ಮರಾಠಿ ಪುಂಡರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಸರಕಾರಕ್ಕೆ ವಿಜಯೇಂದ್ರ ಆಗ್ರಹ

Date:

ಕನ್ನಡಿಗರ ಭಾವನೆಗೆ ಧಕ್ಕೆ ತರುವ ಮರಾಠಿ ಪುಂಡರ ವಿರುದ್ಧ ರಾಜ್ಯ ಸರಕಾರವು ದೃಢತೆಯಿಂದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.

ಮೈಸೂರಿನಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಕನ್ನಡಿಗರ ವಿಚಾರದಲ್ಲಿ ಈ ಭಂಡ ಸರಕಾರ ರಾಜಕಾರಣ ಮಾಡುತ್ತದೆ ಎಂದು ಅನಿಸುತ್ತಿಲ್ಲ. ಪ್ರಚೋದನಕಾರಿ ಹೇಳಿಕೆ ಕೊಡುವುದು ಮತ್ತು ಪುಂಡಾಟಿಕೆ ಮಾಡುವವರಿಂದ ಎರಡೂ ರಾಜ್ಯಗಳಲ್ಲಿ ಕಾನೂನು- ಸುವ್ಯವಸ್ಥೆ ಹದಗೆಡುವ ಪರಿಸ್ಥಿತಿ ನಿರ್ಮಾಣವಾಗಲಿದೆ” ಎಂದು ಕಳವಳ ವ್ಯಕ್ತಪಡಿಸಿದರು.

“ಕನ್ನಡಿಗರನ್ನು ಬೆದರಿಸುವವರು, ಪುಂಡಾಟಿಕೆ ಮಾಡುವವರ ವಿರುದ್ಧ ರಾಜ್ಯ ಸರಕಾರವು ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಇದು ರಾಜ್ಯಕ್ಕೇ ಹರಡುವ ಸಾಧ್ಯತೆ ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉಚಿತ ವಿದ್ಯುತ್ ಹಣವನ್ನು ಸರಕಾರ ಭರಿಸಬೇಕಿದೆ. ಇಲ್ಲದಿದ್ದರೆ, ಸಾರ್ವಜನಿಕರಿಂದ ಹಣ ವಸೂಲಿಗೆ ಅವಕಾಶ ಕೊಡುವಂತೆ ಎಸ್ಕಾಂಗಳು ಕೆಇಆರ್‌ಸಿಗೆ ಮನವಿ ಸಲ್ಲಿಸಿವೆ. ನಾನು ಇವತ್ತು ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ವೇಳೆ ಕೊಟ್ಟ ಗ್ಯಾರಂಟಿ ಯೋಜನೆಗಳ ಕುರಿತ ವಾಗ್ದಾನ ಈಡೇರುತ್ತಿಲ್ಲ; ಗ್ಯಾರಂಟಿಗಳು ಜನರಿಗೆ ಸರಿಯಾಗಿ ತಲುಪುತ್ತಿಲ್ಲ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

“ಪಿಡಬ್ಲ್ಯುಡಿ, ನೀರಾವರಿ ಇಲಾಖೆಗಳು ವಿದ್ಯುತ್ ಕಂಪೆನಿಗಳಿಗೆ 6 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡಿದ್ದಾಗಿ ಸಚಿವರೇ ಹೇಳಿದ್ದಾರೆ. ಇನ್ನೊಂದು ಕಡೆ ಶಕ್ತಿ ಯೋಜನೆ ಪ್ರಯುಕ್ತ ರಾಜ್ಯ ಸರಕಾರವು ಕೆಎಸ್‍ಆರ್‌ಟಿಗೆ 7 ಸಾವಿರ ಕೋಟಿ ಬಾಕಿ ಕೊಡಬೇಕಾಗಿದೆ. ಮತ್ತೊಂದು ಕಡೆ ವಿದ್ಯುತ್ ಕಂಪೆನಿಗಳು ಹಣಕ್ಕಾಗಿ ತಾಕೀತು ಮಾಡಿವೆ. ರಾಜ್ಯ ಸರಕಾರ ಹಣ ಕೊಡಬೇಕು; ಇಲ್ಲವೇ ಗ್ರಾಹಕರ ಮೇಲೆ ಈ ಭಾರ ಹೊರಿಸಬೇಕಾಗುತ್ತದೆ” ಎಂದರು.

“ಮುಖ್ಯಮಂತ್ರಿಗಳು ಮತ್ತು ಸಚಿವರು ಈ ಕುರಿತಂತೆ ಜನರ ಕಿವಿಗೆ ಹೂವು ಮುಡಿಸುವುದನ್ನು ಬಿಟ್ಟು ವಾಸ್ತವಿಕ ಸತ್ಯವನ್ನು ತಿಳಿಸಬೇಕು ಎಂದು ಒತ್ತಾಯಿಸಿದರು. ಕರ್ನಾಟಕದ ಆರ್ಥಿಕ ಸ್ಥಿತಿಗತಿ, ಸಂಕಷ್ಟದ ಕುರಿತು ಮುಖ್ಯಮಂತ್ರಿಗಳು ಉತ್ತರಿಸಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...