3,542 ಕೋಟಿ ರೂ. ಪೂರಕ ಅಂದಾಜುಗಳ ಒಂದನೇ ಕಂತಿಗೆ ಅನುಮೋದನೆ

Date:

2023-24ನೇ ಸಾಲಿನ ಪೂರಕ ಅಂದಾಜುಗಳು (ಒಂದನೇ ಕಂತು) ಕುರಿತಂತೆ ವಿಧಾನ ಪರಿಷತ್ತಿನಲ್ಲಿ ಮುಖ್ಯಮಂತ್ರಿಯವರು ಮಂಡಿಸಿದ 3542 ಕೋಟಿ ರೂ. ಗಳ ಪೂರಕ ಅಂದಾಜುಗಳ ಒಂದನೇ ಕಂತಿಗೆ ಅನುಮೋದನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, “ಈ ಪೂರಕ ಅಂದಾಜಿನಲ್ಲಿ ರಾಜ್ಯದ ಆರ್ಥಿಕ ಪ್ರಗತಿ ಮತ್ತು ಸಂಪನ್ಮೂಲ ಸೃಜನೆಗೆ ಒತ್ತು ನೀಡುವ ದೃಷ್ಟಿಯಿಂದ 915 ಕೋಟಿ ರೂ. ಗಳನ್ನು ಬಂಡವಾಳ ವೆಚ್ಚಕ್ಕೆ ಒದಗಿಸಲಾಗಿದೆ” ಎಂದು ತಿಳಿಸಿದರು.

“2023-24 ನೇ ಸಾಲಿನ ಆಯವ್ಯಯದಲ್ಲಿ ಒಟ್ಟು ಅಭಿಯಾಚನೆ ಮಾಡಿದ ಮೊತ್ತ 3,41,321 ಕೋಟಿ ರೂ. ಗಳಲ್ಲಿ ಪೂರಕ ಅಂದಾಜಿನ ಮೊದಲನೇ ಕಂತಿನಲ್ಲಿ ಒದಗಿಸಿದ ಒಟ್ಟು ಮೊತ್ತ 3,542 ಕೋಟಿ ರೂ.ಗಳಾಗಿದ್ದು, ಇದು ಒಟ್ಟು ಅಭಿಯಾಚನೆ ಮಾಡಿದ ಮೊತ್ತದ ಶೇ.1 ರಷ್ಟಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದರಲ್ಲಿ ರಾಜಸ್ವ ಖಾತೆಯಲ್ಲಿ 2677 ಕೋಟಿ ರೂ.ಗಳು ಮತ್ತು ಬಂಡವಾಳ ಖಾತೆಯಲ್ಲಿ 915 ಕೋಟಿ ರೂ.ಗಳಾಗಿದೆ. ಈ ಹೆಚ್ಚುವರಿ ಅನುದಾನದಲ್ಲಿ ಕೇಂದ್ರ ಸರ್ಕಾರದ ಸ್ವೀಕೃತಿಗಳಿಂದ 684 ಕೋಟಿ ರೂ. ಗಳು ಮತ್ತು ರಿಸರ್ವ್‌ ಫಂಡ್‌ ಠೇವಣಿಗಳಿಂದ 327 ಕೋಟಿ ರೂ. ಗಳನ್ನು ಭರಿಸಲಾಗುವುದು. ಆದ್ದರಿಂದ ನಿವ್ವಳ ಹೊರಹೋಗುವ ಮೊತ್ತವು 2531 ಕೋಟಿ ರೂ. ಗಳು ಮಾತ್ರವಾಗಿದೆ” ಎಂದು ಹೇಳಿದರು.

“ಈ ಮೊತ್ತವನ್ನು ಸ್ವಂತ ರಾಜಸ್ವ ಸ್ವೀಕೃತಿಗಳಿಂದ, ಕೇಂದ್ರ ಸರ್ಕಾರದಿಂದ ಸ್ವೀಕೃತವಾಗುವ ತೆರಿಗೆ ಪಾಲಿನ ಹೆಚ್ಚಳ, ಭಾರತ ಸರ್ಕಾರದ ವಿಶೇಷ ಬಂಡವಾಳ ಸಹಾಯ ಯೋಜನೆ ಮತ್ತು ಅಗತ್ಯವಿದ್ದಲ್ಲಿ ವೆಚ್ಚದ ಮರು ಪ್ರಾಧಾನ್ಯತೆ ಮತ್ತು ವೆಚ್ಚದಲ್ಲಿ ಸಂಭವನೀಯ ಉಳಿತಾಯದ ಮೂಲಕ ಭರಿಸಲಾಗುವುದು” ಎಂದು ವಿವರಿಸಿದರು.

“ಮುಖ್ಯವಾಗಿ ಸಮಾಜ ಕಲ್ಯಾಣ ಇಲಾಖೆಗೆ ಎಸ್‍ಸಿಎಸ್‍ಪಿ ಟಿಎಸ್‍ಪಿ ಹಣದಲ್ಲಿ 390 ಕೋಟಿ ರೂ. ಗಳು ಟಿಎಸ್ಪಿ ನಲ್ಲಿ 118 ಒಟ್ಟು ವಸತಿಶಾಲಾ ಕಟ್ಟಡ ನಿರ್ಮಾಣ-ನಿರ್ವಹಣೆಗೆ 508 ಕೋಟಿ ಸಮಾಜ ಕಲ್ಯಾಣಕ್ಕೆ ಕೊಡಲಾಗಿದೆ. ರಾಜ್ಯ ವಿಪತ್ತು ಪರಿಹಾರ ನಿಧಿ 502 ಕೋಟಿ , ಸಮಗ್ರ ಶಿಶು ಆರೋಗ್ಯ ಯೋಜನೆಗೆ 310 ಕೋಟಿ, ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ 297 ಕೋಟಿ ರೂ. , ಐಸಿಡಿಎಸ ಕೋಶಕ್ಕೆ 284 ಕೋಟಿ, ಕರ್ನಾಟಕ ರಾಜ್ಯ ಉಗ್ರಾಣ ನಿಗಮಕ್ಕೆ ಸಾಲವಾಗಿ 229 ಕೊಟಿ ರೂ. ,ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕ್ಷೇಮ ಕೇಂದ್ರವಾಗಿ ಪರಿವರ್ತನೆಗೆ 180 ಕೋಟಿ, ನಬಾರ್ಡ್ ರಸ್ತೆ ಕಾಮಗಾರಿಗೆ 150 ಕೋಟಿ ರೂ., ಮಕ್ಕಳು ಹದಿಹರೆಯದವರ ಗ್ರಂಥಾಲಯ ಯೋಜನೆಗೆ 132 ಕೋಟಿ ರೂ. , ಕೃಷಿ ಭಾಗ್ಯಕ್ಕೆ 100 ಕೋಟಿ. ಕೇಂದ್ರ ಪುರಸ್ಕೃತ ಯೋಜನೆಯಡಿ 74 ಕೋಟಿ ಕೇಂದ್ರ ಸರ್ಕಾರದಿಂದ ಬರಬೇಕಾಗಿದೆ. 3452 ಕೋಟಿ ರೂ.ಗಳ ಪೂರಕ ಬಜೆಟ್ ಗೆ ಅನುಮೋದನೆ ನೀಡಬೇಕೆಂದು” ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...