ಗ್ಯಾರಂಟಿಗಳ ಟೀಕಿಸುವ ಮುನ್ನ ಬಿಜೆಪಿ ಕೊಟ್ಟ ಮಾತು ಉಳಿಸಿಕೊಳ್ಳಲಿ: ಡಿಕೆಶಿ ತಿರುಗೇಟು

Date:

  • ಬೆಲೆ ಏರಿಕೆ ಹೊರೆ ತಗ್ಗಿಸಲು ಗ್ಯಾರಂಟಿ ಯೋಜನೆ ನೀಡಲಾಗಿದೆ
  • ಪ್ರಧಾನಮಂತ್ರಿಗಳು ಹಿಂದೆ ಹೇಳಿದ ಭರವಸೆಗಳನ್ನು ಈಡೇರಿಸಲಿ

ವಿರೋಧ ಪಕ್ಷದವರು ಕಾಂಗ್ರೆಸ್‌ ಗ್ಯಾರಂಟಿಗಳನ್ನು ಟೀಕೆ ಮಾಡುವ ಮೊದಲು ತಾವು ನೀಡಿದ್ದ ಭರವಸೆಗಳನ್ನು ಈಡೇರಿಸಿ ಕೊಟ್ಟ ಮಾತು ಉಳಿಸಿಕೊಳ್ಳಲಿ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ತಿರುಗೇಟು ನೀಡಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿರೋಧ ಪಕ್ಷದವರು ಇರುವುದೇ ಟೀಕೆ ಮಾಡಲು, ಅವರು ಟೀಕೆ ಮಾಡಲಿ, ಅವರು ಟೀಕೆ ಮಾಡುವ ಮೊದಲು ಪ್ರಧಾನಮಂತ್ರಿಗಳು ಈ ಹಿಂದೆ ಹೇಳಿದಂತೆ ವಿದೇಶದಿಂದ ಕಪ್ಪು ಹಣ ತರಲಿ, ಎಲ್ಲರ ಖಾತೆಗೆ 15 ಲಕ್ಷ ಹಾಕಲಿ, ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡಲಿ, ರೈತರ ಆದಾಯ ಡಬಲ್ ಮಾಡಲಿ, ಸದ್ಯದಲ್ಲೇ ಕೇಂದ್ರ ಸರ್ಕಾರಕ್ಕೆ ಪರೀಕ್ಷೆ ಎದುರಾಗುತ್ತಿದ್ದು, ಅದರಲ್ಲಿ ಅವರು ಪಾಸ್ ಆಗಲು ಕೊಟ್ಟಿರುವ ಮಾತು ಉಳಿಸಿಕೊಳ್ಳಲಿ ಎಂದು ಸವಾಲ್‌ ಹಾಕಿದರು.

ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ಆರ್ಥಿಕ ಹೊರೆ ತಗ್ಗಿಸಲು ಕಾಂಗ್ರೆಸ್ ಸರ್ಕಾರ ಈ ಗ್ಯಾರಂಟಿ ಯೋಜನೆಗಳನ್ನು ನೀಡಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಡಿಗೆ ಮನೆಯಲ್ಲಿರುವವರಿಗೆ ಗೃಹಜ್ಯೋತಿ ಯೋಜನೆ ಫಲಾನುಭವದ ಬಗ್ಗೆ ಕೇಳಿದ ಪ್ರಶ್ನೆಗೆ, “ಬಾಡಿಗೆ ಮನೆಯಲ್ಲಿರುವವರು ಬಡವರಲ್ಲವೇ. ಅವರಿಗೂ ಈ ಯೋಜನೆಯ ಫಲ ಸಿಗಬೇಕು. ಜನರು ಬಾಡಿಗೆ ಅಥವಾ ಸ್ವಂತ ಮನೆಯಲ್ಲಾದರೂ ಇರಲಿ ಈ ಯೋಜನೆಯ ಫಲ ಅವರಿಗೆ ಸಿಗಲಿದೆ. ನಮ್ಮ ಮಾತು 200 ಯೂನಿಟ್ ವರೆಗೂ ಉಚಿತ ಎಂದು ಹೇಳಿದ್ದೆವು ಅದರಂತೆ ನೀಡಿದ್ದೇವೆ. ಇಷ್ಟು ದಿನಗಳ ಕಾಲ ನೂರು ಯೂನಿಟ್ ಬಳಸುತ್ತಿದ್ದವರು ಏಕಾಏಕಿ 200 ಯುನಿಟ್ ಬಳಸಿದರೆ ಅದಕ್ಕೆ ಅವಕಾಶವಿಲ್ಲ” ಎಂದು ತಿಳಿದರು.

ಯೋಜನೆಯ ಫಲ ತ್ಯಜಿಸಲು ಅವಕಾಶ ಕಲ್ಪಿಸುವಿರಾ ಎಂದು ಕೇಳಿದಾಗ, “ಖಂಡಿತವಾಗಿಯೂ ಇದಕ್ಕೆ ಅವಕಾಶ ಕಲ್ಪಿಸುತ್ತೇವೆ. ಒಂದು ವೇಳೆ ಯಾರಿಗಾದರೂ ಈ ಯೋಜನೆ ಫಲ ಬೇಡವಾದರೆ ಅದನ್ನು ಅವರು ತ್ಯಜಿಸಿ ವಿದ್ಯುತ್‌ ಬಿಲ್ ಕಟ್ಟಬಹುದು. ಅನೇಕ ಅಧಿಕಾರಿಗಳು, ಮಾಧ್ಯಮ ಮುಖ್ಯಸ್ಥರು, ಸರ್ಕಾರಿ ನೌಕರರು ಈ ಗೃಹಜ್ಯೋತಿ ಯೋಜನೆಯ ಫಲ ಬೇಡ ಎಂದು ಪತ್ರ ಬರೆದಿದ್ದು, ಮತ್ತೆ ಕೆಲವರು ಖುದ್ದಾಗಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಜನರಿಗೆ ಮಕ್ಮಲ್ ಟೋಪಿ ಹಾಕಿದ ‘ಷರತ್ತು ಸರ್ಕಾರ’: ಕುಮಾರಸ್ವಾಮಿ ಕಿಡಿ

“ಯಾರಿಗೆಲ್ಲ ಈ ಯೋಜನೆಯ ಲಾಭ ಬೇಡವೋ ಅವರಿಗೆ ಇದನ್ನು ತ್ಯಜಿಸಲು ಅವಕಾಶ ನೀಡಲಾಗುವುದು. ಅದಕ್ಕಾಗಿ ಈ ಯೋಜನೆಗಳ ಫಲ ಪಡೆಯಲು ಅರ್ಜಿಯನ್ನು ಕರೆಯಲಾಗಿದೆ. ಕೇಂದ್ರ ಸರ್ಕಾರ ಅಡುಗೆ ಅನಿಲ ಸಬ್ಸಿಡಿ ತ್ಯಜಿಸಲು ಕರೆ ಕೊಟ್ಟಾಗ ಅನೇಕರು ಅದಕ್ಕೆ ಸ್ಪಂದಿಸಿ ಸಬ್ಸಿಡಿಯನ್ನು ಕೈಬಿಟ್ಟಿದ್ದರು. ಅದೇ ರೀತಿ ಇಲ್ಲಿಯೂ ಯೋಜನೆ ಲಾಭ ತ್ಯಜಿಸಬಹುದು” ಎಂದು ತಿಳಿಸಿದರು.

ಕಾಂಗ್ರೆಸ್ ನವರು ಹಣೆಗೆ ತುಪ್ಪ ಸವರುತ್ತಿದ್ದಾರೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಟೀಕೆ ಕುರಿತು ಕೇಳಿದಾಗ, “ಕುಮಾರಣ್ಣ ದೊಡ್ಡವರು ಅವರಿಗೆ ಬಹಳ ಅನುಭವವಿದೆ. ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ನಾನು ನನ್ನ ಕರ್ತವ್ಯ ಮಾಡುತ್ತೇನೆ ಅವರು ಅವರ ಕೆಲಸ ಮಾಡಲಿ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...