ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ‘ಬಿಜೆಪಿ ಏಜೆಂಟ್’ : ತೇಜಸ್ವಿ ಯಾದವ್

Date:

ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರನ್ನು ‘ಬಿಜೆಪಿ ಏಜೆಂಟ್’ ಎಂದು ಆರ್‌ಜೆಡಿ ನಾಯಕ, ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಕರೆದಿದ್ದಾರೆ.

ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ತೇಜಸ್ವಿ ಸೂರ್ಯ, “ಬಿಜೆಪಿ ಚುನಾವಣೆಯಲ್ಲಿ ಸೋಲುತ್ತಿದೆ. ಈಗ ಬಿಜೆಪಿ ಪರವಾಗಿ ವಾತಾವರಣ ಸೃಷ್ಟಿ ಮಾಡಲೆಂದು ಮೂರ್ನಾಲ್ಕು ಸುತ್ತಿನ ಮತದಾನದ ನಂತರ ಕಿಶೋರ್ ಅವರನ್ನು ಬಿಜೆಪಿ ಕರೆಸಿಕೊಂಡಿದೆ” ಎಂದು ಆರೋಪಿಸಿದರು.

“ನನ್ನ ಚಿಕ್ಕಪ್ಪ (ನಿತೀಶ್ ಕುಮಾರ್) ಕೂಡ ಅಮಿತ್ ಶಾ ಆದೇಶದ ಮೇರೆಗೆ ಪ್ರಶಾಂತ್ ಕಿಶೋರ್‌ ಅವರನ್ನು ಜೆಡಿಯುನ ರಾಷ್ಟ್ರೀಯ ಉಪಾಧ್ಯಕ್ಷನಾಗಿ ನೇಮಕ ಮಾಡಿರುವುದಾಗಿ ಹೇಳಿದ್ದರು. ಈವರೆಗೂ ಶಾ ಅಥವಾ ಪ್ರಶಾಂತ್ ಕಿಶೋರ್ ಈ ಆರೋಪವನ್ನು ಅಲ್ಲಗಳೆದಿಲ್ಲ. ಪ್ರಶಾಂತ್ ಕಿಶೋರ್ ಮೊದಲಿನಿಂದಲೂ ಬಿಜೆಪಿಯಲ್ಲೇ ಇದ್ದಾರೆ. ಅವರು ಯಾವ ಪಕ್ಷಕ್ಕೆ ಸೇರಿದರೂ ಅದು ನಾಶವಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಆದಾಯವೆಷ್ಟು? ಇಲ್ಲಿದೆ ಆಸ್ತಿ ವಿವರ

ಕಿಶೋರ್ 2019ರ ಲೋಕಸಭಾ ಚುನಾವಣೆಗೂ ಕೆಲವು ತಿಂಗಳುಗಳ ಮುನ್ನ ಜೆಡಿಯು ಸೇರ್ಪಡೆಯಾಗಿದ್ದರು. ಆದರೆ 2020ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತು ಜೆಡಿಯು ನಿಲುವನ್ನು ಟೀಕಿಸಿದ ಪ್ರಶಾಂತ್‌ರನ್ನು ಜೆಡಿಯು ಪಕ್ಷದಿಂದ ತೆಗೆದುಹಾಕಿದೆ.

“ಪ್ರಶಾಂತ್‌ ಕಿಶೋರ್‌ಗೆ ಎಲ್ಲಿಂದ ಹಣ ಬರುತ್ತಿದೆಯೋ ಗೊತ್ತಿಲ್ಲ. ಪ್ರತಿ ವರ್ಷ ಬೇರೆ ಬೇರೆ ಜನರೊಂದಿಗೆ ಕೆಲಸ ಮಾಡುತ್ತಾರೆ. ನಿಮ್ಮ ಡೇಟಾವನ್ನು ಪಡೆದು ಅದನ್ನು ಇನ್ನೊಬ್ಬರಿಗೆ ನೀಡುತ್ತಾರೆ. ಪ್ರಶಾಂತ್ ಕೇವಲ ಬಿಜೆಪಿ ಏಜೆಂಟ್ ಅಲ್ಲ, ಬಿಜೆಪಿ ಮನಸ್ಥಿತಿಯನ್ನೂ ಹೊಂದಿದ್ದಾರೆ, ಬಿಜೆಪಿ ಸಿದ್ಧಾಂತ ಅನುಸರಿಸುತ್ತಾರೆ. ಪ್ರಶಾಂತ್‌ರ ಈ ತಂತ್ರದ ಭಾಗವಾಗಿ ಬಿಜೆಪಿ ಅವರಿಗೆ ಹಣ ನೀಡುತ್ತಿದೆ” ಎಂದು ತೇಜಸ್ವಿ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ?  Viral Video| ಕರಣ್ ಥಾಪರ್ ಪ್ರಶ್ನೆಗೆ ತಬ್ಬಿಬ್ಬಾದ ಪ್ರಶಾಂತ್ ಕಿಶೋರ್; ಬೆವರಿಳಿಸಿದ ನೆಟ್ಟಿಗರು

ಬಿಜೆಪಿಯು ಪ್ರಶಾಂತ್ ಕಿಶೋರ್ ಅವರನ್ನು ತನ್ನ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿದೆ ಎಂಬ ನಕಲಿ ಸ್ಕ್ರೀನ್‌ಶಾಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬೆನ್ನಲ್ಲೇ ಆರ್‌ಜೆಡಿ ನಾಯಕ ಪ್ರಶಾಂತ್ ಕಿಶೋರ್ ವಿರುದ್ಧ ಈ ಆರೋಪ ಮಾಡಿದ್ದಾರೆ.

ಇನ್ನು ಇತ್ತೀಚೆಗೆ ಸಂದರ್ಶನದ ವೇಳೆ ಪತ್ರಕರ್ತ ಕರಣ್ ಥಾಪರ್ ಮತ್ತು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ನಡುವೆ ನಡೆದ ವಾಗ್ವಾದದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸಂದರ್ಶನದ ವೇಳೆ ಕರಣ್ ಪ್ರಶ್ನೆಗೆ ಉತ್ತರಿಸಲಾಗದೆ ತಬ್ಬಿಬ್ಬಾದ ಪ್ರಶಾಂತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರಣ್ ಥಾಪರ್ ಅವರು ಪ್ರಶಾಂತ್ ಕಿಶೋರ್ ಬೆವರಿಳಿಸಿದ್ದಾರೆ ಎಂದು ನೆಟ್ಟಿಗರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...