ಮೂರು ತಿಂಗಳಿಂದ ಬಾರದ ಗೃಹಲಕ್ಷ್ಮಿ ಹಣ, ಪಾಪರ್ ಆದ ಕಾಂಗ್ರೆಸ್‌ ಸರ್ಕಾರ: ಜೆಡಿಎಸ್‌ ಟೀಕೆ

Date:

ಮಹಿಳೆಯರಿಗೆ ಪ್ರತಿ ತಿಂಗಳು ನೀಡಬೇಕಾಗಿದ್ದ ಎರಡು ಸಾವಿರ ರೂ. ಗೃಹಲಕ್ಷ್ಮಿ ಹಣವನ್ನು ಕಳೆದ ಮೂರು ತಿಂಗಳಿಂದ ನೀಡಲಾಗದೇ ಕಾಂಗ್ರೆಸ್‌ ಸರ್ಕಾರ ಪಾಪರ್ ಆಗಿದೆ ಎಂದು ಜೆಡಿಎಸ್‌ ಆರೋಪಿಸಿದೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, “ಫ್ರೀ ಫ್ರೀ ಫ್ರೀ ಎಂದು ಬೊಗಳೆ ಬಿಟ್ಟು ಅಧಿಕಾರಕ್ಕೇರಿದ ಕಾಂಗ್ರೆಸ್, ವಚನ ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ಮತದಾರರಿಗೆ ಮಹಾದ್ರೋಹ ಎಸಗಿದೆ. ದಿವಾಳಿಯತ್ತ ಕಾಂಗ್ರೆಸ್ ಸರ್ಕಾರ ಮುಖಮಾಡಿದೆ” ಎಂದು ಟೀಕಿಸಿದೆ.

“ಪ್ರತಿ ತಿಂಗಳೂ ತಾಂತ್ರಿಕ ಸಮಸ್ಯೆ ಎನ್ನುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರೇ, ಸದ್ದಿಲ್ಲದೆ ರಾಜ್ಯದಲ್ಲಿ ಎರಡು ಲಕ್ಷ ಮಹಿಳೆಯರಿಗೆ 2,000 ರೂ. ಗೃಹಲಕ್ಷ್ಮಿ ಹಣ ಸ್ಥಗಿತಗೊಳಿಸಿದ್ದೀರಿ. ನಿಮ್ಮದು ವಚನಭ್ರಷ್ಟ ಸರ್ಕಾರ ಅಲ್ಲವೇ” ಎಂದು ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ದ್ವೇಷ ರಾಜಕಾರಣದ ವಿರುದ್ಧ ಒಗ್ಗಟ್ಟಿನ ಮಂತ್ರವೇ ಮದ್ದು

“ಗೃಹಲಕ್ಷ್ಮಿ ಹಣಕ್ಕೆ 3 ತಿಂಗಳಿಂದ ತಾಂತ್ರಿಕ ಸಮಸ್ಯೆ, ಈಗ ರಾಜ್ಯದಲ್ಲಿ 2 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಸ್ಥಗಿತ, ಕಾಂಗ್ರೆಸ್‌ ಯೋಗ್ಯತೆಗೆ ಪೂರ್ತಿ 10 ಕೆಜಿ ಅಕ್ಕಿ ಕೊಡಲು ಸಾಧ್ಯವೇ ಆಗಿಲ್ಲ. ಈಗ 20 ಲಕ್ಷ ರೇಷನ್ ಕಾರ್ಡ್ ರದ್ದು ಮಾಡುತ್ತಿದ್ದೀರಿ. 200 ಯೂನಿಟ್ ಉಚಿತ ವಿದ್ಯುತ್ ಯಾರಿಗೂ ಸಿಗುತ್ತಿಲ್ಲ. ಯುವ ನಿಧಿ ಯಾರಿಗೂ ಸಿಕ್ಕಿಲ್ಲ, ಸಿಗುವುದು ಇಲ್ಲ ಇದು ಮಾತ್ರ ಗ್ಯಾರಂಟಿ” ಎಂದು ಜೆಡಿಎಸ್‌ ಲೇವಡಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...