ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್

Date:

2002ರ ಗೋಧ್ರಾ ನಂತರದ ದಂಗೆಗಳ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತೆ, ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಸುಪ್ರೀಂ ಕೋರ್ಟ್ ಶನಿವಾರ ರಾತ್ರಿ ನಡೆಸಿದ ವಿಶೇಷ ವಿಚಾರಣೆಯಲ್ಲಿ ಮಧ್ಯಂತರ ಜಾಮೀನು ನೀಡಿದೆ.

ಸಾಕ್ಷಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಹೀಗಾಗಿ ಅವರು ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟಿಗೆ ಸಲ್ಲಿಸಿದ್ದರು. ಆದರೆ, ಇದನ್ನು ತಿರಸ್ಕರಿಸಿದ್ದ ಗುಜರಾತ್ ಹೈಕೋರ್ಟ್, ‘ಜಾಮೀನು ನೀಡುವುದಕ್ಕೆ ಸಾಧ್ಯವಿಲ್ಲ, ತಕ್ಷಣವೇ ಶರಣಾಗಿ’ ಎಂದು ಕೋರ್ಟ್ ಸೂಚಿಸಿತ್ತು.

ಈ ಹಿನ್ನೆಲೆಯಲ್ಲಿ ಗುಜರಾತ್​ ಹೈಕೋರ್ಟ್​ ಆದೇಶ ಪ್ರಶ್ನಿಸಿ ತೀಸ್ತಾ ಸೆಟಲ್ವಾಡ್ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಎಸ್ ಓಕಾ ಮತ್ತು ಪಿಕೆ ಮಿಶ್ರಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಿತ್ತು. ಶರಣಾಗುವ ಆದೇಶ ನೀಡುವ ಮೊದಲು ಗುಜರಾತ್ ಹೈಕೋರ್ಟ್ ಸೆಟಲ್ವಾಡ್ ಅವರಿಗೆ ಸ್ವಲ್ಪ ಸಮಯವನ್ನು ನೀಡಬೇಕಿತ್ತು ಎಂದು ಅಭಿಪ್ರಾಯಪಟ್ಟಿತ್ತು. ಆದರೆ, ಅವರಿಗೆ ಮಧ್ಯಂತರ ರಕ್ಷಣೆ ನೀಡುವ ಬಗ್ಗೆ ಒಮ್ಮತಕ್ಕೆ ಬರಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ನ ಮೂವರು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಿತ್ತು. ಶನಿವಾರ ರಾತ್ರಿ 9.15ಕ್ಕೆ ವಿಶೇಷ ವಿಚಾರಣೆಯನ್ನು ನಡೆಸಿತು.

ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಎಎಸ್ ಬೋಪಣ್ಣ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠವು ಜಾಮೀನು ಅರ್ಜಿಯನ್ನು ಪುರಸ್ಕರಿಸಿದ್ದು, ಸದ್ಯ ಬಂಧನದಿಂದ ತೀಸ್ತಾ ಸೆಟಲ್ವಾಡ್ ಪಾರಾಗಿದ್ದಾರೆ.

ಹಿರಿಯ ವಕೀಲ ಸಿಯು ಸಿಂಗ್ ಮತ್ತು ವಕೀಲೆ ಅಪರ್ಣಾ ಭಟ್ ತೀಸ್ತಾ ಸೆಟಲ್ವಾಡ್ ಪರ ಹಾಗೂ ಗುಜರಾತ್ ಪೊಲೀಸರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು.

ಏನಿದು ಪ್ರಕರಣ?
ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರರ ಬಗ್ಗೆ ನಕಲಿ ಸಾಕ್ಷ್ಯ ಸೃಷ್ಟಿಸಿದ, ಪೊಲೀಸರಿಗೆ ಆಧಾರರಹಿತ ಮಾಹಿತಿ ನೀಡಿದ ಹಾಗೂ ಕ್ರಿಮಿನಲ್ ಪಿತೂರಿ ನಡೆಸಲಾಗಿದೆ ಎಂಬ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್ ಮತ್ತು ಸಹ ಆರೋಪಿ ಮಾಜಿ ಐಪಿಎಸ್ ಅಧಿಕಾರಿ ಆರ್ ಬಿ ಶ್ರೀಕುಮಾರ್ ಅವರನ್ನು 2022ರ ಜೂನ್ 25 ರಂದು ಗುಜರಾತ್ ಪೊಲೀಸ್ ಕ್ರೈಂ ಬ್ರಾಂಚ್ ಬಂಧಿಸಿತ್ತು.

ಗಲಭೆ ಸಮಯದಲ್ಲಿ ಶ್ರೀಕುಮಾರ್ ಅವರು ಪೊಲೀಸ್ ಮಹಾನಿರ್ದೇಶಕರಾಗಿದ್ದರು. ಗುಜರಾತ್ ಗಲಭೆ ಪ್ರಕರಣದಲ್ಲಿ ಆಗ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ ಸೇರಿದಂತೆ 64 ಜನರಿಗೆ ಎಸ್​ಐಟಿ ಕಳೆದ ವರ್ಷ ಕ್ಲೀನ್​ಚಿಟ್​ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...