ಕೇಂದ್ರದಿಂದ ತೆರಿಗೆ ಅನ್ಯಾಯ; ಸಿದ್ದರಾಮಯ್ಯ ನಿರೂಪಿಸಿದರೆ ನಾವು ಅವರ ಜೊತೆ ಧ್ವನಿ ಎತ್ತುತ್ತೇವೆ: ಕುಮಾರಸ್ವಾಮಿ ಸವಾಲು

Date:

ತೆರಿಗೆ, ಅನುದಾನ ತಾರತಮ್ಯದ ಬಗ್ಗೆ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ನಿರಂತರ ಆರೋಪ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಚರ್ಚೆಗೆ ಬರುವಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, “ರಾಷ್ಟ್ರದ ಹಿರಿಯ, ನುರಿತ ಆರ್ಥಿಕ ತಜ್ಞರನ್ನು, ಮಾಧ್ಯಮಗಳನ್ನು ಕೂಡಿಸಿಕೊಂಡು ಎಲ್ಲರ ಎದುರು ಬಹಿರಂಗ ಚರ್ಚೆ ಮಾಡೋಣ ಬನ್ನಿ. ಕೇಂದ್ರದಿಂದ ಅನ್ಯಾಯ ಆಗುತ್ತಿದೆ ಎಂದು ನೀವು ನಿರೂಪಿಸಿದರೆ ನಿಮ್ಮ ಜತೆ ನಾವೂ ಧ್ವನಿ ಎತ್ತುತ್ತೇವೆ” ಎಂದರು.

“ನಿಮ್ಮಲ್ಲಿರುವ ಮಾಹಿತಿಯನ್ನು ನಾಡಿನ ಮುಂದೆ ಇಡಿ. ಚರ್ಚೆ ಮಾಡಲು ನಾನು ತಯಾರಿದ್ದೇನೆ. ರೈತರ ಪರಿಹಾರದಲ್ಲಿ ಶೇ.75 ರಷ್ಟು ಕೇಂದ್ರದ್ದು? ವೀರಾವೇಷದಿಂದ ಸದನದ ಒಳಗೆ ಭಾಷಣ ಮಾಡುತ್ತಿದ್ದಾರೆ ಮುಖ್ಯಮಂತ್ರಿ. ಕನ್ನಡಿಗರಿಗೆ ಅನ್ಯಾಯ ಆಯಿತು ಎನ್ನುತ್ತಾರೆ. ಕೇಂದ್ರ ಸರ್ಕಾರದಿಂದ ಹಣ ಬರಲಿಲ್ಲ, ಬರಪೀಡಿತ ರೈತರಿಗೆ ಪರಿಹಾರ ಕೊಡಿ ಎಂದರೆ 2000 ರೂ. ಕೊಡುತ್ತಾರೆ. ಈ 2000 ರೂ.ನಲ್ಲಿ 25% ರಾಜ್ಯದ್ದು, ಉಳಿದ 75% ಕೇಂದ್ರದ್ದು” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2,624 ಕೋಟಿ ರೂ. ಎಸ್ ಡಿಆರ್ ಎಫ್ ನಲ್ಲಿ ಬಿಡುಗಡೆ ಮಾಡಿದ್ದೇವೆ ಎಂದು ಹೇಳುತ್ತಾರಲ್ಲಾ? ಈ ಹಣದಲ್ಲಿ 75% ಮೊತ್ತವನ್ನು ಕೇಂದ್ರ ಸರ್ಕಾರವೇ ನೀಡಿದೆ. ನಾವು ಕೊಟ್ಟೆವು ಎಂದು ಇವರು ಹೇಳಿದ್ದೇ ಹೇಳಿದ್ದು. ನಾನು ಹೇಳೋದೇ ಸತ್ಯ, ನಾನು ಹೇಳೋದೇ ಸತ್ಯ ಎಂದು ಹೇಳ್ತಾನೇ ಇದ್ದಾರೆ. ನೂರು ಬಾರಿ ಸುಳ್ಳು ಹೇಳಿ ಅದನ್ನೆ ಸತ್ಯ ಮಾಡು ಎಂದು ನಮ್ಮ ಹಿರಿಯರು ಗಾದೆ ಮಾತು ಹೇಳಿದ್ದಾರೆ, ಅದನ್ನು ನಮ್ಮ ಮುಖ್ಯಮಂತ್ರಿಗಳು ಅಚ್ಚುಕಟ್ಟಾಗಿ ನಿರೂಪಣೆ ಮಾಡುತ್ತಿದ್ದಾರೆ” ಎಂದರು.

“ಕೇರಳದಲ್ಲಿ ಆನೆ ತುಳಿದು ಸತ್ತರೆ 15 ಲಕ್ಷ; ಇಲ್ಲಿ 5 ಲಕ್ಷ ಕನ್ನಡಿಗರಿಗೆ ಅನ್ಯಾಯ, ಕನ್ನಡಿಗರಿಗೆ ಅನ್ಯಾಯ ಎಂದು ಜಾಗಟೆ ಹೊಡೆಯುತ್ತಿರಲ್ಲ, ಅಲ್ಲಿ ಆನೆ ತುಳಿದು ಸತ್ತರೆ 15 ಲಕ್ಷ ರೂ. ಕೊಡುತ್ತೀರಿ. ಇಲ್ಲಿ ಆನೆ ತುಳಿದು ಸತ್ತರೆ 5 ಲಕ್ಷ ಕೊಡುತ್ತೀರಿ. ಅದನ್ನು ಪಡೆಯುವುದಕ್ಕೆ ಐವತ್ತು ಸಲ ಕಚೇರಿಗಳಿಗೆ ಅಳೆಯಬೇಕು. ನಿಮ್ಮ ನೀತಿ ಹೇಗಿದೆ ಎಂದರೆ; ರಾಜ್ಯಕ್ಕೆ ಅನ್ಯಾಯ! ಕೇರಳಕ್ಕೆ ನ್ಯಾಯ! ಎನ್ನುವಂತೆ ಆಗಿದೆ” ಎಂದು ವಾಗ್ದಾಳಿ ನಡೆಸಿದರು.

“ಸಿದ್ದರಾಮಯ್ಯ ಅವರು ತಮ್ಮ ರಾಷ್ಟ್ರೀಯ ನಾಯಕರ ಸಲಹೆ ಮೇರೆಗೆ 15 ಲಕ್ಷ ರೂ. ಕೊಟ್ಟಿದ್ದಾರೆ. ನಾನೆಲ್ಲೂ ಸರ್ಕಾರದ ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಆಗಿದೆ ಎಂದು ಹೇಳಿಲ್ಲ. ನಮ್ಮ ರೈತರಿಗೆ ಬರ ಪರಿಹಾರ ಎಂದು ಎರಡು ಸಾವಿರ ರೂ. ಘೋಷಣೆ ಮಾಡುತ್ತಾರೆ. ಕೇರಳದವಗೆ 15 ಲಕ್ಷ ರೂ. ಕೊಡುತ್ತಾರೆ. ಕೇಳಿದರೆ ಕೇಂದ್ರದಿಂದ ಪರಿಹಾರವೇ ಬಂದಿಲ್ಲ ಅಂತ ಹೇಳುತ್ತಾರೆ. ಕನ್ನಡಿಗರಿಗೆ ಅನ್ಯಾಯ ಆಗಿದೆ ಎನ್ನುತ್ತಾರೆ. ಸಾವಿರ ಸಲ ಸುಳ್ಳು ಹೇಳಿ ಅದನ್ನೇ ನಿಜ ಮಾಡುವ ರೀತಿ ಇವರು ಬರೀ ಸುಳ್ಳುಗಳನ್ನ್ನೆ ಹೇಳುತ್ತಿದ್ದಾರೆ” ಎಂದು ಟೀಕಾ ಪ್ರಹಾರ ನಡೆಸಿದರು.

“ಹಣಕಾಸು ಆಯೋಗದ ಮುಂದೆ ಮಾಹಿತಿ ಕೊಡಿ ರಾಜ್ಯ ರಾಜ್ಯ ಸರ್ಕಾರಕ್ಕೆ ನನ್ನ ಸಲಹೆ ಇಷ್ಟೇ. ಈಗ 16ನೇ ಹಣಕಾಸು ಆಯೋಗ ರಚನೆ ಆಗಿದೆ. ಆಯೋಗ ರಾಜ್ಯಕ್ಕೆ ಬಂದಾಗ ಸರಿಯಾದ ಮಾಹಿತಿ ಕೊಟ್ಟು ಹಕ್ಕು ಮಂಡಿಸಿ.ಕೇಂದ್ರ ಸರ್ಕಾರಕ್ಕೆ ಮನವಿ ಕೊಟ್ಟರೆ ಅಥವಾ ದೂರಿದರೆ ಉಪಯೋಗ ಇಲ್ಲ. ತೆರಿಗೆ ಪಾಲು, ಅನುದಾನ ಹಂಚಿಕೆ ಮಾಡುವುದು ಆಯೋಗವೇ ಹೊರತು ಕೇಂದ್ರವಲ್ಲ. ಈಗಾಗಲೇ ಕೇಂದ್ರದಿಂದ ಬಂದಿರುವ ಹಣವನ್ನು ಸರ್ಕಾರ ಸದ್ಬಳಕೆ ಮಾಡಿಲ್ಲ. ಆ ಬಗ್ಗೆ ಇವರು ಚಕಾರ ಎತ್ತುತ್ತಿಲ್ಲ” ಎಂದು ಅವರು ದೂರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...