ಲೋಕಸಭಾ ಚುನಾವಣೆ | ತಮಿಳುನಾಡಿನ ಕೃಷ್ಣಗಿರಿ ಕ್ಷೇತ್ರದಿಂದ ವೀರಪ್ಪನ್ ಪುತ್ರಿ ಸ್ಪರ್ಧೆ

Date:

ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿಗೆ ರಾಜೀನಾಮೆ ನೀಡಿರುವ ವೀರಪ್ಪನ್ ಪುತ್ರಿ ವಿದ್ಯಾರಾಣಿ ಅವರು ʼನಾಮ್ ತಮಿಳರ್ ಕಚ್ಚಿʼ ಪಕ್ಷಕ್ಕೆ ಸೇರಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನ ಕೃಷ್ಣಗಿರಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಶನಿವಾರ ಘೋಷಿಸಿದ್ದಾರೆ.

ವೃತ್ತಿಯಲ್ಲಿ ವಕೀಲೆಯಾಗಿರುವ ವಿದ್ಯಾರಾಣಿ, 2020ರ ಜುಲೈನಲ್ಲಿ ಬಿಜೆಪಿಗೆ ಸೇರಿದ್ದರು. ಅದರ ರಾಜ್ಯ ಯುವ ಘಟಕದ ಉಪಾಧ್ಯಕ್ಷರಾಗಿಯೂ ನೇಮಕಗೊಂಡಿದ್ದರು. ಆದರೆ, ಇತ್ತೀಚೆಗೆ ಬಿಜೆಪಿಯನ್ನು ತೊರೆದು ನಟ-ನಿರ್ದೇಶಕ ಸೀಮನ್ ನೇತೃತ್ವದ ಎನ್‌ಟಿಕೆಗೆ ಸೇರಿದ್ದಾರೆ. ಆದಿವಾಸಿಗಳು ಮತ್ತು ದಲಿತರ ಪರವಾಗಿ ಕೆಲಸ ಮಾಡುತ್ತಿದ್ದಾರೆ.

ಚೆನ್ನೈನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಸೀಮನ್, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಸ್ಪರ್ಧಿಸುತ್ತಿರುವ ಎಲ್ಲ 40 ಅಭ್ಯರ್ಥಿಗಳನ್ನು ಪರಿಚಯಿಸಿದ್ದಾರೆ. “ವಿದ್ಯಾರಾಣಿ ಕೃಷ್ಣಗಿರಿಯಿಂದ ಎನ್‌ಟಿಕೆ ಅಭ್ಯರ್ಥಿಯಾಗಲಿದ್ದಾರೆ” ಎಂದು ಘೋಷಿಸಿದ್ದಾರೆ. “ಪಕ್ಷದ 40 ಅಭ್ಯರ್ಥಿಗಳಲ್ಲಿ ಅರ್ಧದಷ್ಟು ಅಭ್ಯರ್ಥಿಗಳು ಮಹಿಳೆಯರಾಗಿದ್ದಾರೆ. ಪಕ್ಷವು ಎಲ್‌ಟಿಟಿಇ ನಾಯಕ ವೇಲುಪಿಳ್ಳೈ ಪ್ರಭಾಕರನ್‌ ಅವರ ಸಿದ್ದಾಂತವನ್ನು ಅನುಸರಿಸುತ್ತಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎನ್‌ಟಿಕೆ ಪಕ್ಷವು 2016ರ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿತ್ತು ಮತ್ತು ಕೇವಲ 1.1% ಮತಗಳನ್ನು ಪಡೆದಿತ್ತು. 2019ರ ಲೋಕಸಭಾ ಚುನಾವಣೆ ವೇಳೆಗೆ ಸುಮಾರು 4% ಮತಗಳನ್ನು ಗಳಿಸುವ ಮಟ್ಟಕ್ಕೆ ಬೆಳೆಯಿತು. 2021ರ ವಿಧಾನಸಭಾ ಚುನಾವಣೆಯಲ್ಲಿ 6.7% ಮತ ಪಡೆದು, ಮತ ಹಂಚಿಕೆಯ ದೃಷ್ಟಿಯಿಂದ ತಮಿಳುನಾಡಿನ ಮೂರನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಈ ಸುದ್ದಿ ಓದಿದ್ದೀರಾ? ತಮಿಳುನಾಡು | ʼಸ್ವಜನಪಕ್ಷಪಾತʼದ ಆರೋಪ; ಬಿಜೆಪಿ ವಿರುದ್ಧ ಉದಯನಿಧಿ ವಾಗ್ದಾಳಿ

2004ರ ಅಕ್ಟೋಬರ್ 18ರಂದು ತಮಿಳುನಾಡು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಎನ್ಕೌಂಟರ್‌ನಲ್ಲಿ ಕಾಡುಗಳ್ಳ ವೀರಪ್ಪನ್ ಮೃತಪಟ್ಟಿದ್ದ. ಆತ ಆನೆಗಳನ್ನು ಬೇಟೆಯಾಡುವುದು, ಶ್ರೀಗಂಧದ ಮರಗಳನ್ನು ಕಳ್ಳಸಾಗಣೆ ಮಾಡುವ ದಂಧೆಯಲ್ಲಿ ತೊಡಗಿದ್ದ. ಕನ್ನಡದ ಮೇರುನಟ ರಾಜ್ ಕುಮಾರ್ ಮತ್ತು ಮಾಜಿ ಸಚಿವ ನಾಗಪ್ಪ ಅವರಂತಹ ಉನ್ನತ ವ್ಯಕ್ತಿಗಳನ್ನು ಅಪಹರಿಸಿದ್ದ ವೀರಪ್ಪನ್, ಪೊಲೀಸರು ಹಾಗೂ ಇತರರನ್ನು ಕೊಲ್ಲುವ ಮೂಲಕ ಕುಖ್ಯಾತಿ ಪಡೆದಿದ್ದ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...