ಮುಗಿಯದ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಪ್ರಹಸನ | ಜೆಡಿಎಸ್‌ ಮಾತೇ ಬೇರೆ, ನಡೆಯೇ ಬೇರೆ!

Date:

‌ರಾಜಕೀಯದಲ್ಲಿ ಜೆಡಿಎಸ್‌ ನಡೆ ಯಾವ ಕ್ಷಣದಲ್ಲಿ ಹೇಗೆ ಬದಲಾಗುತ್ತದೆ ಎಂಬುದೇ ವಿಚಿತ್ರ. ಜನರು, ಪ್ರತಿಪಕ್ಷಗಳ ನಾಯಕರು ಜೆಡಿಎಸ್‌ ಅನ್ನು ‘ಊಸರವಳ್ಳಿ ಪಕ್ಷ’ ಎಂದು ಟೀಕಿಸುವುದಕ್ಕೂ, ಜೆಡಿಎಸ್‌ ನಡೆದುಕೊಳ್ಳುವುದಕ್ಕೂ ಸರಿ ಇದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಖಂಡಿಸಿ, ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ರಾಜ್ಯಾದ್ಯಕ್ಷ ಬಿ ವೈ ವಿಜಯೇಂದ್ರ ಘೋಷಿರುವ ಮೈಸೂರು ಪಾದಯಾತ್ರೆಗೆ ಜೆಡಿಎಸ್‌ ಬೆಂಬಲ ಇಲ್ಲ ಎಂದು ಕಡ್ಡಿಮುರಿದಂತೆ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಮಾಧ್ಯಮಗಳ ಮಂದೆ ಬಂದು ಸ್ಪಷ್ಟಪಡಿಸಿದ್ದರು.

ಶುಕ್ರವಾರ ಯೂ ಟರ್ನ್‌ ಹೊಡೆದಿರುವ ಜೆಡಿಎಸ್‌, ತನ್ನ ಅಧಿಕೃತ ಎಕ್ಸ್‌ ತಾಣದಲ್ಲಿ ಬಿಜೆಪಿ ಪಾದಯಾತ್ರೆಗೆ ಬೆಂಬಲ ಸೂಚಿಸಿ ಪೋಸ್ಟ್‌ ಮಾಡಿದೆ. ಆದರೆ, ಪಾದಯಾತ್ರೆ ವಿರೋಧಿಸಿದ ಕುಮಾರಸ್ವಾಮಿಯಾಗಲಿ ಅಥವಾ ಜೆಡಿಎಸ್‌ ಪ್ರಮುಖ ನಾಯಕರಾಗಲಿ ಯಾರೂ ಕೂಡ ಈವರೆಗೂ ಬಿಜೆಪಿ ಪಾದಯಾತ್ರೆಗೆ ತಮ್ಮ ಪಕ್ಷದ ಬೆಂಬಲ ಇದೆ ಎಂದು ಎಲ್ಲೂ ಘೋಷಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಪಾದಯಾತ್ರೆಗೆ ಬೆಂಬಲ ಸೂಚಿಸಿ ಜೆಡಿಎಸ್‌ ಮಾಡಿರುವ ಪೋಸ್ಟ್‌ ಕುಮಾರಸ್ವಾಮಿ ಗಮನಕ್ಕೆ ಬಾರದೇ ಪ್ರಕಟಗೊಂಡಿದೆಯಾ? ಇದಕ್ಕೆ ಪಕ್ಷದ ನಾಯಕರೇ ಉತ್ತರಿಸಬೇಕಿದೆ. ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸುದ್ದಿಗೋಷ್ಠಿ ನಡೆಸಿ,”ಮೈಸೂರು ಪಾದಯಾತ್ರೆಗೆ ಬಿ ಎಸ್‌ ಯಡಿಯೂರಪ್ಪ ಮತ್ತು ಎಚ್‌ ಡಿ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ. ಕೆಂಗೇರಿಯಿಂದ ಪಾದಯಾತ್ರೆ ಹೊರಡಲಿದೆ” ಎಂದು ಸ್ಪಷ್ಟಪಡಿಸುತ್ತಾರೆ. ಜೆಡಿಎಸ್‌-ಬಿಜೆಪಿ ನಾಯಕರು ಒಂದೇ ವೇದಿಕೆಗೆ ಬಂದು ನಾವು ಒಗ್ಗಟ್ಟಿನಿಂದ ಪಾದಯಾತ್ರೆ ಮಾಡುತ್ತೇವೆ ಎಂದು ಎಲ್ಲೂ ಹೇಳಿಕೊಂಡಿಲ್ಲ.

ಜೆಡಿಎಸ್‌ ಏನು ಪೋಸ್ಟ್‌ ಮಾಡಿದೆ?

“ಸಾಲು ಸಾಲು ಹಗರಣಗಳ ಮೂಲಕ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಭ್ರಷ್ಟ ಮುಖ್ಯಮಂತ್ರಿ ‌ ಸಿದ್ದರಾಮಯ್ಯ ಮುಡಾದಲ್ಲಿ ಅಕ್ರಮವಾಗಿ ಸೈಟುಗಳನ್ನು ಪಡೆದು, ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ್ದಾರೆ. ವಾಲ್ಮೀಕಿ ನಿಗಮ ಸೇರಿದಂತೆ ಸರ್ಕಾರದ ಎಲ್ಲ ಇಲಾಖೆಗಳಲ್ಲೂ ಹಣ ನುಂಗಿದ್ದಾರೆ. ಈ ಕಡು ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಜನ ಜಾಗೃತಿ ಮೂಡಿಸಲು ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷಗಳು ಜೊತೆಗೂಡಿ ಬೃಹತ್ ಪಾದಯಾತ್ರೆ ನಡೆಸುತ್ತಿವೆ. ಬೆಂಗಳೂರಿ ನಿಂದ ಮೈಸೂರಿನವರೆಗೂ ನಡೆಯುವ “ಮೈಸೂರು ಚಲೋ” ಪಾದಯಾತ್ರೆಯಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಿ, ಕರ್ನಾಟಕವನ್ನು ಉಳಿಸಿ” ಎಂದು ಜೆಡಿಎಸ್‌ ಕರೆ ನೀಡಿದೆ.

1 2

ಬಿಜೆಪಿ ನಾಯಕರು ಎಚ್‌ಡಿಕೆ ಮನವೊಲಿಸಿದರೇ?

ಕುಮಾರಸ್ವಾಮಿ ಯಾವಾಗ ಪಾದಯಾತ್ರೆಗೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದರೋ ಎದ್ನೋ ಬಿದ್ನೋ ಎಂದು ಬಿಜೆಪಿ ವರಿಷ್ಠರ ಸೂಚನೆ ಮೇರೆಗೆ ಸಂಸತ್ ಭವನದ ಎಚ್‌ ಡಿ ಕುಮಾರಸ್ವಾಮಿ ಕಚೇರಿಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ರಾಧಮೋಹನ್ ದಾಸ್, ಬಿ ವೈ ವಿಜಯೇಂದ್ರ ದಾವಿಸಿ ಪಾದಯಾತ್ರೆ ಬಗ್ಗೆ ತರಾತುರಿಯಲ್ಲಿ ಚರ್ಚೆ ನಡೆಸಿದರು.

ಆ ಚರ್ಚೆಯಲ್ಲಿ ಕುಮಾರಸ್ವಾಮಿ ಪಾದಯಾತ್ರೆಗೆ ಒಪ್ಪಿದರಾ ಎಂಬುದು ಕೂಡ ಗೊತ್ತಾಗಲಿಲ್ಲ. ಸಭೆ ಬಳಿಕ ಪ್ರಲ್ಹಾದ್‌ ಜೋಶಿ ಸುದ್ದಿಗಾರರ ಜೊತೆ ಮಾತನಾಡುತ್ತ, “ನಾವು ಪಾದಯಾತ್ರೆಗೆ ಯಾರನ್ನೂ ಆಹ್ವಾನಿಸುವುದಿಲ್ಲ. ಭ್ರಷ್ಟಾಚಾರ ವಿರೋಧಿಸಿ ಭಾಗಿಯಾಗುವವರು ಬರಬಹುದು” ಎಂದು ಹೇಳಿಕೆ ನೀಡಿದರು. ಜೋಶಿ ಮಾತಿನ ಅರ್ಥ ಎಂತಹ ಸಣ್ಣ ಮಕ್ಕಳಿಗಾದ್ರೂ ಅರ್ಥವಾಗುತ್ತೆ, ಕುಮಾರಸ್ವಾಮಿ ಪಾದಯಾತ್ರೆಗೆ ಒಪ್ಪಿಲ್ಲ ಅಥವಾ ಷರತ್ತು ವಿಧಿಸಿ ಕಳುಹಿಸಿರಬಹುದು ಎಂದು.

ಕುಮಾರಸ್ವಾಮಿ ಮೊದಲು ಹೇಳಿದ್ದೇನು?

“ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟ ಪ್ರೀತಂಗೌಡನ ಜೊತೆ ನಾವು ವೇದಿಕೆ ಹಂಚಿಕೊಳ್ಳಲು ಸಾಧ್ಯವೇ ಇಲ್ಲ. ದೇವೇಗೌಡರ ಕುಟುಂಬವನ್ನು ನಾಶ ಮಾಡಲು ಹೊರಟ ಪ್ರೀತಂಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು, ನಮ್ಮನ್ನು ಪಾದಯಾತ್ರೆಗೆ ಕರೆಯುತ್ತೀರಾ? ಹಾಸನದಲ್ಲಿ ಪೆನ್ ಡ್ರೈವ್ ಗಳನ್ನು ಹಂಚಿವರು ಯಾರು ಎಂದು ಗೊತ್ತಿಲ್ಲವೇ? ಚುನಾವಣಾ ಮೈತ್ರಿಯೇ ಬೇರೆ. ರಾಜಕೀಯವೇ ಬೇರೆ” ಎಂದು ಕುಮಾರಸ್ವಾಮಿ ಕಿಡಿಕಾರಿದ್ದರು.

“ಪಾದಯಾತ್ರೆಯಲ್ಲಿ ಭಾಗಿಯಾಗಬಾರದು ಎಂದು ಜೆ‌ ಟಿ ದೇವೇಗೌಡರ ಅಧ್ಯಕ್ಷತೆಯ ಕೋರ್ ಕಮಿಟಿ ಬೆಂಗಳೂರಿನಲ್ಲಿ ಮಂಗಳವಾರ ತೀರ್ಮಾನ ಮಾಡಿದೆ. ಬಿಜೆಪಿ ನಾಯಕರು ಪಾದಯಾತ್ರೆ ಮಾಡಬೇಕು ಎಂದು ನಿರ್ಧಾರ ಕೈಗೊಂಡು ಸಿದ್ಧತೆ ಮಾಡುತ್ತಿದ್ದಾರೆ. ಆದರೆ, ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ ನಾವು ಪಾದಯಾತ್ರೆಯಿಂದ ಹಿಂದೆ ಸರಿದಿದ್ದೇವೆ” ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದರು.

ಪಾದಯಾತ್ರೆ ಸುತ್ತ ಬೆಳವಣಿಗೆಗಳನ್ನು ಗಮನಿಸಿದಾಗ “ಎತ್ತು ಏರಿಗೆ ಎಳೀತು, ಕೋಣ ಕೆರೆಗೆ ಇಳೀತು” ಎನ್ನುವಂತಾಗಿದೆ ಬಿಜೆಪಿ-ಜೆಡಿಎಸ್‌ ನಾಯಕರ ನಡೆ. ಮೈತ್ರಿಯಲ್ಲಿ ಒಗ್ಗಟ್ಟಿಲ್ಲ ಎಂಬುದು ಎದ್ದು ಕಾಣುತ್ತಿದೆ. ರಾಜಕೀಯದಲ್ಲಿ ಜೆಡಿಎಸ್‌ ಆಡುವುದೇ ಬೇರೆ, ನಡೆದುಕೊಳ್ಳುವುದೇ ಬೇರೆ ಎಂಬ ಆರೋಪ ಹೀಗೆ ಮುಂದುವರಿಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...