ಕೋಲಾರದಲ್ಲಿ ನಮ್ಮ ಅಭ್ಯರ್ಥಿ ಸೋಲಿಗೆ ನನ್ನಿಂದ ಒಳ ಏಟು ಬಿದ್ದಿಲ್ಲ: ಸಚಿವ ಕೆ ಎಚ್ ಮುನಿಯಪ್ಪ

Date:

ನಾನು ಪಕ್ಷದ ಶಿಸ್ತಿನ ಸಿಪಾಯಿ. ಹೈಕಮಾಂಡ್ ಹೇಳಿದ ನಂತರ ಕೋಲಾರ ಚುನಾವಣಾ ಪ್ರಚಾರಕ್ಕೆ ಹೋಗಿದ್ದೆ. ಸೋಲಿಗೆ ಯಾರು ಕಾರಣ ಅನ್ನೋದು ಜನಜನಿತವಾಗಿದೆ. ಇದನ್ನು ಹೈಕಮಾಂಡ್, ರಾಜ್ಯ ನಾಯಕರು ಕೇಳಬೇಕು.‌ ಅವರನ್ನು ಕರೆಸಿ ಬುದ್ದಿ ಹೇಳಬೇಕು. ನನ್ನ ಕಡೆಯಿಂದ ಯಾವುದೇ ಕಾರಣಕ್ಕೂ ಒಳ ಏಟು ಬಿದ್ದಿಲ್ಲ ಎಂದು ಸಚಿವ ಕೆ ಎಚ್ ಮುನಿಯಪ್ಪ ಹೇಳಿದರು.

ಬೆಂಗಳೂರಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, “ಕೋಲಾರ ಸೋಲಿನ ಬಗ್ಗೆ ಜವಾಬ್ದಾರಿ ತೆಗೆದುಕೊಂಡ ಜನರು ಇದಕ್ಕೆ ಉತ್ತರ ಹೇಳಬೇಕಿದೆ. ಯಾರು ನಮ್ಮ‌ ಕುಟುಂಬಕ್ಕೆ ಟಿಕೆಟ್ ಕೊಡಬಾರದು ಎಂದರೋ ಅವರು ಹೇಳಬೇಕು. ಮುನಿಯಪ್ಪಗೆ ಬೇಡ ನಾವು ಗೆಲ್ಲಿಸಿಕೊಂಡು ಬರುತ್ತೇವೆ ಎಂದಿದ್ದರು. ಆ ನಾಯಕರು ಉತ್ತರಿಸಲಿ” ಎಂದರು.

“ನಮಗೆ ರಾಜ್ಯದಲ್ಲಿ 15ರಿಂದ 20 ಸ್ಥಾನಗಳು ಬರಬಹುದೆಂಬ ನಿರೀಕ್ಷೆ ಇತ್ತು. ಬಿಜೆಪಿ- ಜೆಡಿಎಸ್ ಒಂದಾದ ಕಾರಣಕ್ಕೆ ನಮ್ಮ ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆ. ಕೋಲಾರ, ಚಿಕ್ಕಬಳ್ಳಾಪುರ ಮಾತ್ರವಲ್ಲ ಇನ್ನೂ ಕೆಲವು ಕಡೆ ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆ. ಸ್ಥಳೀಯವಾಗಿ ಕೆಲವರು ಒಟ್ಟಾಗಿ ಕೆಲಸ ಮಾಡಿಲ್ಲ. ಈ ಕಾರಣಕ್ಕೂ ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆ. ಇದನ್ನು ಹೈಕಮಾಂಡ್ ಗಮನಕ್ಕೂ ತಂದಿದ್ದೇನೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣೆಯಲ್ಲಿ ಸಿಎಂ, ಡಿಸಿಎಂ ಎಲ್ಲರೂ ಒಟ್ಟಾಗಿ ಕೆಲಸ ಮಾಡಿದ್ದಾರೆ.‌ ನಾಯಕತ್ವ ಬದಲಾವಣೆ ಕೂಗಿಗೂ ಫಲಿತಾಂಶಕ್ಕೂ ಸಂಬಂಧ ಇಲ್ಲ. ಕೆಲವೊಮ್ಮೆ ರಾಜಕೀಯವಾಗಿ ಫಲಿತಾಂಶದಲ್ಲಿ ಬದಲಾವಣೆ ಆಗುತ್ತದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ವಿಷಯ ನಮ್ಮ ಮುಂದೆ ಇಲ್ಲ. ಕೋರ್‌ ಕಮಿಟಿ ಮಾಡಬೇಕೆಂದು ಮೊದಲಿನಿಂದಲೂ ಹೇಳುತ್ತಿದ್ದೇನೆ. ಅದು ಬೇಕೇ ಬೇಕು ಎಂದು ಹೈಕಮಾಂಡ್ ಗೆ ಹೇಳಿದ್ದೇನೆ. ನೀತಿ, ನಿರ್ಣಯಗಳನ್ನು ಕೈಗೊಳ್ಳುವ ವಿಚಾರದಲ್ಲಿ ಅದು ಬಹಳ ಮುಖ್ಯ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...