ಕುರುವೈ ಬೆಳೆಗೆ ಕಾವೇರಿ ನೀರು: ಕರ್ನಾಟಕ ಮನವೊಲಿಸಲು ಕೇಂದ್ರಕ್ಕೆ ಎಂ ಕೆ ಸ್ಟಾಲಿನ್ ಪತ್ರ

Date:

ಕಾವೇರಿ ಜಲಾನಯನ ಪ್ರದೇಶದ ಕುರುವೈ(ಅಲ್ಪಾವಧಿ) ಬೆಳೆಗಳನ್ನು ಉಳಿಸಲು ನೀರು ಬಿಡುಗಡೆಗೆ ಕರ್ನಾಟಕ ಸರ್ಕಾರವನ್ನು ಮನವೊಲಿಸುವಂತೆ ಕೇಂದ್ರ ಸರ್ಕಾರಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಪತ್ರ ಬರೆದಿದ್ದಾರೆ.

ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಪತ್ರ ಬರೆದಿರುವ ಎಂ ಕೆ ಸ್ಟಾಲಿನ್, “ಕರ್ನಾಟಕದಿಂದ ಕಾವೇರಿ ನೀರು ಬಿಡುಗಡೆಯಲ್ಲಿ “ದೊಡ್ಡ ಕೊರತೆ” ಕಂಡುಬಂದಿದೆ. ಇದು ಜೂನ್ 1 ರಿಂದ ಜುಲೈ 17ರ ನಡುವೆ ಅಂತರರಾಜ್ಯ ಗಡಿ ಬಿಳಿಗುಂಡ್ಲುವಿನಲ್ಲಿ ಕೇವಲ 3.78 ಟಿಎಂಸಿ ಅಡಿ ಬಿಡುಗಡೆ ಮಾಡಲಾಗಿದ್ದು, ನಿಗದಿತವಾಗಿ ಈ ಅವಧಿಯಲ್ಲಿ 26.32 ಟಿಎಂಸಿ ಅಡಿ ಬಿಡುಗಡೆ ಮಾಡಬೇಕಿತ್ತು. ಇದು 22.54 ಟಿಎಂಸಿ ಅಡಿ ಕೊರತೆ ಕಂಡುಬಂದಿದೆ” ಎಂದು ತಿಳಿಸಿದ್ದಾರೆ.

“ಕರ್ನಾಟಕದಿಂದ ನೀರು ಬಿಡದ ಕಾರಣ, ಮೆಟ್ಟೂರು ಜಲಾಶಯದಲ್ಲಿ ಸಂಗ್ರಹಣೆಯ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಪ್ರಸ್ತುತ ಜಲಾಶಯದಲ್ಲಿರುವ ಸಂಗ್ರಹಣೆಯು ಸುಮಾರು 20 ದಿನಗಳವರೆಗೆ ನೀರಾವರಿಯನ್ನು ಉಳಿಸಿಕೊಳ್ಳಬಹುದು. ತಮಿಳುನಾಡಿನಲ್ಲಿ ನೈಋತ್ಯ ಮುಂಗಾರು ಮಳೆ ಕಡಿಮೆ ಬಿದ್ದಿರುವುದರಿಂದ ಕುರುವೈ ಬೆಳೆಯು ಕರ್ನಾಟಕ ಬಿಡುಗಡೆ ಮಾಡುವ ಮೆಟ್ಟೂರು ಜಲಾಶಯದ ಕಾವೇರಿ ನೀರಿನ ಹರಿವಿನ ಮೇಲೆ ಮಾತ್ರ ಅವಲಂಬಿತವಾಗಿದೆ” ಎಂದು ಹೇಳಿದ್ದಾರೆ. 

“ಕುರುವೈ ಬೆಳೆಗೆ ನಿತ್ಯ ಅಗತ್ಯವಿರುವಂತೆ ಮೆಟ್ಟೂರಿನಿಂದ ಆರಂಭದಲ್ಲಿ 12,000 ಕ್ಯೂಸೆಕ್ ನೀರು ಬಿಡಲಾಗಿದ್ದರೂ , ನೀರು ಕಡಿಮೆಯಿರುವ ಕಾರಣ ಈಗ 10,000 ಕ್ಯೂಸೆಕ್‌ಗೆ ಇಳಿಸಲಾಗಿದೆ. ಹೀಗಾಗಿ, ನಾವು ವಿವೇಚನಾಯುಕ್ತ ನೀರಿನ ನಿರ್ವಹಣೆಯೊಂದಿಗೆ ಉಂಟಾಗಿರುವ ಬಿಕ್ಕಟ್ಟನ್ನು ನಿರ್ವಹಿಸಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ನಮ್ಮ ಸಮಸ್ಯೆಯನ್ನು ಕರ್ನಾಟಕದಿಂದ ನೀರನ್ನು ಬಿಡುಗಡೆ ಮಾಡುವ ಮೂಲಕ ಮಾತ್ರ ಪರಿಹರಿಸಬಹುದು” ಎಂದು ಸ್ಟಾಲಿನ್ ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? 79 ದಿನಗಳ ನಂತರ ಮಣಿಪುರದ ಬಗ್ಗೆ ಮಾತು: ಸದನದೊಳಗೆ ಮಾತನಾಡಲು ಪ್ರಧಾನಿಗೆ ಖರ್ಗೆ ಒತ್ತಾಯ

“ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಬಿಲ್ಲಿಗುಂಡುಲುನಲ್ಲಿ ನೀರು ಹರಿಸುವುದನ್ನು ಖಚಿತಪಡಿಸಿಕೊಳ್ಳಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚಿಸಿದೆ ಎಂದು ಉಲ್ಲೇಖಿಸಿರುವ ಸ್ಟಾಲಿನ್, ಕರ್ನಾಟಕವು ನೀರು ಬಿಡುಗಡೆಯ ಮಾಸಿಕ ವೇಳಾಪಟ್ಟಿಯನ್ನು ಅನುಸರಿಸಲು ಯಾವುದೇ ಪ್ರಯತ್ನ ಮಾಡಿಲ್ಲ.ಕಾವೇರಿ ನೀರು ಬಿಡುಗಡೆಯಾದರೆ ಮಾತ್ರ ತೊಂದರೆಯಲ್ಲಿರುವ ಕುರುವೈ ಬೆಳೆಯನ್ನು ಉಳಿಸಬಹುದು” ಎಂದು ಹೇಳಿದರು.

 “ಆದ್ದರಿಂದ, ನಾನು ಈ ವಿಷಯದ ಬಗ್ಗೆ ನಿಮ್ಮ ವೈಯಕ್ತಿಕ ಮತ್ತು ತಕ್ಷಣದ ಮಧ್ಯಸ್ಥಿಕೆ ನಹಿಸುವಂತೆ ಒತ್ತಾಯಿಸುತ್ತೇನೆ. ಗೌರವಾನ್ವಿತ ಸುಪ್ರೀಂ ಕೋರ್ಟ್ ಸೂಚಿಸಿದ ಮಾಸಿಕ ವೇಳಾಪಟ್ಟಿಯನ್ನು ಅನುಸರಿಸಲು ಮತ್ತು ಕೊರತೆಯನ್ನು ಸರಿಪಡಿಸಲು ಕರ್ನಾಟಕಕ್ಕೆ ನಿರ್ದೇಶನಗಳನ್ನು ನೀಡುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಸೂಚಿಸುವಂತೆ ನಿರ್ದೇಶಿಸಲು ನಿಮಗೆ ಮನವಿ ಮಾಡುತ್ತೇನೆ” ಎಂದು ಸ್ಟಾಲಿನ್ ಹೇಳಿದ್ದಾರೆ.

ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶದ ಸುಮಾರು 4 ಲಕ್ಷ ಎಕರೆ ಪ್ರದೇಶದಲ್ಲಿ ಕುರುವೈ ಬೆಳೆಗೆ ನೀರು ಅಗತ್ಯವಾಗಿದೆ. ಈ ಭಾಗದ ರೈತರ ಜೀವನಾಡಿಯಾಗಿರುವ ಮೆಟ್ಟೂರಿನ ಸ್ಟಾನ್ಲಿ ಜಲಾಶಯದಿಂದ ಬಿಡುವ ನೀರಿನಿಂದ ಕೃಷಿ ಮಾಡಲಾಗುತ್ತಿದೆ. 

ತಮಿಳುನಾಡಿಗೆ ಜುಲೈನಲ್ಲಿ 31.24 ಟಿಎಂಸಿ ಅಡಿ, ಆಗಸ್ಟ್‌ನಲ್ಲಿ 45.95 ಟಿಎಂಸಿ, ಸೆಪ್ಟೆಂಬರ್‌ನಲ್ಲಿ 36.76 ಟಿಎಂಸಿ ಅಡಿ ಕಾವೇರಿ ನೀರನ್ನು ಕರ್ನಾಟಕ ಬಿಡುಗಡೆ ಮಾಡಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...