400 ಸೀಟು ಗೆಲ್ಲುವುದಾದರೆ ಬೇರೆ ಪಕ್ಷಗಳ ಸಂಪರ್ಕಿಸುವುದೇಕೆ? – ಬಿಜೆಪಿಗೆ ತೆಲಂಗಾಣ ಸಿಎಂ ಪ್ರಶ್ನೆ

Date:

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರುಗಳು ‘ಅಬ್‌ಕಿ ಬಾರ್ 400 ಪಾರ್’ (ಈ ಬಾರಿ 400ಕ್ಕಿಂತ ಅಧಿಕ ಗೆಲುವು) ಎಂಬ ಘೋಷಣೆಯನ್ನು ಮೊಳಗಿಸುತ್ತಿರುವ ನಡುವೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಬಿಜೆಪಿಗೆ ತಿರುಗೇಟು ನೀಡಿದರು.

ಲೋಕಸಭೆ ಚುನಾವಣೆಯ ಪೂರ್ವಭಾವಿಯಾಗಿ ಮೇಡ್ಚಲ್‌ನಲ್ಲಿ ಶನಿವಾರ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ, ಬಿಜೆಪಿಯನ್ನು ಈ 400 ಸೀಟು ಗೆಲುವಿನ ವಿಚಾರದಲ್ಲಿ ಕುಟುಕಿದರು. ಈ ಹಿಂದೆ ಪ್ರಧಾನಿಯೆಂದರೆ ದೊಡ್ಡಣ್ಣನಿದ್ದಂತೆ ಎಂದು ಮೋದಿಯನ್ನು ಹೊಗಳಿದ್ದ ರೇವಂತ್ ರೆಡ್ಡಿ ಈಗ ಸ್ಥಳೀಯ ರಾಜಕೀಯ ಪಕ್ಷಗಳ ಜೊತೆ ಬಿಜೆಪಿ ಮೈತ್ರಿಯನ್ನು ಪ್ರಶ್ನಿಸಿದರು.

“ಬಿಜೆಪಿ ಪಕ್ಷಕ್ಕೆ ಈ ಬಾರಿ 400ಕ್ಕಿಂತ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದ್ದರೆ, ಇತರೆ ರಾಜ್ಯಗಳಲ್ಲಿ ಬೇರೆ ಬೇರೆ ರಾಜಕೀಯ ಪಕ್ಷಗಳನ್ನು ಬಿಜೆಪಿ ಸಂಪರ್ಕಿಸುತ್ತಿರುವುದೇಕೆ?” ಎಂದು ಪ್ರಶ್ನಿಸಿದ ರೆಡ್ಡಿ ಕೆಲವು ರಾಜ್ಯಗಳಲ್ಲಿ ಬಿಜೆಪಿ ಮೈತ್ರಿಯನ್ನು ಉಲ್ಲೇಖಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಾರಾಷ್ಟ್ರದಲ್ಲಿ ಅವರು (ಬಿಜೆಪಿ) ಎನ್‌ಸಿಪಿ ಮತ್ತು ಶಿವಸೇನಾ ಪಕ್ಷಗಳನ್ನು ಇಬ್ಘಾಗಗೊಳಿಸಿದರು. ಕರ್ನಾಟಕದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಜೆಡಿಎಸ್‌ ಪಕ್ಷದೊಂದಿಗೆ ಕೈಜೋಡಿಸಿದರು. ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ” ಎಂದು ರೇವಂತ್ ರೆಡ್ಡಿ ಹೇಳಿದರು.

”ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ವರ್ಷಗಳಿಂದ ಅಂತರ ಕಾಯ್ದುಕೊಂಡಿದ್ದ ನಾಯಕರುಗಳ ಜೊತೆ ಮತ್ತು ಪಕ್ಷಗಳೊಂದಿಗೆ ಈಗ ಮತ್ತೆ ಮೈತ್ರಿಮಾಡಿಕೊಳ್ಳುತ್ತಿದ್ದಾರೆ. ಇದು ದೇಶದಲ್ಲಿ ಬಿಜೆಪಿ ಎಷ್ಟು ದುರ್ಬಲವಾಗಿದೆ ಎಂಬುವುದಕ್ಕೆ ಸಾಕ್ಷಿಯಾಗಿದೆ,” ಎಂದರು.

ಇನ್ನು “ತೆಲಂಗಾಣದಲ್ಲಿ ಕಾಂಗ್ರೆಸ್ ಸರಕಾರ ಆರು ತಿಂಗಳಿಗಿಂತ ಹೆಚ್ಚು ಕಾಲ ಉಳಿಯುವುದಿಲ್ಲ” ಎಂದು ಹೇಳಿಕೆ ನೀಡಿದ್ದ ಬಿಆರ್‌ಎಸ್ ಮುಖಂಡರಾದ ಕೆ.ಚಂದ್ರಶೇಖರ ರಾವ್, ಕೆ.ಟಿ.ರಾಮರಾವ್, ಟಿ.ಹರೀಶ್ ರಾವ್ ಮತ್ತು ಕೆ.ಕವಿತಾರನ್ನು ಟೀಕಿಸಿದ ರೇವಂತ್ ರೆಡ್ಡಿ, “ಕಾಂಗ್ರೆಸ್ ಅನ್ನು ಕಿತ್ತೊಗೆಯಲು ಪ್ರಯತ್ನಿಸಿದರೆ ಪರಿಸ್ಥಿತಿ ನೆಟ್ಟಗಿರದು” ಎಂದು ಎಚ್ಚರಿಸಿದರು.

ಆಂಧ್ರ ಪ್ರದೇಶದಲ್ಲಿ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆ ನಡೆಯಲಿದ್ದು, ಈಗಾಗಲೇ ಬಿಜೆಪಿ, ತೆಲುಗುದೇಶಂ ಪಕ್ಷ (ಟಿಡಿಪಿ) ಮತ್ತು ಜನಸೇನಾ ಪಕ್ಷಗಳು ಮೈತ್ರಿ ಮಾಡಿಕೊಂಡಿದೆ. 2018ರಲ್ಲಿ ಎನ್‌ಡಿಎ ತೊರೆದಿದ್ದ ಟಿಡಿಪಿ, ಆರು ವರ್ಷಗಳ ಬಳಿಕ ಮತ್ತೆ ಎನ್‌ಡಿಎ ಮಡಿಲು ಸೇರಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...