ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್ ಜೆರ್ಸಿಯಲ್ಲಿ ‘ನಂದಿನಿ’ ಲಾಂಛನ; ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಮಹತ್ವದ ಹೆಜ್ಜೆ: ಸಿಎಂ

Date:

ಐಸಿಸಿ ಪುರುಷರ ಟಿ–20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಗೆ ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ‘ನಂದಿನಿ’ ಲಾಂಛನ ಇರುವ ನೂತನ ಜೆರ್ಸಿಯನ್ನು ಸ್ಕಾಟ್ಲೆಂಡ್ ಬಿಡುಗಡೆ ಮಾಡಿದೆ. ಹೊಸ ಜೆರ್ಸಿಯನ್ನು ತೊಟ್ಟಿರುವ ಆಟಗಾರರ ಚಿತ್ರವನ್ನು ಕ್ರಿಕೆಟ್ ಸ್ಕಾಟ್ಲೆಂಡ್‌ ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.

ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿ, “ಈ ಬಾರಿ ವಿಶ್ವಕಪ್‌ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ” ಎಂದು ಬಣ್ಣಿಸಿದ್ದಾರೆ.

“ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಜೆರ್ಸಿಯ ಬಲ ತೋಳಿನಲ್ಲಿ ನಂದಿನಿ ಲಾಂಛನವನ್ನು ಹಾಕಲಾಗಿದೆ. ನಂದಿನಿ ಎಂದು ಕನ್ನಡ ಹಾಗೂ ಇಂಗ್ಲೀಷ್‌ನಲ್ಲಿ ಬರೆಯಲಾಗಿದೆ.

“ಟಿ–20 ಅಭಿಯಾನದಲ್ಲಿ ಸ್ಕಾಟ್ಲೆಂಡ್‌ ಜೊತೆ ಪಾಲುದಾರಿಕೆ ಹೊಂದಿದ್ದು ನಮಗೆ ಸಂತೋಷವಾಗಿದೆ. ನಂದಿನಿಯು ಒಂದು ಬ್ರಾಂಡ್ ಆಗಿ ಶ್ರೇಷ್ಠತೆ ಮತ್ತು ಶುದ್ಧತೆಯನ್ನು ಪ್ರತಿನಿಧಿಸುತ್ತದೆ. ಕಳೆದ ನಲವತ್ತು ವರ್ಷಗಳಲ್ಲಿ ನಾವು ಜಾಗತಿಕ ಬ್ರಾಂಡ್ ಆಗಿ ಬೆಳೆದಿದ್ದೇವೆ” ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ ಜಗದೀಶ್‌ ಅವರ ಹೇಳಿಕೆಯನ್ನು ಕ್ರಿಕೆಟ್ ಸ್ಕಾಟ್ಲೆಂಡ್‌ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

“ನಂದಿನಿ ಜೊತೆ ಪಾಲುದಾರರಾಗಿದ್ದು ನಮಗೆ ಸಂತೋಷ ಉಂಟು ಮಾಡಿದೆ. ನಮ್ಮ ಪುರುಷರ ಕ್ರಿಕೆಟ್ ತಂಡಕ್ಕೆ ಸ್ಥಾಪಿತವಾದ ಬ್ರ್ಯಾಂಡ್‌ ಬೆಂಬಲ ನೀಡುತ್ತಿರುವುದೇ ಅದ್ಭುತ. ಅವರ ಬ್ರ್ಯಾಂಡ್‌ ಹಾಗೂ ಸ್ಕಾಟ್ಲೆಂಡ್‌ ಕ್ರಿಕೆಟ್‌ ಅನ್ನು ಪ್ರಚಾರ ಪಡಿಸಲು ನಂದಿನಿ ಜೊತೆ ಕೆಲಸ ಮಾಡಲು ನಾವು ಎದುರು ನೋಡುತ್ತಿದ್ದೇವೆ. ವಿಶ್ವಕಪ್‌ನಲ್ಲಿ ಇಂಗ್ಲೆಂಡ್‌, ನಮೀಬಿಯಾ, ಒಮಾನ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಆಡುವಾಗ ನಂದಿನಿ ಲಾಂಛನ ಜೊತೆಗೆ ಹೆಮ್ಮೆಯ ಸ್ಕಾಟ್ಲೆಂಡ್‌ ಬಣ್ಣಗಳೂ ಇರಲಿವೆ” ಎಂದು ಕ್ರಿಕೆಟ್ ಸ್ಕಾಟ್ಲೆಂಡ್‌ನ ವಾಣಿಜ್ಯ ಕಾರ್ಯನಿರ್ವಾಹಕ ಕ್ಲಾರ್‌ ಡ್ರುಮಂಡ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...