ತೆಲಂಗಾಣ | ಚಾರ್ಮಿನಾರ್ ಕ್ಷೇತ್ರದ ಓವೈಸಿ ಪಕ್ಷದ ಅಭ್ಯರ್ಥಿ ಜುಲ್ಫಿಕರ್ ಅಲಿ ಗೆಲುವು

Date:

2023ರ ತೆಲಂಗಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಸದ್ಯ ಕಾಂಗ್ರೆಸ್‌ ಮೂರು ಕ್ಷೇತ್ರದಲ್ಲಿ ಗೆಲವು ಸಾಧಿಸಿದ್ದು, ಇದೀಗ ಚಾರ್ಮಿನಾರ್ ಕ್ಷೇತ್ರದಲ್ಲಿ ಓವೈಸಿ ಅವರ ಎಐಎಂಐಎಂ ಅಭ್ಯರ್ಥಿ ಜುಲ್ಫಿಕರ್ ಅಲಿ ಗೆಲುವು ಸಾಧಿಸಿದ್ದಾರೆ.

ಸದ್ಯ ತೆಲಂಗಾಣದಲ್ಲಿ ಕಾಂಗ್ರೆಸ್ 71 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, 3 ಸ್ಥಾನಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬಿಆರ್‌ಎಸ್ 36 ಸ್ಥಾನಗಳಲ್ಲಿ ಮುನ್ನುಗ್ಗುತ್ತಿದೆ.

ಕಾಂಗ್ರೆಸ್‌ ಗೆಲುವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

119 ಕ್ಷೇತ್ರಗಳ ಪೈಕಿ ಮ್ಯಾಜಿಕ್ ನಂಬರ್ ದಾಟಿ ಮುನ್ನಡೆ ಸಾಧಿಸಿರುವ ಕಾಂಗ್ರೆಸ್‌, ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಅಶ್ವರಾವ್ ಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆದಿನಾರಾಯಣ ಗೆಲುವು ಸಾಧಿಸಿದ್ದಾರೆ. ಖಮ್ಮಂ ಜಿಲ್ಲೆಯ ಅಶ್ವರಾವ್ ಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಜೇರಿ ಆದಿನಾರಾಯಣ 28,000 ಬಹುಮತದಿಂದ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾಧಿಕಾರಿಗಳು ಹೇಳಿದ್ದಾರೆ. ಅವರು ಪ್ರತಿಸ್ಪರ್ಧಿ ಬಿಆರ್‌ಎಸ್ ಅಭ್ಯರ್ಥಿ ಮೆಚ್ಚಾ ನಾಗೇಶ್ವರ ರಾವ್ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ತೆಲಂಗಾಣ | ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯ; ಅಶ್ವರಾವ್ ಪೇಟೆಯಲ್ಲಿ ಆದಿನಾರಾಯಣ ಗೆಲುವು

ಮೇಚಾ ನಾಗೇಶ್ವರ ರಾವ್ 2018ರ ಚುನಾವಣೆಯಲ್ಲಿ ಟಿಡಿಪಿಯಿಂದ ಗೆದ್ದಿದ್ದರು. ನಂತರ ಅವರು ಬಿಆರ್‌ಎಸ್ ಸೇರಿದರು. ಹಾಲಿ ಶಾಸಕರಾಗಿರುವ ಅವರಿಗೆ ಬಿಆರ್‌ಎಸ್‌ ಟಿಕೆಟ್‌ ನೀಡಿತ್ತು. ಕಾಂಗ್ರೆಸ್‌ ಪಕ್ಷ ಜಾರೆ ಆದಿನಾರಾಯಣ ಅವರಿಗೆ ಟಿಕೆಟ್‌ ನೀಡಿತ್ತು. ಈ ಸ್ಥಾನದಲ್ಲಿ ಸಿಪಿಐ ಅಭ್ಯರ್ಥಿಗೆ ಮೂರನೇ ಸ್ಥಾನ ಸಿಕ್ಕಿದೆ.

ಇಲ್ಲಾಂಡು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೊಂದು ಸ್ಥಾನ ಗೆದ್ದಿದೆ. ಇಲ್ಲಾಂಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೋರಂ ಕನಕಯ್ಯ ಅವರು ಬಿಆರ್‌ಎಸ್ ಅಭ್ಯರ್ಥಿ ಹರಿಪ್ರಿಯಾ ವಿರುದ್ಧ 38 ಸಾವಿರ ಭಾರೀ ಬಹುಮತದಿಂದ ಗೆಲುವು ಸಾಧಿಸಿದ್ದಾರೆ.

ರಾಮಗುಂಡಂನಲ್ಲಿ ಕಾಂಗ್ರೆಸ್ ಗೆಲುವು

ತೆಲಂಗಾಣ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಸತತ ಮೂರು ಸ್ಥಾನಗಳನ್ನು ಗೆದ್ದಿದೆ. ರಾಮಗುಂಡಂ ಹಾಗೂ ಅಶ್ವರಾವ್‌ಪೇಟೆ, ಇಲ್ಲಾಂಡು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ರಾಮಗುಂಡಂ ಕಾಂಗ್ರೆಸ್ ಅಭ್ಯರ್ಥಿ ರಾಜ್ ಠಾಕೂರ್ ಬಿಆರ್ ಎಸ್ ಅಭ್ಯರ್ಥಿ ಚಂದರ್ ವಿರುದ್ಧ ಜಯಗಳಿಸಿದ್ದಾರೆ.

ಭದ್ರಾಚಲಂನಲ್ಲಿ ಬಿಆರ್‌ಎಸ್ ಗೆಲುವು

ಭದ್ರಾಚಲಂ ಕ್ಷೇತ್ರದಲ್ಲಿ ಬಿಆರ್‌ಎಸ್ ಪಕ್ಷದ ಶಾಸಕ ಡಾ.ತೆಲ್ಲಂ ವೆಂಕಟರಾವ್ ಅವರು 4466 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ಕಾಮರೆಡ್ಡಿಯಲ್ಲಿ ರೇವಂತ್ ರೆಡ್ಡಿ ಮುನ್ನಡೆ

ತೆಲಂಗಾಣ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮುಂದುವರಿದಿದೆ. ಕಾಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ರೇವಂತ್ ರೆಡ್ಡಿ ಮುನ್ನಡೆಯಲ್ಲಿದ್ದಾರೆ. 8 ಸುತ್ತುಗಳ ಅಂತ್ಯಕ್ಕೆ ರೇವಂತ್ ರೆಡ್ಡಿ 26,437 ಮತಗಳನ್ನು ಪಡೆದರೆ, ಸಿಎಂ ಕೆಸಿಆರ್ 24,091 ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿಗೆ 23,802 ಮತಗಳು. ಇದರೊಂದಿಗೆ ರೇವಂತ್ ರೆಡ್ಡಿ 2346 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಪೋಚಾರಂ 8,632 ಮತಗಳ ಮುನ್ನಡೆ

ಕಾಮರೆಡ್ಡಿ ಜಿಲ್ಲೆಯ ಬಾನ್ಸವಾಡ ಕ್ಷೇತ್ರದಲ್ಲಿ ಬಿಆರ್‌ಎಸ್ ಮುನ್ನಡೆ ಸಾಧಿಸಿದೆ. ಬಿಆರ್‌ಎಸ್ ಅಭ್ಯರ್ಥಿ ಪೋಚಾರಂ ಶ್ರೀನಿವಾಸ್ ರೆಡ್ಡಿ ಅವರು ಕಾಂಗ್ರೆಸ್ ಅಭ್ಯರ್ಥಿ ಏಣುಗು ರವೀಂದರ್ ರೆಡ್ಡಿ ಅವರಿಗಿಂತ 8,632 ಮತಗಳ ಬಹುಮತದಿಂದ ಮುನ್ನಡೆ ಸಾಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...