ರಾಷ್ಟ್ರಧ್ವಜದ ಬಗ್ಗೆ ಸುಳ್ಳು ಸುದ್ದಿ ಹಂಚಿದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್​: ಮತ್ತೆ ಎಫ್‌ಐಆರ್

Date:

ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬದ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಿ, ಬಂಧನಕ್ಕೆ ಒಳಗಾಗಿ ಬಿಡುಗಡೆಯಾಗಿದ್ದ ತುಮಕೂರಿನ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್​ ವಿರುದ್ಧ ರಾಷ್ಟ್ರಧ್ವಜದ ಬಗ್ಗೆ ಸುಳ್ಳು ಸುದ್ದಿ ಹಂಚಿದ್ದಕ್ಕಾಗಿ ಮತ್ತೆ ಎಫ್‌ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಮತ್ತೆ ಬಂಧನ ಭೀತಿ ಎದುರಾಗಿದೆ.

‘ಎಕ್ಸ್'(ಹಿಂದಿನ ಟ್ವಿಟ್ಟರ್) ​ಖಾತೆಯಲ್ಲಿ ನಕಲಿ ಪೋಸ್ಟ್​ ಹಂಚಿಕೊಂಡ ಆರೋಪದ ಮೇಲೆ ತುಮಕೂರಿನ ಜಯನಗರ ಠಾಣಾ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು, ಎಫ್ಐಆರ್ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ಲುಲು ಶಾಪಿಂಗ್‌ ಮಾಲ್‌ನಲ್ಲಿ ಭಾರತದ ಬಾವುಟಕ್ಕಿಂತ ಪಾಕಿಸ್ತಾನ ಬಾವುಟವನ್ನು ಎತ್ತರದಲ್ಲಿ ಹಾರಿಸಿದ್ದಾರೆ ಎಂದು ಫೋಟೋ ಜೊತೆಗೆ ಶಕುಂತಲಾ ನಟರಾಜ್ ಅ. 10ರಂದು ಪೋಸ್ಟ್ ಹಂಚಿಕೊಂಡಿದ್ದರು.

ಅಲ್ಲದೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಅವರಿಗೆ ಟ್ಯಾಗ್​ ಮಾಡಿರುವ ಶಕುಂತಲಾ, ‘ಭಾರತದ ಬಾವುಟಕ್ಕಿಂತ ಬೇರೆ ಯಾವುದೇ ಬಾವುಟ ಎತ್ತರದಲ್ಲಿ ಇರಬಾರದು ಅನ್ನೋ ಸಾಮಾನ್ಯ ಜ್ಞಾನ ಇಲ್ಲವೇ? ನಿಮ್ಮ ಮಾಲ್​ನವರಿಗೆ’ ಎಂದು ಪ್ರಶ್ನೆ ಮಾಡಿದ್ದಾರೆ. ಇದರ ಜತೆಗೆ ಬೆಂಗಳೂರಿನ ಲುಲು ಮಾಲ್​ ಬಹಿಷ್ಕರಿಸಿ ಎಂದು ಹ್ಯಾಷ್​ಟ್ಯಾಗ್​ ಉಪಯೋಗಿಸಿದ್ದಾರೆ.

SHAKUNTALA TWEET

ಆದರೆ, ಶಕುಂತಲಾ ಪೋಸ್ಟ್​ ಮಾಡಿರುವ ಫೋಟೋದ ಸತ್ಯಾಸತ್ಯತೆ ಏನು ಎಂಬುದನ್ನು ತಿಳಿದುಕೊಳ್ಳಲು ಅದರ ಮೂಲ ಹುಡುಕಿ ಫ್ಯಾಕ್ಟ್‌ಚೆಕ್ ಮಾಡಿದ ತುಮಕೂರು ಪೊಲೀಸರು, ಇದು ನಕಲಿ ಪೋಸ್ಟ್​ ಎಂಬುದು ಗೊತ್ತಾಗಿದೆ. ಅಲ್ಲದೇ, ಈ ಫೋಟೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುವುದು ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ನಕಲಿ ಪೋಸ್ಟ್​ ಮೂಲಕ ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದ್ದಾರೆಂಬ ಆರೋಪದಡಿ ಶಕುಂತಲಾ ನಟರಾಜ್ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್​ 153 (ಬಿ) ಅಡಿಯಲ್ಲಿ ತುಮಕೂರಿನ ಜಯನಗರ ಠಾಣೆಯ ಪೊಲೀಸರು ಸ್ವಯಂಪ್ರೇರಿತ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಹೀಗಾಗಿ, ಶಕುಂತಲಾ ಅವರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.

ಕೆಲ ತಿಂಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಶಕುಂತಲಾ ನಟರಾಜ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಠಾಣೆಗೆ ಕರೆದುಕೊಂಡು ಬಂದಿದ್ದ ಪೊಲೀಸರು, ಮುಚ್ಚಳಿಕೆ ಪತ್ರ ಬರೆಸಿಕೊಂಡು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು.

ಫ್ಯಾಕ್ಟ್‌ ಚೆಕ್ ನಡೆಸಿದ್ದ ಆಲ್ಟ್‌ ನ್ಯೂಸ್‌ನ ಮುಹಮ್ಮದ್ ಝುಬೇರ್

ಈ ಫೋಟೋ ಹರಿದಾಡಿದ ಬೆನ್ನಲ್ಲೇ ಫ್ಯಾಕ್ಟ್‌ ಚೆಕ್ ನಡೆಸಿದ್ದ ಆಲ್ಟ್‌ ನ್ಯೂಸ್‌ನ ಮುಹಮ್ಮದ್ ಝುಬೇರ್, ಈ ಫೋಟೋ ಕೇರಳದ ಲುಲು ಮಾಲ್‌ನ ದೃಶ್ಯ. ಅಲ್ಲಿ ಭಾರತದ ಭಾವುಟ ಸೇರಿದಂತೆ ವಿಶ್ವಕಪ್‌ನಲ್ಲಿ ಭಾಗವಹಿಸುತ್ತಿರುವ ಎಲ್ಲ ತಂಡಗಳ ಧ್ವಜಗಳನ್ನು ಸಮಾನವಾಗಿ ಹಾಕಲಾಗಿತ್ತು ಎಂಬುದನ್ನು ಪತ್ತೆ ಹಚ್ಚಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...