ಕಾಂಗ್ರೆಸ್‌ಗೆ ನೀಡಿರುವ ಐಟಿ ನೋಟಿಸ್‌ ಎಲ್ಲ ವಿಪಕ್ಷಗಳಿಗೆ ಎಚ್ಚರಿಕೆ ಸಂದೇಶ: ಪಿ ಚಿದಂಬರಂ

Date:

“ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್‌ಗೆ ನೀಡಿರುವ ಐಟಿ ನೋಟಿಸ್, ಎಲ್ಲ ವಿಪಕ್ಷಗಳಿಗೆ ಮತ್ತು ದೇಶದ ಜನರಿಗೆ ಎಚ್ಚರಿಕೆ ಸಂದೇಶವಾಗಿದೆ” ಎಂದು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಪಿ ಚಿದಂಬರಂ ಹೇಳಿದರು.

ತಮಿಳುನಾಡಿನ ಪುದುಕೊಟ್ಟೈನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್‌ಗೆ ಆದಾಯ ತೆರಿಗೆ ಇಲಾಖೆಯು 135 ಕೋಟಿ ರೂಪಾಯಿಗಳ ಐಟಿ ನೋಟಿಸ್ ಅನ್ನು ನೀಡಲಾಗಿದ್ದು, ಬಿಜೆಪಿಯು ವಿಪಕ್ಷಗಳನ್ನು ನಾಶ ಮಾಡಲು ಉದ್ದೇಶ ಹೊಂದಿದೆ” ಎಂದು ದೂರಿದರು.

“ಬಿಜೆಪಿಯು ಚುನಾವಣಾ ಬಾಂಡ್‌ಗಳ ಮೂಲಕ ಸುಮಾರು 8,250 ಕೋಟಿ ರೂಪಾಯಿಯನ್ನು ಪಡೆದುಕೊಂಡಿದೆ. ಆದರೆ ಬಿಜೆಪಿ ಸರ್ಕಾರವು ಕಾಂಗ್ರೆಸ್‌ ಮೇಲೆ 135 ಕೋಟಿ ರೂಪಾಯಿಯ ದಂಡವನ್ನು ವಿಧಿಸಿದೆ. ಇದು ಎಲ್ಲ ರಾಜಕೀಯ ಪಕ್ಷಗಳು ಮತ್ತು ಜನರಿಗೆ ಬಿಜೆಪಿಯು ಎಲ್ಲ ವಿಪಕ್ಷಗಳನ್ನು ನಾಶ ಮಾಡಲು ಬಯಸುತ್ತದೆ ಎಂಬ ಎಚ್ಚರಿಕೆಯಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಕಾಂಗ್ರೆಸ್ ಬ್ಯಾಂಕ್ ಖಾತೆ ನಿರ್ಬಂಧ ಉಲ್ಲೇಖ; ಕೇಜ್ರಿವಾಲ್ ಬಂಧನದ ಬಗ್ಗೆ ಮತ್ತೆ ಹೇಳಿಕೆ ನೀಡಿದ ಅಮೆರಿಕಾ

“ಈ ದೇಶದಲ್ಲಿ ಬಿಜೆಪಿ ಮಾತ್ರ ಇರಬೇಕು ಎಂಬುವುದು ಅದರ ನಾಯಕರ ಬಯಕೆ. ಇದುವೇ ‘ಒಂದು ದೇಶ, ಒಂದು ಚುನಾವಣೆ’ ಎಂಬ ಅಜೆಂಡಾದ ಭಾಗವಾಗಿದೆ. ಇತ್ತು ಮತ್ತೇನಲ್ಲ ‘ಒಂದು ದೇಶ, ಒಂದು ಪಕ್ಷ’ ಆಗಿದೆ. ಇದು ಎಲ್ಲರಿಗೂ ನೀಡಲಾಗಿರುವ ಎಚ್ಚರಿಕೆ. ಜನರಿಗೆ ಇದು ಅರ್ಥವಾಗಲಿದೆ” ಎಂದು ಹಿರಿಯ ಕಾಂಗ್ರೆಸ್ ನಾಯಕ ಅಭಿಪ್ರಾಯಿಸಿದರು.

ಈ ನಡುವೆ ಶುಕ್ರವಾರ ಕಾಂಗ್ರೆಸ್‌ಗೆ ಮತ್ತೊಂದು ಆದಾಯ ತೆರಿಗೆ ನೋಟಿಸ್ ಅನ್ನು ನೀಡಲಾಗಿದೆ. ಬರೋಬ್ಬರಿ 1,823.08 ಕೋಟಿ ರೂಪಾಯಿ ದಂಡವನ್ನು ಪಾವತಿಸುವಂತೆ ಕಾಂಗ್ರೆಸ್‌ಗೆ ಐಟಿ ಇಲಾಖೆ ತಿಳಿಸಿದೆ. ಇದಕ್ಕೂ ಮುನ್ನ ಕಾಂಗ್ರೆಸ್‌ನ ಬ್ಯಾಂಕ್‌ ಖಾತೆಗಳನ್ನ ಸೀಝ್ ಮಾಡಲಾಗಿದೆ. “ಲೋಕಸಭೆ ಚುನಾವಣೆ ಸಂದರ್ಭದಲ್ಲಿ ವಿಪಕ್ಷಗಳು ಆರ್ಥಿಕವಾಗಿ ಕುಗ್ಗಿಸಲು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ಹುನ್ನಾರ ಇದಾಗಿದೆ” ಎಂದು ಕಾಂಗ್ರೆಸ್ ನಾಯಕರುಗಳು ಆರೋಪಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆ ಬಂದ್ ಮಾಡಿರುವುದನ್ನು ಯುಎಸ್‌ ವಕ್ತಾರರು ಕೂಡಾ ಪ್ರಸ್ತಾಪಿಸಿದ್ದು, “ಈ ಪ್ರಕರಣದ ಬೆಳವಣಿಗೆ ಬಗ್ಗೆ ಗಮನಹರಿಸುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...