ರಾಹುಲ್ ತಿರುಗೇಟು; ಸಂಸತ್ತಿನಲ್ಲಿ ಮಾತನಾಡುವ ಪ್ರಜಾಸತ್ತಾತ್ಮಕ ಹಕ್ಕನ್ನು ಕೇಳಿದ್ದೇನೆ

Date:

  • ಸಂಸತ್ತಿನಲ್ಲಿ ನಿಲುವು ಮುಂದಿಡುವ ಪ್ರಜಾಸತ್ತಾತ್ಮಕ ಹಕ್ಕನ್ನು ಕೇಳಿದ ರಾಹುಲ್
  • ಬಿಜೆಪಿ ಆರೋಪಗಳಿಗೆ ಸಂಸತ್ತಿನಲ್ಲೇ ಉತ್ತರ ನೀಡಲು ಮುಂದಾದ ಕಾಂಗ್ರೆಸ್

ಭಾರತದಲ್ಲಿ ಪ್ರಜಾಪ್ರಭುತ್ವ ಕಾರ್ಯನಿರ್ವಹಿಸುತ್ತಿದ್ದರೆ, ಸಂಸತ್ತಿನಲ್ಲಿ ನನ್ನ ಮಾತನ್ನು ಹೇಳಲು ಸಾಧ್ಯವಾಗುತ್ತದೆ. ನಾಳೆಯೇ ಭಾರತದ ಪ್ರಜಾಪ್ರಭುತ್ವದ ಪರೀಕ್ಷೆ ಆಗಲಿದೆ ಎಂದು ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿಯ ಟೀಕೆಗಳಿಗೆ ಸಂಸತ್ತಿನಲ್ಲೇ ಮಾರುತ್ತರ ನೀಡಲು ಮುಂದಾಗಿದ್ದಾರೆ.

ನವದೆಹಲಿಯ ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸ್ಪೀಕರ್ ನನಗೆ ನಾಳೆ ಮಾತನಾಡಲು ಅವಕಾಶ ನೀಡುತ್ತಾರೆ ಎಂದು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂದು ಸಂಸತ್ತಿಗೆ ತೆರಳಿ ಸ್ಪೀಕರ್ ಬಳಿ ಬಿಜೆಪಿ ಸಚಿವರ ಆರೋಪಗಳಿಗೆ ಸಂಸತ್ತಿನಲ್ಲಿ ಉತ್ತರಿಸಲು ಅವಕಾಶ ಕೊಡಬೇಕು ಎಂದು ಕೇಳಿಕೊಂಡಿದ್ದೆ. ಆದರೆ ಅವರು ಅವಕಾಶ ಕೊಡುವುದಾಗಿ ಭರವಸೆ ನೀಡಲಿಲ್ಲ, ‘ಕೋರಿಕೆಯನ್ನು ಪರಿಗಣಿಸುತ್ತೇನೆ’ ಎಂದಷ್ಟೇ ಹೇಳಿದ್ದಾರೆ. ನಾನು ಲಂಡನ್‌ನಲ್ಲಿ ಹೇಳಿದ್ದೆಲ್ಲವೂ ಸಾರ್ವಜನಿಕ ದಾಖಲೆಗಳಿಂದ ತೆಗೆದುಕೊಂಡ ವಿಷಯಗಳು. ಉದ್ಯಮಿ ಗೌತಮ್ ಅದಾನಿ ಅವರೊಂದಿಗಿನ ಸಂಬಂಧದ ಬಗ್ಗೆ ನಾನು ಪ್ರಧಾನಿ ಮೋದಿ ಅವರಿಗೆ ಕೇಳುತ್ತಿರುವ ಪ್ರಶ್ನೆಗಳಿಗೆ ಉತ್ತರಿಸಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ” ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದರು.

“ನಾನು ಸಂಸತ್ ಸದಸ್ಯ. ಆದ್ದರಿಂದ ಸದನದಲ್ಲಿ ನನ್ನ ಬಗ್ಗೆ ಆರೋಪ ಕೇಳಿ ಬಂದಾಗ, ನನ್ನ ನಿಲುವು ತಿಳಿಸುವುದು ನನ್ನ ಹಕ್ಕು. ನನಗೆ ಮಾತನಾಡಲು ಅವಕಾಶ ನೀಡಲಾಗುತ್ತದೋ ಇಲ್ಲವೋ ಎಂಬುದು ಭಾರತದ ಪ್ರಜಾಪ್ರಭುತ್ವದ ನಿಜವಾದ ಪರೀಕ್ಷೆಯಾಗಲಿದೆ. ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡಿದರೆ ಈ ವಿಷಯದ ಬಗ್ಗೆ ನನ್ನ ಅನಿಸಿಕೆ ಹೇಳುತ್ತೇನೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಪಾದನೆಗಳ ಬಲೆಯಲ್ಲಿ ಕೇಜ್ರೀವಾಲ್ ಸಂಗಾತಿಗಳು

“ಭಾರತ-ಇಸ್ರೇಲ್‌ನ ಸಂಪೂರ್ಣ ರಕ್ಷಣಾ ಒಪ್ಪಂದ ಅದಾನಿಗೆ ಹೇಗೆ ನೀಡಲಾಗಿದೆ ಎಂಬುದರ ಕುರಿತು ಪ್ರಧಾನಿ ಮೋದಿ ಅವರಿಗೆ ಕೆಲವು ಪ್ರಶ್ನೆಗಳಿವೆ. ಪ್ರಧಾನಿಗೂ ಅದಾನಿಗೂ ಏನು ಸಂಬಂಧ ಎಂಬುದು ನನ್ನ ಪ್ರಶ್ನೆ. ಸಂಸತ್ತಿನಲ್ಲಿ ನಾನು ಈ ಬಗ್ಗೆ ಕೇಳಿದ ಪ್ರಶ್ನೆಗಳನ್ನು ಕಡತಗಳಿಂದ ತೆಗೆದು ಹಾಕಲಾಗಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಲಂಡನ್‌ನಲ್ಲಿ ಅವರು ಮಾಡಿದ ಹೇಳಿಕೆಗೆ ಕ್ಷಮೆಯಾಚಿಸಬೇಕೆಂದು ಕೇಂದ್ರ ಸರ್ಕಾರ ಒತ್ತಾಯಿಸುತ್ತಿರುವುದರಿಂದ ಸತತ ನಾಲ್ಕನೇ ದಿನವೂ ಕಲಾಪ ಮುಂದುವರಿಯಲಿಲ್ಲ. ಉಭಯ ಸದನಗಳನ್ನು ಇಂದೂ (ಮಾರ್ಚ್ 16) ಮುಂದೂಡಲಾಯಿತು.

ಈ ತಿಂಗಳ ಆರಂಭದಲ್ಲಿ ಇಂಗ್ಲೆಂಡ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, “ಭಾರತೀಯ ಪ್ರಜಾಪ್ರಭುತ್ವ ಒತ್ತಡದಲ್ಲಿದೆ ಮತ್ತು ವಿರೋಧಿಸುವ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದಾಗ ಮೈಕ್‌ಗಳನ್ನು ಹೆಚ್ಚಾಗಿ “ಆಫ್” ಮಾಡಲಾಗುತ್ತದೆ. ನಾನು ಮಾತನಾಡುತ್ತಿರುವಾಗ ನನಗೆ ಹಲವಾರು ಬಾರಿ ಹೀಗಾಯಿತು” ಎಂದು ರಾಹುಲ್ ನೀಡಿರುವ ಹೇಳಿಕೆಯನ್ನು ಬಿಜೆಪಿ ವಿರೋಧಿಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...