ಹೀಗೆ ಬಂದು ಹಾಗೇ ಹೋಗುವವರು ಪಕ್ಷಕ್ಕೆ ಬೇಡ, ಅರ್ಹರನ್ನು ಮಾತ್ರ ಸೇರಿಸಿಕೊಳ್ಳಿ: ಮಲ್ಲಿಕಾರ್ಜುನ ಖರ್ಗೆ

Date:

ಒಂದು ವಸ್ತು ಕೊಳ್ಳಬೇಕಾದರೆ ಹತ್ತಾರು ಸಲ ಯೋಚಿಸಿ ತೆಗೆದುಕೊಳ್ಳುತ್ತೇವೆ. ಹಾಗೆ ಪಕ್ಷಕ್ಕೆ ಯಾರನ್ನಾದರೂ ತೆಗೆದುಕೊಳ್ಳಬೇಕಾದರೆ ಅವರ ಗುಣ, ಹಿನ್ನೆಲೆ, ಅವರ ತತ್ವ ಯಾವುದು ಎಂಬುದನ್ನು ಪರಿಶೀಲಿಸಿ. ಅರ್ಹರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

75ನೇ ಗಣರಾಜ್ಯೋತ್ಸವದ ಅಂಗವಾಗಿ ಕೆಪಿಸಿಸಿ ಕಚೇರಿ ಆವರಣದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದ ನಂತರ ಮಾತಾಡಿದ ಖರ್ಗೆ ಅವರು ಪರೋಕ್ಷವಾಗಿ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

“ಕಾಂಗ್ರೆಸಿನೊಳಗೆ ಯಾರೇ ಬಂದರೂ ಸೇರಿಸಿಕೊಂಡು ಶಕ್ತಿಯನ್ನು ತುಂಬುವಂತಹ ಕೆಲಸ ಮಾಡಬೇಕು. ಹಾಗೆ ಪಕ್ಷಕ್ಕೆ ಬರುವವರು ನಿಷ್ಠಾವಂತರಾಗಿರಬೇಕು. ಇವತ್ತು ಬಂದು ನಾಳೆ ಹೋಗುವಂತೆ ಇರಬಾರದು” ಎಂದು ಕಿವಿಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಕಾಂಗ್ರೆಸ್‌ ಪಕ್ಷವು ತತ್ವ ಸಿದ್ಧಾಂತದ ಆಧಾರದ ಮೇಲೆ ನಿಂತಿದೆ. ತತ್ವಕ್ಕಾಗಿಯೇ ನಮ್ಮ ಪಕ್ಷದಲ್ಲಿ ಇಂದಿರಾಗಾಂಧಿಯವರು, ರಾಜೀವ್‌ ಗಾಂಧಿಯವರು ತಮ್ಮ ಜೀವವನ್ನೆ ತ್ಯಾಗ ಮಾಡಿದ್ದಾರೆ. ನಮ್ಮ ಪಕ್ಷ ತತ್ವಕ್ಕೆ ಬದ್ಧವಾಗಿದೆ, ನಮ್ಮದು ಬಡವರ ಬಗ್ಗೆ, ರೈತರ ಬಗ್ಗೆ, ವಿಧ್ಯಾರ್ಥಿಗಳ ಬಗ್ಗೆ ಮತ್ತು ಮಹಿಳೆಯರ ಬಗ್ಗೆ ಅಪಾರ ಕಾಳಜಿ ಇರುವ ಪಕ್ಷ” ಎಂದರು.

ಈ ಸುದ್ದಿ ಓದಿದ್ದೀರಾ? ಅಲ್ಪಸಂಖ್ಯಾತ ಸಮುದಾಯ ಶೆಟ್ಟರ್‌​ರನ್ನು ಒಪ್ಪಿರಲಿಲ್ಲ, ಹೋಗಿದ್ದು ಒಳ್ಳೆಯದಾಯಿತು: ಡಿಕೆ ಶಿವಕುಮಾರ್‌

“ಇಂದಿನ ಪರಿಸ್ಥಿತಿಯಲ್ಲಿ ನಮ್ಮ ಸಂವಿಧಾನಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ಎರಡಕ್ಕೂ ಧಕ್ಕೆ ಇದೆ. ಇದರಿಂದ ನಮ್ಮ ಯುವಪೀಳಿಗೆಗೆ ಇನ್ನೂ ಹೆಚ್ಚಿನ ಅಪಾಯ ಇದೆ. ದಿನೇ ದಿನೇ ಹಣದುಬ್ಬರ, ನಿರುದ್ಯೋಗ ಸಮಸ್ಯೆ ಏರುತ್ತಿದೆ. ಈ ಅನಾಹುತವನ್ನು ತಡೆಯಬೇಕು ಎಂದರೆ ಬರುವ ಲೋಕಸಭಾ ಚುನಾವಣೆಯಲ್ಲಿ ನೀವೆಲ್ಲರೂ ಕಾಂಗ್ರೆಸ್‌ಗೆ ಶಕ್ತಿ ತುಂಬಬೇಕು” ಎಂದು ಕರೆ ನೀಡಿದರು.

“ಭಾರತದ ಇತಿಹಾಸದಲ್ಲಿ ಜನವರಿ 26 ವಿಶೇಷವಾದ ದಿನ. ಈ ದೇಶದಲ್ಲಿ ಸಂವಿಧಾನ ಅಸ್ತಿತ್ವದಲ್ಲಿ ಇರದಿದ್ದರೆ ನಾವು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಆಗುತ್ತಿರಲಿಲ್ಲ. ಭಾರತದ ಸ್ವಾತಂತ್ರ್ಯಕ್ಕೆ ಹೋರಾಡಿದ ಮತ್ತು ಸಂವಿಧಾನ ಸಭೆಯ ನಾಯಕರು ಸೇರಿ ನಮ್ಮ ಸಂವಿಧಾನ ರಚಿಸಿದರು. ನಮ್ಮ ಸಂವಿಧಾನವು ಪ್ರಮುಖವಾಗಿ ಸಮಾನತೆ, ಭಾತೃತ್ವ, ಜಾತ್ಯತೀತತೆ, ನ್ಯಾಯ ತತ್ವಗಳಿಂದ ಕೂಡಿದೆ” ಎಂದರು.

“ಸಂವಿಧಾನ ತಿರುಚಬೇಕೆಂದು, ಸಂವಿಧಾನ ಬದಲಿಸಬೇಕೆಂದು ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಪ್ರಯತ್ನ ಮಾಡುತ್ತಿವೆ. ನಮ್ಮ ಸ್ವಾಯತ್ತ ಸಂಸ್ಥೆಗಳನ್ನು ಒಂದೊಂದಾಗಿ ನಾಶಮಾಡುತ್ತಾ ಅದರ ಶಕ್ತಿಯನ್ನು ಕಡಿಮೆ ಮಾಡಲು ಬಿಜೆಪಿಯವರು ಸರ್ವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಆರ್‌ಎಸ್‌ಎಸ್‌ನ ಕೈಗೊಂಬೆಯಾಗಿ ನಡೆದುಕೊಳ್ಳುತ್ತಿದ್ದು, ಅದರಿಂದ ನಮ್ಮ ದೇಶದ ನ್ಯಾಯಾಂಗಕ್ಕೆ, ಜಾತ್ಯತೀತತೆಗೆ ಪೆಟ್ಟು ಬೀಳುತ್ತಿದೆ” ಎಂದು ಆರೋಪಿಸಿದರು.

“ಪ್ರಧಾನಮಂತ್ರಿ ಮತ್ತು ಕೇಂದ್ರ ಗೃಹ ಮಂತ್ರಿಯವರು ನಮಗೆ ಸಿಕ್ಕಿರುವ ಸ್ವಾತಂತ್ರ್ಯವನ್ನು ತಮ್ಮ ಕಪಿಮುಷ್ಠಿಯಲ್ಲಿ ಹಿಡಿದಿಟ್ಟುಕೊಳ್ಳುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಮತ್ತು ಸಂವಿಧಾನ ಉಳಿದರೆ ಮಾತ್ರ ನಮ್ಮ ಮುಂದಿನ ಪೀಳಿಗೆ ಉಳಿಯುತ್ತದೆ. ಇಲ್ಲವಾದರೆ ಮುಂದಿನ ಪೀಳಿಗೆ ಎಲ್ಲದರಲ್ಲೂ ಅವಕಾಶ ವಂಚಿತರಾಗುತ್ತಾರೆ” ಎಂದರು.

“ಸ್ವಾತಂತ್ರ್ಯ ಬಂದಾಗಿನಿಂದ 2014ರ ವರೆಗೆ ಈ ದೇಶದ ಸಾಲ 55 ಲಕ್ಷ ಕೋಟಿ ಇತ್ತು, ಆದರೆ ಈಗ ಬಿಜೆಪಿ ಸರ್ಕಾರ 10 ವರ್ಷಗಳಲ್ಲಿ 150 ಲಕ್ಷ ಕೋಟಿ ಸಾಲ ಮಾಡಿದೆ” ಎಂದು ಕಿಡಿಕಾರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...