ಮುಸ್ಲಿಮರ ಮೀಸಲಾತಿ ರದ್ದು; ಏಪ್ರಿಲ್ 25ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

Date:

  • ಕೆ ಎಂ ಜೋಸೆಫ್ ಹಾಗೂ ಕೆ ಎಸ್ ನಾಗರತ್ನ ನೇತೃತ್ವದ ದ್ವಿಸದಸ್ಯ ಪೀಠದ ವಿಚಾರಣೆ
  • ಮೀಸಲಾತಿ ನಿರ್ಧಾರ ತೀರ ಕಳಪೆ ಹಾಗೂ ದೋಷಪೂರಿತ ಎಂದು ಹೇಳಿದ್ದ ಪೀಠ

ಮುಸ್ಲಿಮರಿಗೆ ನೀಡಲಾಗಿರುವ ಶೇ. 4ರಷ್ಟು ಮೀಸಲಾತಿ ರದ್ದುಗೊಳಿಸಿರುವ ಪ್ರಕರಣ ಸಂಬಂಧ ಪ್ರತಿಕ್ರಿಯಿಸಲು ಕರ್ನಾಟಕ ಸರ್ಕಾರವು ಸಮಯಾವಕಾಶ ಕೇಳಿದ್ದು, ಹೀಗಾಗಿ ಸುಪ್ರೀಂ ಕೋರ್ಟ್‌ ವಿಚಾರಣೆಯನ್ನು ಏಪ್ರಿಲ್ 25ಕ್ಕೆ ಮುಂದೂಡಿದೆ.

ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರಕಾರವು ಉತ್ತರ ಸಲ್ಲಿಸಲು ಸಮಯ ಕೋರಿದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶೇ. 4ರಷ್ಟು ಮುಸ್ಲಿಂ ಮೀಸಲಾತಿ ರದ್ದುಗೊಳಿಸುವುದರ ವಿರುದ್ಧದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 25ರವರೆಗೆ ಮುಂದೂಡಿತು.

ಎಲ್ ಗುಲಾಮ್‌ರಸೂಲ್ ಮತ್ತು ಅಂಜುಮನ್-ಇ-ಇಸ್ಲಾಂ ಸರಕಾರಿ ಆದೇಶವನ್ನು ಪ್ರಶ್ನಿಸುವ ರಿಟ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ಎಂ ಜೋಸೆಫ್ ಹಾಗೂ ಕೆ ಎಸ್ ನಾಗರತ್ನ ನೇತೃತ್ವದ ದ್ವಿಸದಸ್ಯ ಪೀಠವು ಮಂಗಳವಾರ ಕೈಗೆತ್ತಿಕೊಂಡಿತು. ಸಂವಿಧಾನವು ಧರ್ಮದ ಆಧಾರದ ಮೇಲೆ ಮೀಸಲಾತಿ ಅನುಮತಿಸುವುದಿಲ್ಲ ಎಂದು ರಾಜ್ಯವು ಪ್ರತಿಪಾದಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೀಠದಲ್ಲಿದ್ದ ಮತ್ತೊಬ್ಬರು ನ್ಯಾಯಾಧೀಶರಾದ ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರು, ಮಧ್ಯಂತರ ವರದಿಯ ಆಧಾರದ ಮೇಲೆ ಸರಕಾರಿ ಆದೇಶ ನೀಡುವ ಬದಲು ರಾಜ್ಯವು ಅಂತಿಮ ವರದಿಗಾಗಿ ಕಾಯಬಹುದಿತ್ತು ಹಾಗೂ “ಮಹಾತುರ್ತು” ತಿಳಿಯಲು ಪ್ರಯತ್ನಿಸಬಹುದಿತ್ತು ಎಂದರು.

ಈ ಸುದ್ದಿ ಓದಿದ್ದೀರಾ? ಮುಸ್ಲಿಂ ಮೀಸಲಾತಿ ರದ್ದು ತೀರ್ಮಾನ ತೀರ ಕಳಪೆ, ದೋಷಪೂರಿತ ನಿರ್ಧಾರ ಎಂದ ಸುಪ್ರೀಂ ಕೋರ್ಟ್

ಆದರೆ, ರಾಜ್ಯ ಸರಕಾರ ಹಾಗೂ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳ ಕೆಲವು ಮುಖಂಡರ ಪರ ವಾದ ಮಂಡಿಸಿದ ವಕೀಲರು ಯಾವುದೇ ತಡೆಯಾಜ್ಞೆ ವಿರೋಧಿಸಿದರು ಮತ್ತು ಉತ್ತರಿಸಲು ಕೆಲವು ದಿನಗಳ ಕಾಲಾವಕಾಶ ಕೋರಿದರು. ಅರ್ಜಿದಾರರು ಕೋರಿದ ಯಾವುದೇ ಮಧ್ಯಂತರ ಪರಿಹಾರವನ್ನು ನೀಡಲು ಪೀಠವು ನಿರಾಕರಿಸಿತು.

ಮೀಸಲಾತಿ ರದ್ದು ಸಂಬಂಧ ಸಲ್ಲಿಸಲಾಗಿರುವ ಮೇಲ್ಮನವಿಗಳ ವಿಚಾರಣೆಯನ್ನು ಏಪ್ರಿಲ್ 13ರಂದು ನಡೆಸಿದ್ದ ಸುಪ್ರೀಂ ಕೋರ್ಟ್‌ನ ಇದೇ ಪೀಠ, ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವು ‘ತೀರ ಕಳಪೆ ಹಾಗೂ ದೋಷಪೂರಿತದಿಂದ ಕೂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ’ ಎಂದು ಹೇಳಿತ್ತು.  

ಈ ಮೊದಲು ಒಕ್ಕಲಿಗರು ಶೇ. 4 ಮತ್ತು ಲಿಂಗಾಯತರು ಶೇ. 5 ಮೀಸಲಾತಿ ಹೊಂದಿದ್ದರು. ರಾಜ್ಯ ಸಚಿವ ಸಂಪುಟದ ನಿರ್ಧಾರದ ನಂತರ, ಒಕ್ಕಲಿಗರು ಶೇ. 6ರಷ್ಟು ಮತ್ತು ಲಿಂಗಾಯತರು ಶೇ. 7ರಷ್ಟು ಮೀಸಲಾತಿ ಪಡೆಯುತ್ತಾರೆ.

ಒಬಿಸಿ ವರ್ಗದಿಂದ ಮುಸ್ಲಿಮರನ್ನು ತೆಗೆದುಹಾಕಿ ಶೇ. 10ರಷ್ಟು ಮೀಸಲಾತಿ ಇರುವ ಆರ್ಥಿಕವಾಗಿ ದುರ್ಬಲ ವಿಭಾಗದಡಿಯಲ್ಲಿ ಅವರಿಗೆ ಅವಕಾಶ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ. ರಾಜ್ಯ ಸರ್ಕಾರದ ನಿರ್ಧಾರದಿಂದ ಮೀಸಲಾತಿ ಮಿತಿ ಸುಪ್ರೀಂಕೋರ್ಟ್ ನಿಗದಿ ಮಾಡಿದ ಶೇ. 57ನ್ನು ಮೀರುತ್ತದೆ.       

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...