ಮಂಡ್ಯ ಬೇಕು, ಇಲ್ಲಾಂದ್ರೆ ರಾಜಕೀಯವೇ ಬೇಡ ಎಂದ ಸುಮಲತಾ

Date:

ಬಿಜೆಪಿ-ಜೆಡಿಎಸ್‌ ಮೈತ್ರಿಯದ ಬಳಿಕ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಯಾರಿಗೆ ಕೊಡಬೇಕೆಂಬ ಕಗ್ಗಂಟು ಎದುರಾಗಿದೆ. ಬಿಜೆಪಿಗೆ ಬೆಂಬಲ ನೀಡಿದ್ದ ಸಂಸದೆ ಸುಮಲತಾ ಮಂಡ್ಯದಲ್ಲಿಯೇ ಸ್ಪರ್ಧಿಸುತ್ತೇನೆಂದು ಹೇಳುತ್ತಿದ್ದಾರೆ. ಆದರೆ, ಜೆಡಿಎಸ್‌ ಮಂಡ್ಯ ನಮಗೇ ಬೇಕೆಂದು ಪಟ್ಟು ಹಿಡಿದಿದೆ. ಈ ನಡುವೆ, ಬಿಜೆಪಿ ನಾಯಕರೊಂದಿಗೆ ಸುಮಲತಾ ಸಭೆ ನಡೆಸಿದ್ದು, ಬಿಜೆಪಿಯಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಆದರೆ, ಮಂಡ್ಯ ಕ್ಷೇತ್ರವಲ್ಲದೆ, ಬೇರಾವುದೇ ಕ್ಷೇತ್ರ ನೀಡಿದರೂ ನಾನು ಸ್ಪರ್ಧಿಸುವುದಿಲ್ಲ. ಮಂಡ್ಯ ಕೊಡದಿದ್ದರೆ, ನನಗೆ ರಾಜಕೀಯವೇ ಬೇಡ ಎಂದಿದ್ದಾರೆ ಎಂದು ತಿಳಿದುಬಂದಿದೆ.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಸುಮಲತಾ ಮಾತನಾಡಿದ್ದು, “ನನ್ನ ಬಗ್ಗೆ ಯಾವುದೇ ಕಳಂಕ ಇಲ್ಲ. ಮಂಡ್ಯ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಳ್ಳುತ್ತದೆ ಎನ್ನಿಸುತ್ತಿದೆ. ನನ್ನ ಬೆಂಬಲಿಗರಲ್ಲಿ ಹಲವರು ಕಾಂಗ್ರೆಸ್‌ ಕಾರ್ಯಕರ್ತರಿದ್ದಾರೆ. ಅವರು ಕಾಂಗ್ರೆಸ್‌ಗೆ ಬನ್ನಿ ಎಂದು ಕರೆಯುತ್ತಿದ್ದಾರೆ. ಆದರೆ, ಕಾಂಗ್ರೆಸ್‌ನಿಂದ ಸ್ಪರ್ಧಿಸಲು ನಾನು ಪ್ರಯತ್ನಿಸಿಲ್ಲ. ಮೋದಿ ನೇತೃತ್ವವೇ ಸರಿಯೆಂದು ನಾನು ಭಾವಿಸಿದ್ದೇನೆ” ಎಂದು ಹೇಳಿದ್ದು, ಬಿಜೆಪಿಯಿಂದ ಸ್ಪರ್ಧಿಸುವ ಮಾತನಾಡಿದ್ದಾರೆ.

“ಸಭೆಯಲ್ಲಿ ಬಿಜೆಪಿ ಏನು ನಿರ್ಧಾರ ತೆಗೆದುಕೊಳ್ಳಬೇಕು. ಏನು ಮಾಡಬೇಕು ಎಂಬುದರ ಬಗ್ಗೆ ಚರ್ಚಿಸಿದ್ದೇವೆ. ಅಧಿಕೃತವಾಗಿ ಮಂಡ್ಯ ಬಿಜೆಪಿಗಾ ಅಥವಾ ಜೆಡಿಎಸ್‌ಗಾ ಎಂಬ ಎಂಬ ಬಗ್ಗೆ ಮಾತು ಬಂದಿಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...