ಸುರ್ಜೇವಾಲ ಇದ್ದ ಸಭೆ ಸರ್ಕಾರದ ಅಧಿಕೃತ ಸಭೆಯಲ್ಲ: ಸಿಎಂ ಸಿದ್ದರಾಮಯ್ಯ

Date:

  • ಸುರ್ಜೇವಾಲ ವಿರುದ್ದ ರಾಜ್ಯಪಾಲರಿಗೆ ದೂರು ನೀಡಲು ಮುಂದಾದ ಬಿಜೆಪಿ
  • ಸಂಸದ ಪ್ರತಾಪ್ ಸಿಂಹ ಎಳಸು, ಆತನಿಗೆ ರಾಜಕೀಯ ಪಕ್ವತೆ ಇಲ್ಲ ಎಂದ ಸಿಎಂ

ಬಿಬಿಎಂಪಿ ಚುನಾವಣೆ ತಯಾರಿ ಹಿನ್ನೆಲೆಯಲ್ಲಿ ಖಾಸಗಿ ಹೋಟೆಲ್‌ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನಡೆಸಿದ್ದ ಸಭೆ ಸರ್ಕಾರದ ಅಧಿಕೃತ ಸಭೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುರ್ಜೇವಾಲ ಪಕ್ಷದ ಶಾಸಕರೊಂದಿಗೆ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸುತ್ತಿದ್ದರು. ಅದು ಅಧಿಕಾರಿಗಳ ಸಭೆಯಲ್ಲ ಎಂದು ಸಿಎಂ ಹೇಳಿ, ಸಭೆ ಹಿನ್ನೆಲೆ ವಿವರಿಸಿದರು.

ಇತ್ತ ಸಭೆ ನಡೆಯುತ್ತಿದ್ದ ಸಂದರ್ಭದಲ್ಲೇ ಹೆಬ್ಬಾಳ ಸಂಚಾರದಟ್ಟಣೆ ಪರಿಶೀಲಿಸಲು ಡಿಸಿಎಂ ಶಿವಕುಮಾರ್ ಆ ಮಾರ್ಗ ತೆರಳುತ್ತಿದ್ದರು. ಅವರು ಸುರ್ಜೇವಾಲರನ್ನು ಭೇಟಿ ಮಾಡಲು ತೆರಳಿದಾಗ ಜೊತೆಯಲ್ಲಿದ್ದ ಅಧಿಕಾರಿಗಳು ಅವರೊಂದಿಗೆ ತೆರಳಿ ಸೌಜನ್ಯದ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುರ್ಜೇವಾಲಗೆ ಅಧಿಕಾರಿಗಳ ಸಭೆ ಕರೆಯಲು ಆಗುತ್ತದೆಯೇ? ಅಥವಾ ಅವರೇಕೆ ಹಾಗೆ ಮಾಡುತ್ತಾರೆ ಎಂದ ಸಿದ್ದರಾಮಯ್ಯ ಕುಮಾರಸ್ವಾಮಿ ಸುಮ್ಮನೆ ಇಲ್ಲದ ಆರೋಪ ಮಾಡುತ್ತಾರೆ ಎಂದರು.

ಬಿಜೆಪಿಯವರು ಸಣ್ಣಸಣ್ಣ ವಿಚಾರವನ್ನು ದೊಡ್ಡದು ಮಾಡುತ್ತಾರೆ. ಈ ವಿಚಾರದಲ್ಲಿ ಅವರೇನೋ ರಾಜ್ಯಪಾಲರಿಗೆ ದೂರು ಕೊಡುತ್ತಾರಂತೆ, ಕೊಡಲಿ ಬಿಡಿ. ನಾವೂ ರಾಜ್ಯಪಾಲರಿಗೆ ವಿಚಾರದ ಸ್ಪಷ್ಟನೆ ನೀಡುತ್ತೇವೆ ಎಂದು ಹೇಳಿದರು.

ಪ್ರತಾಪ್ ಸಿಂಹ ಎಳಸು

ಹೊಂದಾಣಿಕೆ ರಾಜಕಾರಣದ ಆರೋಪ ಮಾಡಿರುವ ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಆತ ಎಳಸು, ಆತನಿಗೆ ರಾಜಕೀಯದ ಪಕ್ವತೆ ಇಲ್ಲ. ಬಾಯಿಗೆ ಬಂದಂತೆ ಏನೇನೋ ಮಾತಾಡ್ತಾನೆ ಎಂದ ಸಿಎಂ ಆರೋಪ ಮಾಡುವ ಆತ ಮೊದಲು ನೇರವಾಗಿ ಹೊಂದಾಣಿಕೆ ಮಾಡಿಕೊಂಡವರ ಹೆಸರು ಹೇಳಲಿ. ಅದಕ್ಕೇಕೆ ಹಿಂಜರಿಕೆ ಎಂದರು.

ಈ ಸುದ್ದಿ ಓದಿದ್ದೀರಾ?:ಧಮ್ಮು, ತಾಕತ್ತು ಇದ್ದರೆ ಅಡ್ಜಸ್ಮೆಂಟ್ ಮಾಡಿಕೊಂಡವರ ಹೆಸರು ಹೇಳಿ: ಸಿ ಟಿ ರವಿಗೆ ಕಾಂಗ್ರೆಸ್ ಸವಾಲು

ಪ್ರತಾಪ್ ಸಿಂಹ ಹೇಳಿದ ತಕ್ಷಣ ಅವನು ಆಗ್ರಹಿಸುವ ವಿಚಾರಗಳ ತನಿಖೆ ಮಾಡಿಸಲು ಆಗುತ್ತದೆಯೇ? ನಾವು ಯಾವಾಗ ಯಾವುದರ ತನಿಖೆ ಮಾಡಿಸಬೇಕು, ಯಾರಿಂದ ತನಿಖೆ ಮಾಡಿಸಬೇಕು ಎನ್ನುವುದನ್ನು ತಿಳಿದುಕೊಂಡಿದ್ದೇವೆ ಎಂದು ಪ್ರತಾಪ್ ಸಿಂಹಗೆ ತಿರುಗೇಟು ನೀಡಿದರು.

ನಾನು ಅಧಿಕಾರದಲ್ಲಿರುವಾಗ ವಿಪಕ್ಷದವರ ಜತೆ ಮಾತಾಡುವುದಿಲ್ಲ. ಅವರ ಮನೆಗೂ ಹೋಗುವುದಿಲ್ಲ, ಅವರೇ ಏನಾದರೂ ಬಂದರೆ ಸೌಜನ್ಯಕ್ಕೆ ಮಾತನಾಡುತ್ತೇನೆಯೇ ಹೊರತು ರಾಜಕೀಯವನ್ನೆಂದೂ ಮಾತಾಡುವುದಿಲ್ಲ ಎಂದು ಸಿದ್ದರಾಮಯ್ಯ ಇದೇ ವೇಳೆ ಸ್ಪಷ್ಟಪಡಿಸಿದರು.

ರಾಜ್ಯಪಾಲರಿಗೆ ದೂರು

ಸರ್ಕಾರಿ ಅಧಿಕಾರಿಗಳೊಂದಿಗೆ ಖಾಸಗಿ ಹೋಟೆಲ್‌ನಲ್ಲಿ ಸುರ್ಜೇವಾಲ ನಡೆಸಿದ ಸಭೆ ಕಾನೂನಿನ ಉಲ್ಲಂಘನೆ ಪಕ್ಷದ ಪದಾಧಿಕಾರಿಯಾದವರು ಈ ರೀತಿ ಸಭೆ ನಡೆಸುವಂತಿಲ್ಲ. ಕಾಂಗ್ರೆಸ್ಸಿನ ಈ ನಡೆ ಖಂಡಿಸಿ ರಾಜ್ಯಪಾಲರಿಗೆ ಈ ಸಂಬಂಧ ದೂರು ದಾಖಲಿಸುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...