ತೆಲಂಗಾಣ | ಇಂದಿನಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರಂಟಿ ಜಾರಿಗೊಳಿಸಿದ ಕಾಂಗ್ರೆಸ್ ಸರ್ಕಾರ

Date:

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀಡಿದ್ದ ಪ್ರಮುಖ ಆರು ಗ್ಯಾರಂಟಿಗಳ ಪೈಕಿ ಮೊದಲ ಗ್ಯಾರಂಟಿಯಾಗಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಯೋಜನೆ’ ‘ಮಹಾಲಕ್ಷ್ಮಿ’ ಯೋಜನೆಗೆ ಇಂದು(ಡಿ.9) ಶನಿವಾರದಂದು ಚಾಲನೆ ನೀಡಲಾಗಿದೆ.

ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಅವರು ಸರ್ಕಾರಿ ಸ್ವಾಮ್ಯದ ಟಿಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮತ್ತು ರಾಜೀವ್ ಆರೋಗ್ಯಶ್ರೀ ಯೋಜನೆಯಡಿ ಪ್ರಸ್ತುತ 5 ಲಕ್ಷದಿಂದ 10 ಲಕ್ಷಕ್ಕೆ ವ್ಯಾಪ್ತಿಯನ್ನು ಹೆಚ್ಚಿಸುವ ಯೋಜನೆಯ ಎರಡು ಗ್ಯಾರಂಟಿಗಳಿಗೆ ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳಾ ಸಚಿವರಾದ ಸೀತಕ್ಕ ಮತ್ತು ಕೊಂಡ ಸುರೇಖಾ ಅವರು ತೆಲಂಗಾಣ ವಿಧಾನಸಭೆ ಆವರಣದಲ್ಲಿ ಇಡೀ ಸಚಿವ ಸಂಪುಟ ಮತ್ತು ಕಾಂಗ್ರೆಸ್ ಶಾಸಕರ ಸಮ್ಮುಖದಲ್ಲಿ ಬಸ್‌ಗೆ ಚಾಲನೆ ನೀಡಿದರು. ಮುಖ್ಯ ಕಾರ್ಯದರ್ಶಿ ಸಂತಿ ಕುಮಾರಿ ಮತ್ತು ಬಾಕ್ಸಿಂಗ್ ಚಾಂಪಿಯನ್ ನಿಖತ್ ಜರೀನ್ ಉಪಸ್ಥಿತರಿದ್ದರು.

ಮುಖ್ಯಮಂತ್ರಿ ರೇವಂತ್ ರೆಡ್ಡಿ, ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ, ಹಂಗಾಮಿ ಸ್ಪೀಕರ್ ಅಕ್ಬರುದ್ದೀನ್ ಓವೈಸಿ ಮತ್ತು ಸಚಿವರು ಟಿಎಸ್‌ಆರ್‌ಟಿಸಿಯ ಶೂನ್ಯ ಟಿಕೆಟ್ ಮತ್ತು ರಾಜೀವ್ ಆರೋಗ್ಯಶ್ರೀ ಯೋಜನೆಯ ಹೊಸ ಲೋಗೋ ಮತ್ತು ಪೋಸ್ಟರ್‌ಗಳನ್ನು ಅನಾವರಣಗೊಳಿಸಿದರು.

ಈ ವೇಳೆ ಮಾತನಾಡಿದ ರೇವಂತ್ ರೆಡ್ಡಿ, ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರ ಜನ್ಮದಿನದಂದು ಕಾಂಗ್ರೆಸ್ ಸರ್ಕಾರ ತನ್ನ ಆರು ಭರವಸೆಗಳಲ್ಲಿ ಎರಡನ್ನು ಜಾರಿಗೊಳಿಸುತ್ತಿದೆ. ತೆಲಂಗಾಣಕ್ಕೆ ಡಿಸೆಂಬರ್ 9 ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಏಕೆಂದರೆ 2009ರಲ್ಲಿ ಇದೇ ದಿನ ಆಗಿನ ಯುಪಿಎ ಸರ್ಕಾರ ತೆಲಂಗಾಣ ರಾಜ್ಯ ರಚನೆಯ ಪ್ರಕ್ರಿಯೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿತ್ತು” ಎಂದು ಹೇಳುತ್ತಾ ‘ಸೋನಿಯಾ ಗಾಂಧಿ ಅವರನ್ನು ತೆಲಂಗಾಣದ ಮಾತೆ’ ಎಂದು ಬಣ್ಣಿಸಿದರು.

ತೆಲಂಗಾಣವನ್ನು ಕಲ್ಯಾಣ ರಾಜ್ಯವನ್ನಾಗಿ ಮಾಡಲು ಎಲ್ಲ ಆರು ಭರವಸೆಗಳನ್ನು 100 ದಿನಗಳಲ್ಲಿ ಈಡೇರಿಸಲಾಗುವುದು ಎಂದು ಅವರು ಪುನರುಚ್ಚರಿಸಿದರು.

“ತೆಲಂಗಾಣದಲ್ಲಿ ನೆಲೆಸಿರುವ ಎಲ್ಲ ವಯೋಮಾನದ ಹುಡುಗಿಯರು, ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರಿಗೆ ರಾಜ್ಯದ ಗಡಿಯೊಳಗೆ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (TSRTC) ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ವಿಳಾಸವಿರುವ ಯಾವುದೇ ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದು” ಎಂದು ತಿಳಿಸಿದರು.

ಇದೇ ವೇಳೆ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಆರೋಗ್ಯ ವಿಮಾ ಯೋಜನೆಯಾದ ರಾಜೀವ್ ಆರೋಗ್ಯಶ್ರೀ ಅಡಿಯಲ್ಲಿ ಆರ್ಥಿಕ ಮಿತಿಯನ್ನು ಪ್ರತಿ ಕುಟುಂಬಕ್ಕೆ ವಾರ್ಷಿಕ 10 ಲಕ್ಷಕ್ಕೆ ದ್ವಿಗುಣಗೊಳಿಸಲಾಗಿದೆ. ಒಟ್ಟು 90.10 ಲಕ್ಷ ಕೆಳಗಿರುವ ಬಿಪಿಎಲ್ ಕುಟುಂಬಗಳು ಈ ಯೋಜನೆಯಡಿ ಫಲಾನುಭವಿಗಳಾಗಲಿದ್ದಾರೆ. ಈ ಯೋಜನೆಯಡಿಯಲ್ಲಿ 21 ವಿಶೇಷತೆಗಳ ಅಡಿಯಲ್ಲಿ ವಿವಿಧ ಕಾಯಿಲೆಗಳಿಗೆ 1,672 ‘ಹೆಲ್ತ್‌ ಪ್ಯಾಕೇಜ್‌’ಗಳು ಲಭ್ಯವಿದೆ.

ತೆಲಂಗಾಣದಲ್ಲಿ ಅಧಿಕಾರದಲ್ಲಿದ್ದ ಕೆ ಚಂದ್ರಶೇಖರ್ ರಾವ್ ಅವರ ಬಿಆರ್‍‌ಎಸ್ ಪಕ್ಷಕ್ಕೆ ಠಕ್ಕರ್ ನೀಡಲು, ಕಾಂಗ್ರೆಸ್ ‘ಆರು ಗ್ಯಾರಂಟಿ’ ಅಸ್ತ್ರ ಪ್ರಯೋಗಿಸಿತ್ತು. ಮೊದಲ ಗ್ಯಾರಂಟಿ ‘ಮಹಾಲಕ್ಷ್ಮೀ’ ಯೋಜನೆಯನ್ನು ಕಾಂಗ್ರೆಸ್​ ಮುಖ್ಯಸ್ಥೆ ಸೋನಿಯಾ ಗಾಂಧಿ ಘೋಷಣೆ ಮಾಡಿದ್ದರು.

‘ಮಹಾಲಕ್ಷ್ಮೀ’ ಯೋಜನೆಯಡಿ ತೆಲಂಗಾಣದಲ್ಲಿ ಮಹಿಳೆಯರಿಗೆ ಮಾಸಿಕ 2,500 ಹಣ, ಪ್ರತಿ ಸಿಲಿಂಡರ್‌ಗೆ 500 ರೂಪಾಯಿ ಸಬ್ಸಿಡಿ ಮತ್ತು ತೆಲಂಗಾಣದಲ್ಲಿ ಟಿಎಸ್‌ಆರ್‌ಟಿಸಿ ಸರ್ಕಾರಿ ಬಸ್‌ಗಳಲ್ಲಿ ರಾಜ್ಯದೊಳಗಡೆ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಘೋಷಿಸಲಾಗಿತ್ತು. ಕರ್ನಾಟಕದಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣದ ಯೋಜನೆಗೆ ‘ಶಕ್ತಿ’ ಎಂದು ನಾಮಕರಣ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...