ತಮಿಳುನಾಡು | ʼಸ್ವಜನಪಕ್ಷಪಾತʼದ ಆರೋಪ; ಬಿಜೆಪಿ ವಿರುದ್ಧ ಉದಯನಿಧಿ ವಾಗ್ದಾಳಿ

Date:

‘ಸ್ವಜನಪಕ್ಷಪಾತ’ದ ಬಗ್ಗೆ ತಮ್ಮ ಪಕ್ಷದ ವಿರುದ್ಧ ಆಗಾಗ್ಗೆ ವಾಗ್ದಾಳಿ ನಡೆಸುತ್ತಿರುವ ಬಿಜೆಪಿಗೆ ಆಡಳಿತಾರೂಢ ಡಿಎಂಕೆ ನಾಯಕ, ಸಚಿವ ಉದಯನಿಧಿ ಸ್ಟಾಲಿನ್ ತಿರುಗೇಟು ನೀಡಿದ್ದಾರೆ. “ಇಡೀ ತಮಿಳುನಾಡು ಡಿಎಂಕೆ ನಾಯಕ ದಿ. ಕರುಣಾನಿಧಿ ಅವರ ಸಂಬಂಧಿಕರಾಗಿರುವುದರಿಂದ ನಾನು ಕುಟುಂಬ ರಾಜಕಾರಣ ಮಾಡುವ ಪಕ್ಷಕ್ಕೆ ಸೇರಿದವನು” ಎಂದಿದ್ದಾರೆ.

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಪುತ್ರ, ಕರುಣಾನಿಧಿ ಅವರ ಮೊಮ್ಮಗ, ಸಚಿವ ಉದಯನಿಧಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಬಿಜೆಪಿಯವರು ನಮ್ಮನ್ನು (ಡಿಎಂಕೆ) ಕುಟುಂಬ ರಾಜಕಾರಣ ನಡೆಸುವ ಪಕ್ಷವೆಂದು ಕರೆಯುತ್ತಾರೆ. ಡಿಎಂಕೆ ಕುಟುಂಬ ರಾಜಕಾರಣ ಮಾಡುವ ಪಕ್ಷ ಎಂಬುದನ್ನು ನಾನು ಒಪ್ಪುತ್ತೇನೆ. ಏಕೆಂದರೆ ಇಡೀ ತಮಿಳುನಾಡು ಕರುಣಾನಿಧಿ ಅವರ ಕುಟುಂಬವಾಗಿದೆ” ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆ ನಾಯಕ ಇ ಪಳನಿಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಉದಯನಿಧಿ, “ಎಐಎಡಿಎಂಕೆ ನಾಯಕಿ ದಿ. ಜಯಲಲಿತಾ ಮುಖ್ಯಮಂತ್ರಿಯಾಗಿದ್ದಾಗಲೂ ರಾಜ್ಯದಲ್ಲಿ ನೀಟ್ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ)ಗೆ ಅವಕಾಶವಿರಲಿಲ್ಲ. ಆದರೆ, ಅವರ ನಿಧನದ ನಂತರ, ಬಿಜೆಪಿಯ ದಾಸ ಸರ್ಕಾರ (ಹಿಂದಿನ ಎಐಎಡಿಎಂಕೆ ಆಡಳಿತ) ಬಿಜೆಪಿಗೆ ಹೆದರಿ ರಾಜ್ಯದಲ್ಲಿ ನೀಟ್ ಪರೀಕ್ಷೆಯನ್ನು ನಡೆಸಲು ಅನುಮತಿ ನೀಡಿತು” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀಟ್ ಪರೀಕ್ಷೆಯನ್ನು ತಮಿಳುನಾಡಿಗೆ ತರಲು ಹಿಂದಿನ ಸರ್ಕಾರ ತೆಗೆದುಕೊಂಡ ನಿರ್ಧಾರ ನಮ್ಮ ಹೆಣ್ಣುಮಕ್ಕಳಲ್ಲಿ ಒಬ್ಬರಾದ ಅನಿತಾ (ಅಖಿಲ ಭಾರತ ರಾಷ್ಟ್ರೀಯ ಮತ್ತು ವೈದ್ಯಕೀಯ ಎಂಜಿನಿಯರಿಂಗ್ ಪರೀಕ್ಷೆಯ ವಿರುದ್ಧ ಹೋರಾಟವನ್ನು ಮುನ್ನಡೆಸಿದ್ದರು) ಎಂಬುವವರ ಆತ್ಮಹತ್ಯೆಗೆ ಕಾರಣವಾಯಿತು. ಆ ಬಳಿಕ ನೀಟ್ ಪರೀಕ್ಷೆಯ ಭಯದಿಂದ ಈವರೆಗೆ 22 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದರು.

ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 19ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ತಮಿಳುನಾಡಿನ ಎಲ್ಲ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19ರಂದು ಮತದಾನ ನಡೆಯಲಿದೆ.

2019ರ ಸಾರ್ವತ್ರಿಕ ಚುನಾವಣೆಯ ಮತದಾನದಲ್ಲಿ, ಕಾಂಗ್ರೆಸ್, ವಿಸಿಕೆ, ಎಂಡಿಎಂಕೆ, ಸಿಪಿಐ, ಸಿಪಿಐ(ಎಂ), ಐಯುಎಂಎಲ್, ಎಂಎಂಕೆ, ಕೆಎಂಡಿಕೆ, ಟಿವಿಕೆ ಮತ್ತು ಎಐಎಫ್‌ಟಿ ಒಳಗೊಂಡ ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟವು 39 ಸ್ಥಾನಗಳಲ್ಲಿ 38 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ವಿಜಯವನ್ನು ದಾಖಲಿಸಿತ್ತು.

ಈ ಸುದ್ದಿ ಓದಿದ್ದೀರಾ? ದೆಹಲಿ ಸಿಎಂ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ

2019ರ ಲೋಕಸಭಾ ಚುನಾವಣೆಯಲ್ಲಿ ಡಿಎಂಕೆ 23 ಲೋಕಸಭಾ ಸ್ಥಾನಗಳನ್ನು ಗೆದ್ದು, ಒಟ್ಟು ಚಲಾವಣೆಯಾದ ಮತಗಳಲ್ಲಿ ಶೇ.33.2ರಷ್ಟ ಮತಗಳನ್ನು ಪಡೆದಿತ್ತು. ಕಾಂಗ್ರೆಸ್ 8 ಸ್ಥಾನಗಳನ್ನು ಗಳಿಸಿದರೆ, ಸಿಪಿಐ ಎರಡು ಸ್ಥಾನಗಳನ್ನು ಗೆದ್ದಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...