ವ್ಯಾಪಾರಿಗಳಿಗೆ ಪರವಾನಿಗೆ ನೀಡಲು ಕ್ರಮ ವಹಿಸಿ: ಅಧಿಕಾರಿಗಳಿಗೆ ಸಚಿವ ಮಹದೇವಪ್ಪ ಸೂಚನೆ

Date:

ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್ ಸಿ ಮಹದೇವಪ್ಪ ಅವರು ತಮ್ಮ ಇಲಾಖೆಯಡಿ ಬರುವ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಶುಕ್ರವಾರ ವಿಧಾನಸಭೆಯ ಸಭಾಂಗಣದಲ್ಲಿ ನೋಡಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸರ್ಕಾರದ ಎಲ್ಲಾ ಇಲಾಖೆಗಳಿಗೆ 2023-24 ನೇ ಸಾಲಿನಲ್ಲಿ ಹಂಚಿಕೆಯಾದ ಅನುದಾನದ ಪ್ರಗತಿ ಮತ್ತು 2024-25 ನೇ ಸಾಲಿನ ಅನುದಾನ ಹಂಚಿಕೆಗೆ ಸಂಬಂಧಿಸಿದಂತೆ ವಿಸ್ತೃತವಾದ ಚರ್ಚೆಯನ್ನು ಸಚಿವರು ಸಭೆಯಲ್ಲಿ ನಡೆಸಿದರು.

ಪ್ರವಾಸೋದ್ಯಮ ಇಲಾಖೆ ಸಂಬಂಧ ಮಾತನಾಡಿ, “ಸಿಬ್ಬಂದಿಗಳಿಗೆ ಸೂಕ್ತ ರೀತಿಯ ತರಬೇತಿ ನೀಡಬೇಕು. ಕ್ಯಾಂಟಿನ್ ಹಾಗೂ ಇತರೆ ವ್ಯಾಪಾರಿ ಪರವಾನಿಗೆ ನೀಡುವ ಕ್ರಮ ವಹಿಸಬೇಕು” ಎಂದು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕನ್ನಡ ಸಂಸ್ಕೃತಿ ಇಲಾಖೆಯಲ್ಲಿ ಸ್ಥಳೀಯ ಕಲೆಗಳಿಗೆ ಹೆಚ್ಚಿನ ಅನುದಾನ ನೀಡಿ ಉತ್ತೇಜನ ನೀಡಬೇಕು. ಪಶುಸಂಗೋಪನೆ ಇಲಾಖೆಯಡಿ ಕೋಳಿ ಮರಿ ಹಾಗೂ ಮೇಕೆಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವ ಮೂಲಕ ಅವರ ಜೀವನೋಪಯಕ್ಕೆ ನೆರವಾಗಬೇಕು” ಎಂದು ಸಲಹೆ ನೀಡಿದರು.

“ವಸತಿ ಯೋಜನೆಯಡಿ ಅಗತ್ಯ ಹಣಕಾಸು ಸೌಲಭ್ಯವನ್ನು ನೀಡಿದ್ದರೂ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ವಸತಿ ಸೌಲಭ್ಯವನ್ನು ಕಲ್ಪಿಸಲು ಸಾಧ್ಯವಾಗದ್ದಕ್ಕೆ ಅಧಿಕಾರಿಗಳಿಗೆ ಕಾರ್ಯೋನ್ಮುಖರಾಗಬೇಕು” ಎಂದು ಸೂಚನೆ ನೀಡಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಾರ್ಷಿಕ ಪರೀಕ್ಷೆಯಲ್ಲಿ ನಕಲು ಮಾಡುವುದನ್ನು ತಡೆಗಟ್ಟಲು ಸಿಸಿ ಕ್ಯಾಮೆರಾವನ್ನು ಪರೀಕ್ಷಾ ಕೇಂದ್ರಗಳಲ್ಲಿ ಪರಿಣಾಮಾಕಾರಿಯಾಗಿ ಅಳವಡಿಸಬೇಕು. ಸಣ್ಣ ಸಣ್ಣ ಗ್ರಂಥಾಲಯಗಳ ನಿರ್ಮಾಣಕ್ಕೆ ಚಿಂತನೆ ಇದ್ದು, ಇದಕ್ಕಾಗಿ ಎಸ್‌ಸಿಎಸ್‌ಪಿ ಅನುದಾನದ ನೀಡಬೇಕೆಂಬ ಕೋರಿಕೆಯ ಕುರಿತು ಚಿಂತನೆ ನಡೆಸಿದರು.

ಸಣ್ಣ ಕೈಗಾರಿಕಾ ಇಲಾಖೆಯ KAIDB ಭೂಮಿಯನ್ನು ಮುಖ್ಯ ಸ್ಥಳದಲ್ಲಿ ನೀಡಬೇಕು ಮತ್ತು ಆಯ್ಕೆ ಮಾಡುವ ವೇಳೆ ಮೂಲ ಇಲಾಖೆಯನ್ನು ಪರಿಗಣಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್, ಆಯುಕ್ತರಾದ ರಾಕೇಶ್ ಕುಮಾರ್ ಸೇರಿದಂತೆ ಇಲಾಖೆಯ ಸಲಹೆಗಾರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...