‘ಒಂದು ದೇಶ, ಒಂದು ಚುನಾವಣೆ’ ನೀತಿಗೆ ವಿರೋಧ: ನಿರ್ಣಯ ಅಂಗೀಕರಿಸಿದ ತಮಿಳುನಾಡು ಸರ್ಕಾರ

Date:

ಕಳೆದ ಕೆಲವು ತಿಂಗಳುಗಳಿಂದ ದೇಶಾದ್ಯಂತ ಚರ್ಚೆಯಲ್ಲಿರುವ ಕೇಂದ್ರ ಸರ್ಕಾರದ ಪ್ರಸ್ತಾವಿತ ‘ಒಂದು ದೇಶ, ಒಂದು ಚುನಾವಣೆ’ ನೀತಿಗೆ ವಿರೋಧ ವ್ಯಕ್ತಪಡಿಸಿರುವ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ, ಇಂದು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸುವ ಮೂಲಕ, ಅಂಗೀಕರಿಸಿಕೊಂಡಿದೆ.

‘ಒಂದು ದೇಶ, ಒಂದು ಚುನಾವಣೆ’ ನೀತಿ ಮಾತ್ರವಲ್ಲದೇ, ಜನಗಣತಿಯ ಆಧಾರದ ಮೇಲೆ ಕ್ಷೇತ್ರಗಳನ್ನು ಮರುವಿಂಗಡಣೆ ಮಾಡಬಾರದು ಎಂಬ ಎರಡು ಪ್ರತ್ಯೇಕ ನಿರ್ಣಯಗಳನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಇಂದು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ.

ಕಳೆದ ಸೋಮವಾರ ರಾಜ್ಯಪಾಲ ಆರ್.ಎನ್. ರವಿ ಅವರ ಭಾಷಣದೊಂದಿಗೆ ತಮಿಳುನಾಡಿನ ಬಜೆಟ್ ಅಧಿವೇಶನ ಪ್ರಾರಂಭವಾಗಿದೆ. ಪ್ರಸಕ್ತ ವರ್ಷದ ಬಜೆಟ್ ಫೆ.19 ರಂದು ಮಂಡನೆಯಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಇಂದು ಒಂದು ರಾಷ್ಟ್ರ, ಒಂದು ಚುನಾವಣೆ ಮತ್ತು ಕ್ಷೇತ್ರ ಪುನ‌ರ್ ಸಂಘಟನೆಯ ವಿರುದ್ಧ ಪ್ರತ್ಯೇಕ ನಿರ್ಣಯಗಳನ್ನು ಪ್ರಸ್ತಾಪಿಸಿದರು.

“ಒಂದು ದೇಶ ಒಂದು ಚುನಾವಣೆಯನ್ನು ಬಲವಾಗಿ ವಿರೋಧಿಸಬೇಕಿದೆ. ಜನಗಣತಿಯ ನಂತರ ಕ್ಷೇತ್ರಗಳನ್ನು ಪುನರ್ ರಚಿಸಲಾಗುವುದು ಎಂದು ಘೋಷಿಸಲಾಗಿದೆ. ಈ ಮೂಲಕ ತಮಿಳುನಾಡಿನಿಂದ ಚುನಾಯಿತರಾಗುವ ಜನಪ್ರತಿನಿಧಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ಸಂಚು ರೂಪಿಸಿದ್ದಾರೆ. ಇವೆರಡೂ ಕ್ರಮ ಪ್ರಜಾಪ್ರಭುತ್ವ ವಿರೋಧಿಯಾಗಿವೆ” ಎಂದು ಸಿಎಂ ನಿರ್ಣಯ ಮಂಡನೆಯ ವೇಳೆ ಹೇಳಿದರು.

“ಒಂದು ದೇಶ ಒಂದು ಚುನಾವಣೆ ಯೋಜನೆ ಸಂಪೂರ್ಣವಾಗಿ ಅಪ್ರಾಯೋಗಿಕವಾಗಿದ್ದು, ಸಂವಿಧಾನಕ್ಕೆ ವಿರುದ್ಧವಾಗಿದೆ. ಒಂದೇ ಚುನಾವಣೆಯು ಜನಪ್ರಿಯವಾಗಿ ಚುನಾಯಿತವಾದ ಶಾಸಕಾಂಗಗಳನ್ನು ಬೇಗನೆ ವಿಸರ್ಜಿಸಲು ಕಾರಣವಾಗಬಹುದು. ಯಾವುದೋ ರಾಜ್ಯದಲ್ಲಿ ಸರ್ಕಾರ ಪತನವಾದಾಗ ಏನು ಮಾಡುವುದು?” ಎಂದು ಕೇಳಿದ ಸ್ಟಾಲಿನ್, “ಇದೊಂದು ತಮಾಷೆಯ ವಿಷಯವಾಗಿದೆ. ಸಂಸದೀಯ ಚುನಾವಣೆಗಳನ್ನು ಕೂಡ ಸಹ ಒಂದೇ ಹಂತದಲ್ಲಿ ನಡೆಸಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಸ್ಥಳೀಯ ಸಂಸ್ಥೆಗಳು ರಾಜ್ಯ ಸರ್ಕಾರದ ನಿಯಂತ್ರಣದಲ್ಲಿರುವಾಗ, ಅವುಗಳಿಗೂ ಚುನಾವಣೆ ನಡೆಸಲಾಗುವುದು ಎಂದು ಹೇಳುವುದು ರಾಜ್ಯದ ಹಕ್ಕುಗಳನ್ನು ಕಸಿದುಕೊಂಡಂತಾಗುತ್ತದೆ” ಎಂದು ತಿಳಿಸಿದರು.

“ಕ್ಷೇತ್ರ ಪುನರ್‌ ವಿಂಗಡಣೆ ಮೂಲಕ ತಮಿಳುನಾಡಿನ ಸದಸ್ಯರ ಸಂಖ್ಯೆಯನ್ನು ಕಡಿಮೆ ಮಾಡುವ ತಂತ್ರಗಾರಿಕೆ ನಡೆಯುತ್ತಿದೆ. ಜನಸಂಖ್ಯೆ ಅಧಾರದ ಮೇಲೆ ಕ್ಷೇತ್ರ ಪುನರ್ವಿಂಗಡಣೆಯು ಜನಸಂಖ್ಯೆಯನ್ನು ನಿಯಂತ್ರಿಸದ ರಾಜ್ಯಗಳಿಗೆ ಲಾಭದಾಯಕವಾಗಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಜನಗಣತಿಯ ಪ್ರಕಾರ ಕ್ಷೇತ್ರಗಳನ್ನು ಪುನ‌ರ್ ರಚಿಸಿದರೆ ತಮಿಳುನಾಡಿನ ಪ್ರಾತಿನಿಧ್ಯ ಕಡಿಮೆಯಾಗುತ್ತದೆ. ಎಲ್ಲ ರಾಜ್ಯಗಳಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಗಂಭೀರ ಕ್ರಮಗಳನ್ನು ಕೈಗೊಳ್ಳುವವರೆಗೆ ಕ್ಷೇತ್ರಗಳ ಸಂಖ್ಯೆ ಇದೇ ರೀತಿ ಮುಂದುವರಿಯಬೇಕು.” ಎಂದು ಸಿಎಂ ಸ್ಟಾಲಿನ್ ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಹಗರಣ | ಅಕ್ರಮ ವ್ಯವಹಾರದ ಬಗ್ಗೆ ತನಿಖೆ ಆರಂಭಿಸಿದ ED: ವರದಿ

“ತಮಿಳುನಾಡಿನಲ್ಲಿ 39 ಲೋಕಸಭಾ ಸ್ಥಾನಗಳಿವೆ. ಡಿಲಿಮಿಟೇಶನ್ ಮಾಡಿದರೆ ನಮ್ಮ ಲೋಕಸಭಾ ಸ್ಥಾನಗಳ ಸಂಖ್ಯೆ ಕಡಿಮೆಯಾಗುತ್ತದೆ. 39 ಸಂಸದರಿದ್ದರೂ ನಮ್ಮ ಬೇಡಿಕೆಗಳಿಗೆ ಸಂಸತ್ತಿನಲ್ಲಿ ಬೆಲೆ ಸಿಗುವುದಿಲ್ಲ. ಈಗ ಈ ಸಂಖ್ಯೆಯನ್ನು ಇನ್ನೂ ಕಡಿಮೆ ಮಾಡಿದರೆ ಅದು ನಮ್ಮ ರಾಜ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು” ಎಂದು ತಮಿಳುನಾಡು ಸಿಎಂ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...