ಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶಕ್ಕೆ ‘ಸುಪ್ರೀಂ’ ತಾತ್ಕಾಲಿಕ ತಡೆ

Date:

  • ಮುಂದಿನ ವಿಚಾರಣೆ ಮೇ 9ಕ್ಕೆ ಮುಂದೂಡಿಕೆ
  • ಕೆ ಎಂ ಜೋಸೆಫ್‌ ನೇತೃತ್ವದ ಪೀಠದಿಂದ ಆದೇಶ

ರಾಜ್ಯ ಸರ್ಕಾರದ 2ಬಿ ಮೀಸಲಾತಿ ರದ್ದು ಆದೇಶವನ್ನು ಮುಂದಿನ ವಿಚಾರಣೆವರೆಗೆ ಜಾರಿಗೊಳಿಸದಂತೆ ಸುಪ್ರೀಂಕೋರ್ಟ್ ತಡೆ ನೀಡಿದೆ. ನ್ಯಾಯಾಲಯದ ಆದೇಶದಿಂದ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.

ಸುಮಾರು ನಾಲ್ಕು ದಶಕಗಳಿಂದ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ರಾಜ್ಯ ಸರ್ಕಾರ ಮುಸ್ಲಿಮರ ಮೀಸಲಾತಿ ಕಿತ್ತುಕೊಂಡು ಒಕ್ಕಲಿಗ ಮತ್ತು ಲಿಂಗಾಯತರಿಗೆ ತಲಾ ಶೇ. 2ರಷ್ಟು ಮೀಸಲಾತಿ ಹಂಚಿಕೆ ಮಾಡಿತ್ತು.

ಈ ಕುರಿತು ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ಎಂ ಜೋಸೆಫ್‌ ಅವರ ನೇತೃತ್ವದ ಪೀಠ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೀಸಲಾತಿ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಏಪ್ರಿಲ್ 13ರಂದು ನಡೆಸಿತ್ತು. ಆಗ, “ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವು ದೋಷ ಪೂರಿತ ಮತ್ತು ಪ್ರಮಾದದಿಂದ ಕೂಡಿದೆ” ಎಂದು ಹೇಳಿತ್ತು.

ಮಂಗಳವಾರದ ವಿಚಾರಣೆ ಮುಂದುವರಿಸಿದ ಸುಪ್ರೀಂ ಕೋರ್ಟ್‌ ಮೇ 9ಕ್ಕೆ ವಿಚಾರಣೆ ಮುಂದೂಡಿತು. ಅಲ್ಲಿಯವರೆಗೆ ಮೀಸಲಾತಿ ಜಾರಿಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಅಭ್ಯರ್ಥಿ ನಾಮಪತ್ರ ರಕ್ಷಣೆಗೆ ನಿಯಮ ಉಲ್ಲಂಘಿಸಿದ ಆಯೋಗ; ರಮೇಶ್‌ ಬಾಬು ಆರೋಪ

ಮೀಸಲಾತಿ ಪರಿಷ್ಕರಣೆ ವೇಳೆ ಮುಸ್ಲಿಮರಿಗೆ ರಾಜ್ಯ ಸರ್ಕಾರ ಶೇ. 4ರ ಮೀಸಲಾತಿ ರದ್ದು ಮಾಡಿತ್ತು. ಸರ್ಕಾರದ ಈ ಆದೇಶ ಸಾಮಾಜಿಕ ವಲಯದಲ್ಲಿ ಹೆಚ್ಚು ಚರ್ಚೆಗೀಡಾಗಿತ್ತು. ಸುಪ್ರೀಂಕೋರ್ಟ್‌ ಆದೇಶದಿಂದಾಗಿ ಈಗ ಒಕ್ಕಲಿಗ ಮತ್ತು ಲಿಂಗಾಯತ ಮೀಸಲಾತಿ ಹೆಚ್ಚಳದ ಮೇಲೆ ಪರಿಣಾಮ ಬೀಳಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...