಸ್ ಘೋಷ್ ಜನ್ಮ ಶತಾಬ್ಧಿ ವರ್ಷ ಕೂಡ ಆಗಿದೆ. ಜನಹೋರಾಟ, ಸಮಾಜವಾದಿ ಕ್ರಾಂತಿಯಲ್ಲಿ ನಂಬಿಕೆಯಿಟ್ಟ ನಾವು 5 ವರ್ಷಕ್ಕೊಮ್ಮೆ ಬಂದು ಮತ ಕೇಳುವವರಲ್ಲ. ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧದ ಹೋರಾಟದ ಮೂಲಕ ಜನತೆಯ ನಡುವೆಯೇ ಸದಾ ಇರುತ್ತೇವೆ. ಇದುವರೆಗೂ ಆಡಳಿತ ನಡೆಸಿದ ರಾಷ್ಟ್ರೀಯ, ಪ್ರಾದೇಶಿಕ ಪಕ್ಷಗಳ ಸ್ವಾರ್ಥ ರಾಜಕೀಯದಿಂದಾಗಿ ಭ್ರಷ್ಟಾಚಾರ, ನಿರುದ್ಯೋಗ, ಶಿಕ್ಷಣದ ವ್ಯಾಪಾರೀಕರಣ ಹೆಚ್ಚಾಗಿ ಜನರ ಜೀವನ ಅಧೋಗತಿಗೆ ಇಳಿದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳ ಆಸ್ತಿ ಕಳೆದ ಬಾರಿಗಿಂತ 10% ರಿಂದ 20% ಹೆಚ್ಚಳವಾಗಿದೆ. ಜನರು ಈ ಪಕ್ಷಗಳ ಆಡಳಿತದಿಂದ ಭ್ರಮನಿರಸನಗೊಂಡು, ಹೋರಾಟದ ಹಾದಿ ತುಳಿದಿದ್ದಾರೆ. ಕಾಮ್ರೇಡ್ ಶಿವದಾಸ್ ಘೋಷ್ ಅವರ ಚಿಂತನೆಗಳ ಆಧಾರದ ಮೇಲೆ ನಾವು ದೇಶದಲ್ಲಿ ಜನ ಹೋರಾಟಗಳನ್ನು ಕಟ್ಟುತ್ತಿದ್ದೇವೆ” ಕಿಡಿ ಕಾರಿದರು.

ಈ ಸುದ್ದಿ ಓದಿದ್ದೀರಾ? : ಸಿದ್ದರಾಮಯ್ಯ ಸೋಲಿಸಲು ರಾಹು-ಕೇತು-ಶನಿ ಒಂದಾಗಿದ್ದಾರೆ: ಶಾಸಕ ಯತೀಂದ್ರ

ಚುನಾವಣೆ ಸಂದರ್ಭದಲ್ಲಿ ಅದಾನಿ, ಅಂಬಾನಿ ಹಾಗೂ ಇತರ ಕಾರ್ಪೋರೇಟ್ ಮನೆತನಗಳು ಪಕ್ಷಗಳಿಗೆ ಹಣಬಲ ಒದಗಿಸುವ ಮೂಲಕ ಅಧಿಕಾರದ ಗದ್ದುಗೆ ಏರಲು ಸಹಕರಿಸುತ್ತವೆ. ನಂತರ ತಮಗೆ ಅನುಕೂಲಕರವಾದ ನೀತಿಗಳನ್ನು ಅನುಷ್ಠಾನಗೊಳಿಸಿಕೊಳ್ಳುತ್ತವೆ. ಇದೇ 75 ವರ್ಷಗಳಿಂದ ಪುನರಾವರ್ತನೆಯಾಗಿದೆ. ಈ ಕೊಳೆತ ಬಂಡವಾಳಶಾಹಿ ವ್ಯವಸ್ಥೆ ಬುಡಮೇಲು ಮಾಡಿ, ದುಡಿಯುವ ಜನರು ಸಮರಶೀಲ ಚಳವಳಿಗಳನ್ನು ಬೆಳೆಸುವ, ಸಮಾಜವಾದಿ ವ್ಯವಸ್ಥೆ ಸ್ಥಾಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದು ಅಭಿಪ್ರಾಯಪಟ್ಟರು.

ಸರ್ಕಾರಿ ಕಾಲೇಜಿನ ಉಪನ್ಯಾಸಕ ಹುದ್ದೆಗೆ ರಾಜೀನಾಮೆ ನೀಡಿ, ಹೋರಾಟದ ಹಾದಿ ತುಳಿದು ಎಸ್‌ಯುಸಿಐ (ಸಿ) ಅಭ್ಯರ್ಥಿಯಾದ ಕಾಮ್ರೇಡ್ ಮಧುಲತಾ ಗೌಡರ ಮಾತನಾಡಿ, “ಕ್ಷೇತ್ರದ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ನಾನು ಭಾಗವಹಿಸಿದ್ದೇನೆ. ನನ್ನನ್ನು ತಮ್ಮ ಪ್ರತಿನಿಧಿಯಾಗಿ ಆಯ್ಕೆ ಮಾಡಿದರೆ ಈ ಹೋರಾಟಗಳನ್ನು ಇನ್ನೂ ಉನ್ನತಮಟ್ಟಕ್ಕೆ ಕೊಂಡೊಯ್ಯುತ್ತೇನೆ. ಧಾರವಾಡ ಜನರ ಧ್ವನಿಯನ್ನು ವಿಧಾನಸೌಧದಲ್ಲಿ ಮೊಳಗಿಸಲು ತಾವೆಲ್ಲ ನನ್ನನ್ನು ಬೆಂಬಲಿಸಬೇಕು” ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಜಡಗನ್ನವರ, ಪಕ್ಷದ ಸ್ಥಳೀಯ ಸಮಿತಿ ಸದಸ್ಯ ಮಂಜು ಜೋಡಳ್ಳಿ, ಗೋವಿಂದ ಕೃಷ್ಣಪ್ಪ, ಮಾರುತಿ ಪೂಜಾರ, ಜಗದೀಶ ಪೂಜಾರ, ಹನುಮೇಶ ಹುಡೇದ, ಶಶಿಕಲಾ ಮೇಟಿ ಸೇರಿದಂತೆ ಹಲವು ಜನ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...