ಭಿನ್ನಾಭಿಪ್ರಾಯ ಹತ್ತಿಕ್ಕಲು ಸೋನಮ್ ವಾಂಗ್‌ಚುಕ್ ಬಂಧನ ಎಂದ ಪತ್ನಿ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್‌

Date:

ಭಿನ್ನಾಭಿಪ್ರಾಯ ಹತ್ತಿಕ್ಕಲು ಲಡಾಖ್ ಹೋರಾಟಗಾರರ ಸೋನಮ್ ವಾಂಗ್‌ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಗಿದೆ ಎಂದು ಅವರ ಪತ್ನಿ ಗೀತಾಂಜಲಿ ಜೆ ಅಂಗ್ಮೋ ಆರೋಪಿಸಿದ್ದಾರೆ.

ತಮ್ಮ ಪತಿ ಸೋನಮ್ ಬಂಧನವನ್ನು ಪ್ರಶ್ನಿಸಿ ಗೀತಾಂಜಲಿ ಅವರು ಸಲ್ಲಿಸಿದ್ದ ತಿದ್ದುಪಡಿ ಮಾಡಿದ ಅರ್ಜಿಯನ್ನು ಬುಧವಾರ ಸುಪ್ರೀಂ ಕೋರ್ಟ್‌ ವಿಚಾರಣೆಗೆ ಕೈಗೆತ್ತಿಕೊಂಡಿದೆ. ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್‌ವಿ ಅಂಜಾರಿಯಾ ಅವರ ಪೀಠದ ಮುಂದೆ ವಾದ ಮಂಡಿಸಿದ ಗೀತಾಂಜಲಿ ಅವರು, “ಬಂಧನ ಆದೇಶ ಸಂಪೂರ್ಣವಾಗಿ ಅಕ್ರಮವಾಗಿದೆ. ಹಳೆಯ, ಅಪ್ರಸ್ತುತ ಎಫ್‌ಐಆರ್‌ಗಳನ್ನು ಈ ಬಂಧನ ಆದೇಶದಲ್ಲಿ ಉಲ್ಲೇಖಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಲಡಾಖ್ ಹಿಂಸಾಚಾರಕ್ಕೆ ಸೋನಮ್ ವಾಂಗ್‌ಚುಕ್ ಪ್ರಚೋದನಾಕಾರಿ ಹೇಳಿಕೆ ಕಾರಣ: ಕೇಂದ್ರ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಫ್‌ಐಆರ್‌ಗಳಲ್ಲಿ ಮೂರು 2024ಕ್ಕೆ ಸಂಬಂಧಿಸಿದೆ. 2025ರ ಸೆಪ್ಟೆಂಬರ್‌ನಲ್ಲಿ ವಾಂಗ್‌ಚುಕ್ ಬಂಧನಕ್ಕೆ ಯಾವುದೇ ನಿಕಟ, ತಾರ್ಕಿಕ ಸಂಬಂಧವಿಲ್ಲ. ಇದಲ್ಲದೆ ಒಟ್ಟು ಐದು ಎಫ್‌ಐಆರ್‌ಗಳಲ್ಲಿ ನಾಲ್ಕು ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿರುವಂತದ್ದು. ವಾಂಗ್‌ಚುಕ್ ಹೆಸರು ಆ ಎಫ್‌ಐಆರ್‌ಗಳಲ್ಲಿ ಇಲ್ಲ” ಎಂದು ತಿಳಿಸಿದ್ದಾರೆ.

ಇನ್ನು ವಾದ ಆಲಿಸಿದ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ನಿರ್ದೇಶಿಸಿದೆ. ಅಗತ್ಯವಿದ್ದರೆ ಸೋನಮ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಮರುಪ್ರತ್ಯಾರೋಪ ಸಲ್ಲಿಸಲು ನ್ಯಾಯಾಲಯವು ಅವಕಾಶ ನೀಡಿದೆ.

ವಾಂಗ್‌ಚುಕ್ ಅವರ ಬಂಧನವನ್ನು ಪ್ರಶ್ನಿಸಿ ಹೆಚ್ಚುವರಿ ಆಧಾರಗಳೊಂದಿಗೆ ತಿದ್ದುಪಡಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡುವಂತೆ ಆಂಗ್ಮೋ ಅಕ್ಟೋಬರ್ 15ರಂದು ಕೋರಿದ್ದರು. ಇದಾದ ನಂತರ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಮುಂದೂಡಿತ್ತು. ಸದ್ಯ ಸೋನಮ್ ಅವರು ರಾಜಸ್ಥಾನದ ಜೋಧ್‌ಪುರ ಕೇಂದ್ರ ಜೈಲಿನಲ್ಲಿದ್ದಾರೆ.

ಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು ಸಂವಿಧಾನದ 6ನೇ ಪರಿಚ್ಚೇದಕ್ಕೆ ಸೇರಿಸುವಂತೆ ಆಗ್ರಹಿಸಿ ವಾಂಗ್‌ಚುಕ್ ಹಲವು ಬಾರಿ ಉಪವಾಸ ಸತ್ಯಾಗ್ರಹ, ಪ್ರತಿಭಟನೆ ನಡೆಸಿದ್ದಾರೆ. ಸೆಪ್ಟೆಂಬರ್ 24ರಂದು ಲೇಹ್‌ನಲ್ಲಿ ಪ್ರತಿಭಟನಾ ಸ್ಥಳದ ಹೊರಭಾಗದಲ್ಲಿ ಹಿಂಸಾಚಾರ ನಡೆದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಇದಾದ ಬಳಿಕ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಸೆ.26ರಂದು ಸೋನಮ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...