ಮೋದಿ ಮೇಲೆ ದ್ವೇಷ ಕಾರುವುದಷ್ಟೇ ಪ್ರತಿಪಕ್ಷಗಳ ಸಭೆಯ ಪ್ರಮುಖ ಅಜೆಂಡಾ: ಬಿಜೆಪಿ ವಾಗ್ದಾಳಿ

Date:

ಬೆಂಗಳೂರಿನ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ನಡೆಯುತ್ತಿರುವ ಯುಪಿಎ ಮಿತ್ರಪಕ್ಷಗಳ ಸಭೆ ಕುರಿತು ಬಿಜೆಪಿ ಟೀಕಿಸಿದ್ದು, ತಿಂಡಿ ತಿನ್ನುವ ವೇಳೆ ಇರುವ ಇವರ ಸ್ನೇಹ, ಊಟದ ವೇಳೆಗೆ ಮಾಯವಾದರೂ ಅಚ್ಚರಿ ಇಲ್ಲ ಎಂದಿದೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, “ದೇಶದ ಹಿತ ಬಯಸದ, ಸದಾ ವೈಯುಕ್ತಿಕ ಹಿತಾಸಕ್ತಿಗಳ ಮೇಲಾಟದಲ್ಲಿ ತೊಡಗುವ, ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಅವಕಾಶವಾದಿಗಳ ಸಭೆ ಇಂದು ಬೆಂಗಳೂರಿನಲ್ಲಿ ನಡೆಯುತ್ತಿದೆ. ಜಗಮೆಚ್ಚಿದ ನಾಯಕ ನರೇಂದ್ರ ಮೋದಿ ಅವರ ಮೇಲೆ ದ್ವೇಷ ಕಾರುವುದಷ್ಟೇ ಇವರ ಪ್ರಮುಖ ಅಜೆಂಡಾ” ಎಂದು ಆರೋಪಿಸಿದೆ.

“ಸದಾ ಅಧಿಕಾರಕ್ಕಾಗಿ ಕಚ್ಚಾಡುವ ಇವರು ರಾಜಕಾರಣದಲ್ಲಿ ಇದುವರೆಗೂ ಬದ್ಧತೆ ಎಂಬುದನ್ನು ಒಮ್ಮೆಯೂ ಪ್ರದರ್ಶಿಸಿಲ್ಲ. ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತಗಳು ಇವರ ಮುಖ್ಯ ಸಿದ್ದಾಂತವಾಗಿದ್ದು, ಅದನ್ನು ಸಾಧಿಸಲು ಈಗ ಒಂದಾಗುವ ನಾಟಕವಾಡುತ್ತಿದ್ದಾರೆ” ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಸಭೆಯ ಆಯೋಜಕರು ಯಾರು? ಈ ಸಭೆಯ ಅಧ್ಯಕ್ಷರು ಯಾರು? ಈ ಸಭೆಯ ಸಂಯೋಜನೆ ಯಾವ ಪಕ್ಷದ್ದು? ಇದ್ಯಾವುದರ ಬಗ್ಗೆ ಸ್ವಲ್ಪವೂ ಸ್ಪಷ್ಟತೆ ಇಲ್ಲ. “ಯುನೈಟೆಡ್ ವಿ ಸ್ಟಾಂಡ್” ಎಂಬ ಈ ಕಿಟ್ಟಿ ಪಾರ್ಟಿಯ ಹೆಸರೇ ಇವರ ಮಧ್ಯೆ ಒಗ್ಗಟ್ಟು ದೂರದ ಬೆಟ್ಟ ಎಂಬುದನ್ನು ನಿರೂಪಿಸುತ್ತದೆ” ಎಂದು ಟೀಕಿಸಿದೆ.

“ದಶಕಗಳಿಂದ ಪಶ್ಚಿಮ ಬಂಗಾಳದಲ್ಲಿ ಪರಸ್ಪರ ಕಚ್ಚಾಡುತ್ತಿರುವ ಮಮತಾ ಬ್ಯಾನರ್ಜಿಯ ಟಿಎಂಸಿ ಹಾಗೂ ಕಮ್ಯುನಿಸ್ಟರು ಇಂದು ಒಂದೇ ಟೇಬಲ್‌ನಲ್ಲಿ ಕುಳಿತು ಒಗ್ಗಟ್ಟು ಪ್ರದರ್ಶಿಸುತ್ತಾರಂತೆ. ಕೇರಳದಲ್ಲಿ ಅಧಿಕಾರಕ್ಕಾಗಿ ಹೊಡೆದಾಡುವ ಕಾಂಗ್ರೆಸ್ ಮತ್ತು ಕಮ್ಯುನಿಸ್ಟರು ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಕಾಮ್ರೇಡ್‌ಗಳಂತೆ. ಪಂಜಾಬ್‌ನಲ್ಲಿ ಬಾಯಿಗೆ ಬಂದಂತೆ ಪರಸ್ಪರ ಬೈದಾಡಿಕೊಳ್ಳುವ ಆಮ್ ಆದ್ಮಿ ಪಕ್ಷದವರು ಹಾಗೂ ಕಾಂಗ್ರೆಸ್‌ನವರು, ಇಲ್ಲಿ ಮಾತ್ರ ಬಾಂಧವರಂತೆ” ಎಂದು ವ್ಯಂಗ್ಯವಾಡಿದೆ.

“ಕನ್ನಡಿಗರ ಕುಡಿಯುವ ನೀರಿಗೆ, ಕಾವೇರಿ ಹಾಗೂ ಮೇಕೆದಾಟು ಯೋಜನೆಗಳಿಗೆ ಸದಾ ಇನ್ನಿಲ್ಲದಂತೆ ತೊಂದರೆ ಕೊಡುವ ತಮಿಳುನಾಡಿನ ಸಿಎಂ ಸ್ಟಾಲಿನ್‌ಗೆ, ಕರ್ನಾಟಕದ ಕಾಂಗ್ರೆಸ್ ಪಕ್ಷ ಚಿನ್ನತಂಬಿಯಂತೆ. ಕನ್ನಡಿಗರಿಗೆ ಮಹಾದಾಯಿ ನದಿಯ ಒಂದು ತೊಟ್ಟು ನೀರು ಬಿಡುವುದಿಲ್ಲವೆಂದು ಗೋವಾದಲ್ಲಿ ಘೋಷಿಸಿದ್ದ ಸೋನಿಯಾ ಗಾಂಧಿಗೆ ಇಲ್ಲಿ ದೊಡ್ಡ ಕುರ್ಚಿಯಂತೆ. ಸೋನಿಯಾ ಗಾಂಧಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಬಾರದೆಂದು, ಕಾಂಗ್ರೆಸ್ ಪಕ್ಷವನ್ನೇ ತುಂಡರಿಸಿ ಹೊರ ಬಂದ ಎನ್.ಸಿ.ಪಿ ಸಹ ಇಲ್ಲಿ ಅತಿಥಿಯಂತೆ” ಎಂದು ಕುಟುಕಿದೆ.

ಈ ಸುದ್ದಿ ಓದಿದ್ದೀರಾ? ಇಂದಿನ ಎನ್‌ಡಿಎ ಸಭೆಯ ನಿರ್ಧಾರ ನೋಡಿಕೊಂಡು ಮೈತ್ರಿ ಬಗ್ಗೆ ಮಾತುಕತೆಗೆ ಜೆಡಿಎಸ್ ಚಿಂತನೆ

“ಒಬ್ಬರಿಗೊಬ್ಬರು ಹೊಡೆದಾಡಿಕೊಂಡು ಬಿಹಾರವನ್ನು ‘ಬಿಮಾರು’ಗೊಳಿಸಿದ್ದ ನಿತೀಶ್ ಕುಮಾರ್ ಮತ್ತು ಲಾಲೂ ಪ್ರಸಾದ್ ಯಾದವ್, ಇಲ್ಲಿ ಭಾಯಿ-ಭಾಯಿಗಳಂತೆ. ಭಾರತವನ್ನು ತುಂಡರಿಸುವಂತಹ ಹೇಳಿಕೆಗಳನ್ನು ನೀಡುವ, ಪಾಕಿಸ್ಥಾನ ಪ್ರೇಮಿ ಫಾರೂಕ್ ಅಬ್ದುಲ್ಲಾಗೂ ಸಹ ಇಲ್ಲಿಗೆ ಆಹ್ವಾನವಿದೆಯಂತೆ” ಎಂದು ಆರೋಪಿಸಿದೆ.

“ಹಿಂದೂ ಧರ್ಮವನ್ನು ಸದಾ ಅವಹೇಳನ ಮಾಡುವ, ಹಿಂದೂಗಳನ್ನು ಅತ್ಯಂತ ಕೆಟ್ಟದಾಗಿ ನಿಂದಿಸುವ, ದ್ವೇಷಿಸುವ ತಮಿಳುನಾಡಿನ ತೋಳ್ ತಿರುಮಾವಳವನ್, ಮುಸ್ಲಿಂ ಲೀಗ್‌ಗೆ ಇಲ್ಲಿ ಪಾಲಿದೆಯಂತೆ. ಇಂತಹವರಿಂದ ಸದೃಢ ಭಾರತ ಹಾಗೂ ಸಶಕ್ತ ಭಾರತವನ್ನು ನಿರ್ಮಿಸಲು ಸಾಧ್ಯವೇ? ತಿಂಡಿ ತಿನ್ನುವ ವೇಳೆ ಇರುವ ಇವರುಗಳ ಸ್ನೇಹ, ಊಟದ ವೇಳೆಗೆ ಮಾಯವಾದರೂ ಅಚ್ಚರಿ ಇಲ್ಲ” ಎಂದು ಬಿಜೆಪಿ ಅಭಿಪ್ರಾಯಪಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...