ಪತ್ರಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್‌: ತಮಿಳು ನಟ ಶೇಖರ್ ಗೆ ಚಾಟಿ ಬೀಸಿದ ಸುಪ್ರೀಂ

Date:

ಮಹಿಳಾ ಪತ್ರಕರ್ತೆಯ ವಿರುದ್ಧವಾಗಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ತಮಿಳು ನಟ, ಮಾಜಿ ಬಿಜೆಪಿ ಮುಖಂಡ, ಪಕ್ಷಾಂತರಗೊಳ್ಳುವುದರಲ್ಲೇ ಖ್ಯಾತಿ ಪಡೆದಿರುವ ರಾಜಕಾರಣಿ ಎಸ್‌ವಿ ಶೇಖರ್‌ ವಿರುದ್ಧ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ಶೇಖರ್‌ ಅವರನ್ನು ತೀವ್ರವಾಗಿ ಟೀಕಿಸಿರುವ ಸರ್ವೋಚ್ಛ ನ್ಯಾಯಾಲಯ, ಪೋಸ್ಟ್ ಅನ್ನು ಪತ್ರಕರ್ತೆಯ ಘನತೆಗೆ ನೇರವಾಗಿ ದಾಳಿ ಮಾಡುವ ‘ಅಸಹ್ಯ ಅಭಿಯಾನ’ ಎಂದು ಕರೆದಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು ಮುಂದಿನ ವಿಚಾರಣೆಯವರೆಗೆ ಶೇಖರ್‌ ಅವರಿಗೆ ಬಂಧನದಿಂದ ಮುಕ್ತಿ ನೀಡಿದೆ. ಆದರೆ ಅವರ ಉದ್ದೇಶಗಳನ್ನು ಪ್ರಶ್ನಿಸಿದೆ. ಶೇಖರ್ ಅವರು ಪೂರ್ಣ ಮನಸ್ಸಿನಿಂದ ಕ್ಷಮೆಯಾಚಿಸಿಲ್ಲ ಎಂದು ಹೇಳಿದೆ.

ಇದನ್ನು ಓದಿದ್ದೀರಾ? ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ನಟ ದರ್ಶನ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೊದಲನೆಯದಾಗಿ ನೀವು ಈ ರೀತಿ ಪೋಸ್ಟ್ ಮಾಡಿರುವುದು ನಮಗೆ ಆಶ್ಚರ್ಯ ತಂದಿದೆ. ಇದು ಮಹಿಳೆಯ ವಿರುದ್ಧ ನೀವು ನಡೆಸಿದ ಅಸಹ್ಯ ಅಭಿಯಾನವಾಗಿತ್ತು. ನೀವು ಅವರ ಘನತೆಗೆ ನೇರವಾಗಿ ಮತ್ತು ತುಂಬಾ ಲಜ್ಜೆಗೆಟ್ಟ ದಾಳಿಯನ್ನು ಮಾಡಿದ್ದೀರಿ” ಎಂದು ಸುಪ್ರೀಂ ಕೋರ್ಟ್‌ ಶೇಖರ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

“ಶೇಖರ್ ಇತರ ಮಹಿಳೆಯರಿಗೂ ಕಿರುಕುಳ ನೀಡಿರಬಹುದು” ಎಂದು ಕಳವಳ ವ್ಯಕ್ತಪಡಿಸಿರುವ ಕೋರ್ಟ್, ಆದರೆ ಈ ಬಾರಿ ಪತ್ರಕರ್ತರ ಸಂಘದ ಎದುರು ಸಿಲುಕಿದ್ದಾರೆ ಎಂದಿದೆ. ಇನ್ನು ನಟನ ಪರವಾಗಿ ಹಾಜರಾದ ವಕೀಲ ಬಾಲಾಜಿ ಶ್ರೀನಿವಾಸನ್, ಶೇಖರ್ ಅವರು ಸಂದೇಶವನ್ನು ಓದದೆ ಫಾರ್ವರ್ಡ್ ಮಾಡಿ ಒಂದು ಗಂಟೆಯೊಳಗೆ ಅದನ್ನು ಡಿಲೀಟ್ ಮಾಡಿದ್ದಾರೆ ಎಂದು ವಾದಿಸಿದ್ದಾರೆ.

ದೂರುದಾರರನ್ನು ಸಂಪರ್ಕಿಸಿ ಬೇಷರತ್ತಾದ ಕ್ಷಮೆಯಾಚಿಸಲು ಶೇಖರ್ ಅವರ ವಕೀಲರು ನಾಲ್ಕು ವಾರಗಳ ಕಾಲಾವಕಾಶವನ್ನು ಕೋರಿದರು.

2018ರಲ್ಲಿ ಪತ್ರಕರ್ತೆಯೊಬ್ಬರ ವಿರುದ್ಧ ಶೇಖರ್ ಅವರು ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಪೋಸ್ಟ್ ವ್ಯಾಪಕ ಖಂಡನೆಗೆ ಗುರಿಯಾಯಿತು. ಪತ್ರಕರ್ತರ ಸಂಘವು ಶೇಖರ್ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿದೆ. ಪಕ್ಷದಿಂದ ಪಕ್ಷಕ್ಕೆ ಜಿಗಿಯುವ ಮೂಲಕವೇ ಹೆಚ್ಚು ಸುದ್ದಿಯಾಗಿರುವ ತಮಿಳು ನಟ ಈ ಪೋಸ್ಟ್ ಮಾಡುವಾಗ ಬಿಜೆಪಿಯಲ್ಲಿದ್ದರು.

2006ರಲ್ಲಿ ಎಐಎಡಿಎಂಕೆ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದ ಶೇಖರ್ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮೈಲಾಪುರ ಶಾಸಕರಾಗಿದ್ದರು. 2009ರಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದಲ್ಲಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದರು. ಅದಾದ ಬಳಿಕ ಕಾಂಗ್ರೆಸ್ ಸೇರಿದ್ದರು. ಅಲ್ಲಿಯೂ ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಉಚ್ಛಾಟನೆಗೊಂಡು ಬಿಜೆಪಿಗೆ ಸೇರಿದರು. 2009ರಲ್ಲಿ ಶೇಖರ್ ದಕ್ಷಿಣ ಭಾರತದ ಬ್ರಾಹ್ಮಣರ ಸಂಘಟನೆಯನ್ನೂ (Federation of Brahmin Associations of South India) ಸ್ಥಾಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...