ಪರಿಷತ್‌ಗೆ ಸುಧಾಮ್ ದಾಸ್ : ಅಭಿಪ್ರಾಯ ಕೇಳಿಲ್ಲ ಎಂದು ಹೈಕಮಾಂಡ್‌ಗೆ ಪತ್ರ ಬರೆದ ನಾಲ್ವರು ಸಚಿವರು

Date:

  • ಪತ್ರಕ್ಕೆ ಕೆ ಎಚ್ ಮುನಿಯಪ್ಪ, ಆರ್ ಬಿ ತಿಮ್ಮಾಪುರ, ಮಹದೇವಪ್ಪ, ಡಾ.ಜಿ.ಪರಮೇಶ್ವರ್ ಸಹಿ
  • ‘ನಾಮನಿರ್ದೇಶನ ಮಾಡುವಾಗ ನಮ್ಮ ಅಭಿಪ್ರಾಯವನ್ನು ಕೇಳಿಲ್ಲ’ ಎಂದು ಉಲ್ಲೇಖಿಸಿದ ಸಚಿವರು

ಮೂರು ವಿಧಾನ ಪರಿಷತ್‌ ಸ್ಥಾನಗಳ ಪೈಕಿ ಮಾಜಿ ಐಎಎಸ್ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನು ಕೂಡ ಅಂತಿಮಗೊಳಿಸಿ ರಾಜ್ಯಪಾಲರಿಗೆ ಕಳುಹಿಸಲು ಶಿಫಾರಸು ಮಾಡಲಾಗಿದೆ ಎಂಬ ಸುದ್ದಿಯ ನಡುವೆಯೇ, ಇದಕ್ಕೆ ವಿರೋಧ ವ್ಯಕ್ತಪಡಿಸಿ ನಾಲ್ವರು ಸಚಿವರು ಕಾಂಗ್ರೆಸ್ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ.

ಸುಧಾಮ್ ದಾಸ್ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಪತ್ರ ಬರೆದ ನಾಲ್ವರು ಸಚಿವರು ಕೂಡ ದಲಿತ ಸಮುದಾಯದ ಸಚಿವರು ಎಂಬುದು ವಿಶೇಷ.

ವಿಧಾನ ಪರಿಷತ್‌ಗೆ ನಾಮನಿರ್ದೇಶನಕ್ಕೆ ಹಿರಿಯ ನಟಿ ಉಮಾಶ್ರೀ, ಸುಧಾಮ್ ದಾಸ್, ಎಂಆರ್ ಸೀತಾರಾಮ್ ಮೂವರು ಹೆಸರನ್ನ ವಿಧಾನಪರಿಷತ್ ಗೆ ನಾಮನಿರ್ದೇಶನ ಮಾಡಲು ಶಿಫಾರಸು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Dalit Ministers Karnataka HC Mahadevappa timmapura parameshwar muniyappa

ಸುಧಾಮ್ ದಾಸ್ ನಾಮ ನಿರ್ದೇಶನಕ್ಕೆ ವಿರೋಧ ವ್ಯಕ್ತಪಡಿಸಿರುವ ಸಚಿವರಾದ ಹೆಚ್.ಸಿ ಮಹದೇವಪ್ಪ, ಡಾ.ಜಿ.ಪರಮೇಶ್ವರ್, ಕೆ.ಎಚ್ ಮುನಿಯಪ್ಪ ಮತ್ತು ಆರ್.ಬಿ ತಿಮ್ಮಾಪುರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ. ಈ ಪತ್ರ ಈಗ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ.

‘ಸುಧಾಮ್ ದಾಸ್ ಜಾರಿ ನಿರ್ದೇಶನಾಲಯದಲ್ಲಿ ಐಎಎಸ್ ಅಧಿಕಾರಿಯಾಗಿದ್ದರು. ಕೆಲ ವರ್ಷಗಳ ಹಿಂದೆ ಏಕಾಏಕಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಬಳಿಕ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿದ್ದರು. ಕಳೆದ ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಸುಧಾಮ್ ದಾಸ್ ಅವರ ಹೆಸರನ್ನು ಪರಿಷತ್ ಗೆ ಅಂತಿಮಗೊಳಿಸಲಾಗಿದೆ. ವಿಧಾನ ಪರಿಷತ್‌ಗೆ ಸುಧಾಮ್ ದಾಸ್ ನಾಮನಿರ್ದೇಶನ ಮಾಡುವಾಗ ನಮ್ಮ ಅಭಿಪ್ರಾಯವನ್ನ ಕೇಳಿಲ್ಲ. ನಾಮನಿರ್ದೇಶನವನ್ನ ನಾವು ವಿರೋಧಿಸುತ್ತೇವೆ ಎಂದು ನಾಲ್ವರು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

sudham das congress

ಕಳೆದ ಮಾರ್ಚ್‌ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದ ಸುಧಾಮ್ ದಾಸ್

‘ಹೆಚ್ ಪಿ ಸುಧಾಮ್ ದಾಸ್ ವಿಧಾನಸಭಾ ಚುನಾವಣೆಯ ವೇಳೆ ಪಕ್ಷಕ್ಕೆ ದೊಡ್ಡ ಮಟ್ಟದ ಕೆಲಸ ಏನೂ ಮಾಡಿಲ್ಲ. ಅವರಿಗಿಂತ ಹೆಚ್ಚು ಪಕ್ಷಕ್ಕೆ ದುಡಿದವರು ಹಲವರಿದ್ದಾರೆ. ಅಂತವರಿಗೆ ಮೊದಲು ಅವಕಾಶ ನೀಡಬೇಕು. ಸುಧಾಮ್ ದಾಸ್ ಆಯ್ಕೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ’ ಎಂದು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ, ‘ಇದು ಪಕ್ಷದ ಆಂತರಿಕ ವಿಚಾರ. ಬೇಕು, ಬೇಡ, ಸಮುದಾಯ, ಪ್ರಾಂತ್ಯ ಅದೆಲ್ಲವೂ ಚರ್ಚೆಯಾಗುತ್ತದೆ. ನಾನು ಅದನ್ನು ಮಾಧ್ಯಮದ ಮುಂದೆ ಹೇಳೋದಿಲ್ಲ. ನನ್ನ ಅಭಿಪ್ರಾಯವನ್ನು ಹೈಕಮಾಂಡ್‌ಗೆ ಹೇಳುತ್ತೇನೆ. ಪಕ್ಷದ ಹಿರಿಯ ನಾಯಕರ ಜೊತೆ ಮಾತನಾಡುತ್ತೇನೆ’ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...