ಟಿಬಿ ಡ್ಯಾಮ್‌ | ನೀರಿನ ಪ್ರಮಾಣ ಕಡಿಮೆ ಮಾಡದ ಹೊರತು ದುರಸ್ತಿ ಕಾರ್ಯ ಸಾಧ್ಯವಿಲ್ಲ: ಡಿ ಕೆ ಶಿವಕುಮಾರ್‌

Date:

ತುಂಗಭದ್ರಾ ಅಣೆಕಟ್ಟಿನ ಗೇಟ್ ದುರಸ್ತಿ ಕಾರ್ಯ ಆರಂಭವಾಗಿದೆ. ನೀರಿನ ಪ್ರಮಾಣ ಕಡಿಮೆ ಮಾಡದ ಹೊರತಾಗಿ ದುರಸ್ತಿ ಕಾರ್ಯ ಸಾಧ್ಯವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ನಾನು ಅಣೆಕಟ್ಟಿಗೆ ಭೇಟಿ ನೀಡಿ ಬಂದಿದ್ದೇನೆ. ಜಿಂದಾಲ್ ಕಂಪೆನಿ ಹಾಗೂ ಇತರರ ಜತೆ ಮಾತನಾಡಿದ್ದೇನೆ. ಕೆಲವೇ ಕ್ಷಣಗಳಲ್ಲಿ ಕೆಲಸ ಆರಂಭವಾಗಿರುವ ಬಗ್ಗೆ ಮಾಹಿತಿ ಕಳುಹಿಸಿಕೊಡುತ್ತೇನೆ” ಎಂದು ತಿಳಿಸಿದರು.

ಈ ಘಟನೆಗೆ ಯಾರನ್ನಾದರೂ ಹೊಣೆ ಮಾಡಿದ್ದೀರಾ ಎಂದು ಕೇಳಿದಾಗ, “ಅಧಿಕಾರಿಗಳನ್ನು ಹೊಣೆ ಮಾಡುವುದಕ್ಕಿಂತ ಆಣೆಕಟ್ಟು ಉಳಿಸಿ, ರೈತರನ್ನು ರಕ್ಷಣೆ ಮಾಡುವುದು ನಮ್ಮ ಆದ್ಯತೆ. ಆನಂತರ ಅಧಿಕಾರಿಗಳ ವಿಚಾರ. ಮೊದಲು ಸಮಸ್ಯೆ ಬಗೆಹರಿಸುವುದು ಮುಖ್ಯ. ಇದು 70 ವರ್ಷಗಳ ಹಳೆಯ ಅಣೆಕಟ್ಟು. ಅದರ ಸರಪಳಿ ಕಟ್ ಆಗಿದೆ. ಬೇರೆ ಕಡೆಗಳಲ್ಲಿ ಎರಡು ಅವಕಾಶವಿರುತ್ತದೆ. ರೈತರಿಗೆ ನೀರು ಉಳಿಸುವುದಕ್ಕಾಗಿ ಗೇಟ್ ಹಾಕಲು ಪ್ರಯತ್ನ ಮಾಡುತ್ತಿದ್ದೇವೆ. ಅಣೆಕಟ್ಟಿನಲ್ಲಿ ನೀರು ಕಡಿಮೆಯಾಗದ ಹೊರತು ಕೆಲಸ ಮಾಡಲು ಸಾಧ್ಯವಿಲ್ಲ. ಹೀಗಾಗಿ ನೀರು ಹರಿಯಲಿದೆ. ದ್ವಿಗುಣ ಸಿಬ್ಬಂದಿ ನಿಯೋಜಿಸಿ ಹಗಲು ರಾತ್ರಿಯಿಡಿ ತ್ವರಿತಗತಿಯಲ್ಲಿ ಗೇಟ್ ಸಿದ್ಧಪಡಿಸಲಾಗುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಆರ್ ಎಸ್ ನಲ್ಲೂ ಸಮಸ್ಯೆಯಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ ಎಂದು ಕೇಳಿದಾಗ, “ಕುಮಾರಸ್ವಾಮಿಗೆ ರಾಜಕಾರಣ ಮಾತನಾಡುವುದು ಬಿಟ್ಟು ಬೇರೆ ಏನು ಗೊತ್ತು? ಕುಮಾರಸ್ವಾಮಿಗೆ ಕೆಆರ್ ಎಸ್ ನಲ್ಲಿ ಏನು ಸಮಸ್ಯೆಯಿದೆ? ಎಲ್ಲ ಅಣೆಕಟ್ಟುಗಳ ಸುರಕ್ಷತೆಗೆ ಸಮಿತಿ ರಚಿಸಿ ಅಣೆಕಟ್ಟುಗಳ ಭೇಟಿ ನೀಡಿ ವರದಿ ನೀಡುವಂತೆ ಸೂಚಿಸಲಾಗಿದೆ. ಯಾವುದೇ ರೈತರನ್ನು ಗಾಬರಿಪಡಿಸುವ ಅಗತ್ಯವಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...