ಗದಗ | ರಾಜಕಾರಣದಲ್ಲಿ ಮೂಲ ಅಸ್ಪೃಷ್ಯರು ತುಳಿತಕ್ಕೆ ಒಳಗಾಗಿದ್ದಾರೆ: ರಾಮಣ್ಣ ಗಡದ

Date:

  • ‘ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಿದ್ದು ಸ್ವಾಗತಾರ್ಹ’
  • ‘ಸದಾಶಿವ ಆಯೋಗದ ವರದಿ ಜಾರಿ ಹೋರಾಟಕ್ಕೆ ಶ್ರಮಿಸಿದವರಿಗೆ ಅಭಿನಂದನೆ’

ಶತ-ಶತಮಾನಗಳಿಂದ ಅಸ್ಪ್ರಶ್ಯತೆಯಲ್ಲಿ ಬೆಂದ ಅತ್ಯಂತ ಶೋಷಿತ ಸಮುದಾಯಗಳಾದ ಮಾದಿಗ, ಛಲವಾದಿ, ಸಮಗಾರ, ಡೋಹರ ಮತ್ತು ಮೋಚಿಗಾರ ಸಮುದಾಯಗಳಿಗೆ ನ್ಯಾಯಯುತವಾಗಿ ಸಿಗಬೇಕಾದ ಮೀಸಲಾತಿ ಸೌಲಭ್ಯಗಳು ಸಿಗದೇ ವಂಚಿತರನ್ನಾಗಿ ಮಾಡಲಾಗಿದೆ ಎಂದು ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ರಾಮಣ್ಣ ಗಡದ ಕಿಡಿಕಾರಿದ್ದಾರೆ.

ಗದಗ ಜಿಲ್ಲೆ ಲಕ್ಷೇಶ್ವರ ನಗರದ ಪ್ರವಾಸಿ ಮಂದಿರಲ್ಲಿ ಸೋಮವಾರ ದಲಿತ ಮುಖಂಡರು ಪತ್ರಿಕಾಗೋಷ್ಠಿ ನಡೆಸಿದರು. ಈ ವೇಳೆ ರಾಮಣ್ಣ ಗಡದ ಮಾತನಾಡಿ, “ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಪಾರಸ್ಸು ಮಾಡಬೇಕೆಂದು ಹಲವು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿತ್ತು. ಹೋರಾಟವನ್ನು ಪರಿಗಣಿಸಿ ಬಿಜೆಪಿ ಆಡಳಿತ ಸರ್ಕಾರ ಕೊನೆಗೂ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿಯನ್ನು ಕೇಂದ್ರಕ್ಕೆ ಸಲ್ಲಿಸಿರುವುದು ಸ್ವಾಗತಾರ್ಹ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಕೀಲ ಮೈಲಾರಪ್ಪ ಡಿ ಎಚ್ ಮಾತನಾಡಿ, “ಮೂಲ ಪರಿಶಿಷ್ಟ ಸಮುದಾಯದ ಬಹುದಿನಗಳ ಬೇಡಿಕೆಯಾದ ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವುದರಿಂದ ಮಾದಿಗ, ಹೊಲೆಯ, ಸಮಗಾರ, ಡೋಹರ ಮತ್ತು ಮೋಚಗಾರ ಪಂಚಮ ಸಮುದಾಯ ಹೆಮ್ಮೆಪಡುವ ಸಂಗತಿಯಾಗಿದೆ” ಎಂದು ಹರ್ಷ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? : ಪ್ರಸ್ತುತ ವಿಧಾನಸಭಾ ಚುನಾವಣೆ ಜನತೆಯ ಪಾಲಿಗೆ ಮಹತ್ವದ್ದಾಗಿದೆ: ಸಮಾನ ಮನಸ್ಕರ ಒಕ್ಕೂಟ

“ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿಯನ್ನು ಅನುಮೋದನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶ್ರಮವಹಿಸಿದ ಸಚಿವರು, ಸಮುದಾಯದ ಹಿರಿಯರು, ಚಿತ್ರದುರ್ಗದ ಮಾದರ ಚೆನ್ನಯ್ಯ ಸ್ವಾಮೀಜಿ ಮತ್ತು 30 ವರ್ಷಗಳ ಕಾಲ ಎಲ್ಲ ರೀತಿಯ ಹೋರಾಟ, ಪಾದಯಾತ್ರೆ, ಬೈಕ್ ರ್ಯಾಲಿ ಹೀಗೆ ಹಲವಾರು ರೀತಿಯಲ್ಲಿ ಹೋರಾಟ ಮಾಡಿದ ಹಿರಿಯ ಮತ್ತು ಯುವ ಹೋರಾಟಗರಾರಿಗೆ ಸಮುದಾಯದ ಪರವಾಗಿ ಧನ್ಯವಾದಗಳು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಯುವ ನಾಯಕ ಗಾಳೆಪ್ಪ ಹರಿಜನ ಮತ್ತು ಮಂಜುನಾಥ ದೊಡ್ಡಮನಿ ಸೇರಿದಂತೆ ಹಲವರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...