ಸದನ-ಕದನ | ನಾನಾಗಿದ್ರೆ 24 ಗಂಟೆಯಲ್ಲಿ ನಿನ್ನ ಅಮಾನತು ಮಾಡ್ತಿದ್ದೆ: ಯತ್ನಾಳ್‌ ವಿರುದ್ಧ ಡಿಕೆಶಿ ಗುಡುಗು

Date:

  • ಅಧಿಕಾರಿಗಳ ವರ್ಗಾವಣೆ ವಿಚಾರಕ್ಕೆ ಸದನದಲ್ಲಿ ವಾಗ್ವಾದ
  • ಬಿಜೆಪಿ ಶಾಸಕನ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ

ವಿಧಾನಮಂಡಲ ಅಧಿವೇಶನದಲ್ಲಿ ಅಧಿಕಾರಿಗಳ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ನಡುವೆ ವಾಗ್ವಾದ ನಡೆಯಿತು.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಅವರು ವರ್ಗಾವಣೆಯಲ್ಲಿ ವ್ಯಾಪಾರ ಆಗಿದೆ ಎಂದು ಗಂಭೀರ ಆರೋಪ ಮಾಡಿದರು. ಆಗ ಕುರ್ಚಿಯಿಂದ ಎದ್ದ ಡಿ ಕೆ ಶಿವಕುಮಾರ್, ಏ.. ಕೂತ್ಕೋಳಯ್ಯಾ ಎಂದು ಏಕವಚನದಲ್ಲೇ ಯತ್ನಾಳ್​ ವಿರುದ್ಧ ವಾಗ್ದಾಳಿ ನಡೆಸಿದರು.

“ಸಿಎಂ ಹುದ್ದೆ 2,500 ಕೋಟಿ ರೂ. ಮಂತ್ರಿ ಹುದ್ದೆನೂ ಸಾವಿರ ಕೋಟಿ ಎಂದು ಹೇಳುತ್ತಿದ್ದವರು ನೀವು. ಏ.. ಕುತ್ಕೋಳಯ್ಯ ಕಂಡಿದ್ದೀನಿ. ಏನೇನು ಮಾತಾಡಿದ್ದೀರಿ, ಏನೇನು ಕಥೆ ಎನ್ನುವ ಹಿಸ್ಟರಿ ನಮ್ಮತ್ರ ಇದೆ. ಅರ್ಥ ಆಯಿತಾ. ಆವಾಗ ನಿಮ್ಮ ಸಿಎಂ ಸುಮ್ಮನಿದ್ದರೆಂದು ನಾವು ಸುಮ್ಮನಿರಕ್ಕೆ ತಯಾರಿಲ್ಲ. ನಿನ್​ ಮಾತ್​ ಮೇಲೆ, ನಾಲಿಗೆ ಮೇಲೆ ಹಿಡಿತವಿರಬೇಕು. ಆವತ್ತು ಅವರು ಸುಮ್ಮನಿದ್ದರು. ನನ್ನಂತವನಾಗಿದ್ದರೆ ಆವತ್ತೇ 24 ಗಂಟೆಯಲ್ಲಿ ಪಾರ್ಟಿಯಿಂದ ಡಿಸ್ಮಿಸ್​ ಮಾಡುತ್ತಿದ್ದೆ. ನಿಮ್ಮಂತರಿಂದಲೇ ಇವತ್ತು ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತಿರುವುದು ಎಂದು ಡಿ.ಕೆ. ಶಿವಕುಮಾರ್​ ಗುಡುಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಆಕ್ರೋಶಗೊಂಡ ಬಸನಗೌಡ ಪಾಟೀಲ್‌ ಯತ್ನಾಳ್‌, “ನೀವು ಭ್ರಷ್ಟ ಬಂಡೆ.. ನಾನೇಕೆ ಹೆದರಬೇಕು. ನಿಮ್ಮಂತಹ ಪಕ್ಷಕ್ಕೆ ನಾನು ಏಕೆ ಬರುತ್ತಿದ್ದೆ ಹೇಳಿ. ನನ್ನ ಉಚ್ಛಾಟನೆ ಮಾಡಲು ಇವನ್ಯಾರು, ಹೂ ಇಸ್​ ದಿಸ್” ಎಂದು ಸಿಟ್ಟಿನಿಂದಲೇ ಪ್ರಶ್ನೆ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿ ಕೆ ಶಿವಕುಮಾರ್‌, ಅದಕ್ಕೇ ನಾನು ಈ ಕಡೆ ಬಂದು ಕುಳಿತಿರೋದು ಎಂದು ಹೇಳಿದರು.‌ ಆಗ ಏನ್‌ ಮಾಡ್ತಾರೋ ನೋಡೇ ಬಿಡೋಣ ಎಂದು ಯತ್ನಾಳ್‌ ಸಿಟ್ಟಿಗೆದ್ದರು. ಅದಲ್ಲದೇ ಡಿಕೆ ಶಿವಕುಮಾರ್‌ ಕ್ಷಮೆ ಕೇಳಬೇಕೆಂದು ಯತ್ನಾಳ್‌ ಸೇರಿ ಬಿಜೆಪಿ ಶಾಸಕರು ಬಾವಿಗಿಳಿದು ಧರಣಿ ಶುರು ಮಾಡಿದರು.

ಈ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಕಾದ ಅಧಿಕಾರಿಯನ್ನು ಹಾಕಲಿ. ನೋಡೇ ಬಿಡೋಣ ಎಂದು ಸವಾಲು ಹಾಕಿದರು. ಅದಲ್ಲದೇ ಅಧಿಕಾರ ಶಾಶ್ವತವಲ್ಲ. ಲೂಟಿ ಮಾಡ್ತಿದೀರಾ ಎಂದು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ವೇಳೆ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೂಟಿ ಮಾಡುತ್ತಿರುವುದಕ್ಕೆ ನೀವು ಅಧಿಕಾರ ಕಳೆದುಕೊಂಡು ಅಲ್ಲಿ ಹೋಗಿ ಕೂತಿರೋದು ಎಂದು ಕಿಡಿಕಾರಿದರು.

ಈ ಹಿನ್ನೆಲೆ ಸಚಿವ ಬೈರತಿ ಸುರೇಶ್‌ ಅವರು ಕ್ಷಮೆ ಕೇಳಬೇಕು ಎಂದು ಬಿಜೆಪಿ ಸದಸ್ಯರು ಆಗ್ರಹಿಸಿದರು. ಇದರಿಂದ ಸದನದಲ್ಲಿ ಗದ್ದಲ ಸೃಷ್ಟಿಯಾಯಿತು. ಸದನದಲ್ಲಿ ಆಡಳಿತ, ವಿಪಕ್ಷಗಳ ನಡುವೆ ತೀವ್ರ ವಾಗ್ವಾದದ ಹಿನ್ನೆಲೆ ವಿಧಾನಸಭೆ ಕಲಾಪವನ್ನು ಸ್ಪೀಕರ್ ಯುಟಿ ಖಾದರ್ ಹತ್ತು ನಿಮಿಷ ಮುಂದೂಡಿದರು.

ಗದ್ದಲಕ್ಕೆ ಕಾರಣವೇನು? ಯಾವುದೇ ಪ್ರಕರಣವಿರಲಿ, ಸರ್ಕಾರ ಯಾರ ರಕ್ಷಣೆಗೂ ಮುಂದಾಗುವುದಿಲ್ಲ: ಸದನಕ್ಕೆ ಸಿಎಂ ಭರವಸೆ

“ವಿಜಯಪುರ ಮಹಾನಗರ ಪಾಲಿಕೆಗೆ ವಲಯ ಆಯುಕ್ತರಿಗಿಂತ ಕಡಿಮೆ ಗ್ರೇಡ್‌ನ ಅಧಿಕಾರಿಯನ್ನು ಆಯುಕ್ತರನ್ನಾಗಿ ನಿಯೋಜನೆ ಮಾಡಿದ್ದಾರೆ. ನಮ್ಮ ಸರ್ಕಾರ ಇದ್ದಾಗ ವರ್ಗಾವಣೆ ದಂಧೆ ಮಾಡಿಲ್ಲ. ಹಿಂದಿನ ಆಯುಕ್ತರನ್ನೇ ಮುಂದುವರಿಸಬೇಕು. ಇದೇನು ವರ್ಗಾವಣೆ ದಂಧೆನಾ?” ಎಂದು ಶೂನ್ಯವೇಳೆಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರಶ್ನಿಸಿದರು.

“ಅದಲ್ಲದೇ ಅನರ್ಹ ಅಧಿಕಾರಿಯನ್ನು ವಿಜಯಪುರ ಪಾಲಿಕೆಗೆ ಆಯುಕ್ತರನ್ನಾಗಿ ಮಾಡಿದ್ದೀರಿ, ಇದು ವ್ಯಾಪಾರವಲ್ಲದೇ ಮತ್ತೇನು” ಎಂದು ಆರೋಪಿಸಿದರು. ಶೂನ್ಯ ವೇಳೆಯಲ್ಲಿ ಚರ್ಚೆಗೆ ಅವಕಾಶ ಇಲ್ಲ, ನೀವು ಈ ಮನೆಯ ಹಿರಿಯ ಸದಸ್ಯರು, ನಿಯಮಗಳನ್ನು ಓದಿಕೊಂಡು ಬಂದು ಮಾತಾಡಿ ಎಂದು ಆಡಳಿತ ಪಕ್ಷದ ನಾಯಕರು ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಸದನದಲ್ಲಿ ಗದ್ದಲ ಪ್ರಾರಂಭವಾಯಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...