ʼಈ ದಿನʼ ಸಮೀಕ್ಷೆ | ಬೆಲೆ ಏರಿಕೆಯ ’ಉರಿತಾಪ’ಕ್ಕೆ ಬಿಜೆಪಿಯೇ ಕಾರಣ ಅಂತಾರೆ ಉ.ಕರ್ನಾಟಕದ ಜನ

Date:

ರಾಜ್ಯದಲ್ಲಿ ಮೇ 7 ರಂದು ನಡೆಯುವ ಎರಡನೇ ಹಂತದ ಲೋಕಸಭಾ ಚುನಾವಣೆಯು ಉರಿಬಿಸಿಲಿನಲ್ಲಿ ರಂಗೇರಿದೆ. ರಾಷ್ಟ್ರ ರಾಜಕಾರಣದ ಘಟಾನುಘಟಿ ನಾಯಕರು ಉತ್ತರ ಕರ್ನಾಟಕದ ಹದಿನಾಲ್ಕು ಕ್ಷೇತ್ರಗಳಲ್ಲಿ ಭರ್ಜರಿ ಮತಬೇಟೆಗೆ ಕಸರತ್ತು ನಡೆಸುತ್ತಿದ್ದಾರೆ.

ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿವೆ. ಈ ಕ್ಷೇತ್ರಗಳ ಮತದಾರರ ಒಲವು ನಿಲುವುಗಳು ಕೂಡ ಗಮನ ಸೆಳೆಯುತ್ತಿವೆ.

ಮತದಾರರು ಯಾವ ಅಂಶಗಳ ಮೇಲೆ ಮತ ಹಾಕುತ್ತಾರೆಂಬ ಕುತೂಹಲವಂತೂ ಇದ್ದೇ ಇದೆ. ಆದರೆ ಈ ಸಲದ ಚುನಾವಣೆಯಲ್ಲಿ ’ಬೆಲೆ ಏರಿಕೆ’ಯನ್ನು ಆಧರಿಸಿ ಮತ ಚಲಾಯಿಸುವ ಸೂಚನೆಗಳು ಸದರಿ ಹದಿನಾಲ್ಕು ಕ್ಷೇತ್ರಗಳಲ್ಲೂ ಕಾಣುತ್ತಿರುವುದರಿಂದ ಬಿಜೆಪಿ ಕೊಚ್ಚಿ ಹೋಗುವ ಸಾಧ್ಯತೆಗಳು ಸ್ಪಷ್ಟವಾಗಿ ಕಾಣುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಈದಿನ.ಕಾಂ’ ನಡೆಸಿದ ಸಮೀಕ್ಷೆಯ ವೇಳೆ, “ಕಳೆದ ಹತ್ತು ವರ್ಷಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ನೀವು ಭಾವಿಸುತ್ತೀರಾ?” ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಅದಕ್ಕೆ ಪ್ರತಿಕ್ರಿಯಿಸಿರುವವರಲ್ಲಿ ಶೇ. 84.85ರಷ್ಟು ಜನರು ಬೆಲೆ ಏರಿಕೆಯಾಗಿದೆ ಎಂದಿದ್ದಾರೆ. ಶೇ. 9ರಷ್ಟು ಜನರು ಇಲ್ಲ ಅಂದರೆ, ಶೇ. 5.96ರಷ್ಟು ಜನರು ಪ್ರತಿಕ್ರಿಯಿಸಲು ಹಿಂದೇಟು ಹಾಕಿದ್ದಾರೆ.

2 12

“ಬೆಲೆ ಏರಿಕೆಗೆ ಯಾರು ಕಾರಣವೆಂದು ಭಾವಿಸುತ್ತೀರಿ?” ಎಂಬ ಮಹತ್ವದ ಪ್ರಶ್ನೆಯನ್ನೂ ಕೇಳಲಾಗಿತ್ತು. ಶೇ. 44.50ರಷ್ಟು ಜನರು ಬಿಜೆಪಿ ಕಾರಣವೆಂದೂ, ಶೇ. 22.91ರಷ್ಟು ಜನರು ಕಾಂಗ್ರೆಸ್‌ ಪಕ್ಷ ಕಾರಣವೆಂದೂ, ಕಾಂಗ್ರೆಸ್‌- ಬಿಜೆಪಿ ಎರಡೂ ಪಕ್ಷಗಳು ಕಾರಣವೆಂದು ಶೇ. 19.56 ಜನ ಪ್ರತಿಕ್ರಿಯಿಸಿದ್ದಾರೆ. ಶೇ 10.13ರಷ್ಟು ಜನರು ’ಗೊತ್ತಿಲ್ಲ, ನಾನು ಹೇಳಲ್ಲ’, ಎಂದರೆ ಶೇ. 1.98 ಜನರು ಯಾರೂ ಕಾರಣರಲ್ಲ ಎಂಬ ಅಭಿಪ್ರಾಯಕ್ಕೆ ಬಂದಿದ್ದಾರೆ. ಶೇ. 0.9ರಷ್ಟು ಜನರು ಮಾತ್ರ ಜೆಡಿಎಸ್‌ ಕಾರಣವೆಂದು ಹೇಳಿದ್ದಾರೆ.

1 15

ಬಿಜೆಪಿ ಮಾತ್ರ ಬೆಲೆ ಏರಿಕೆಗೆ ಕಾರಣ ಮತ್ತು ಬಿಜೆಪಿ- ಕಾಂಗ್ರೆಸ್ ಎರಡೂ ಕಾರಣ ಎಂದು ಹೇಳುವ ಮತದಾರರ ಪ್ರಮಾಣ ಒಟ್ಟು 64.06ರಷ್ಟಿದೆ. ಅಂದರೆ ಬಿಜೆಪಿ ವಿರುದ್ಧ ದೊಡ್ಡ ಮಟ್ಟದ ಆಕ್ರೋಶ ಇದೆ ಎಂಬುದು ಇಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ.

ರಾಷ್ಟ್ರ ಮಟ್ಟದಲ್ಲಿ ನಡೆದಿರುವ ಸಮೀಕ್ಷೆಗಳು ಕೂಡ ಬೆಲೆ ಏರಿಕೆಯನ್ನು ಎತ್ತಿ ಹಿಡಿದಿವೆ. ಸರ್ವೆಗಳಿಗೆ ಹೆಸರಾದ ‘ಸಿಎಸ್‌ಡಿಎಸ್‌ ಲೋಕನೀತಿ’ ನಡೆಸಿದ್ದ ಸಮೀಕ್ಷೆಯಲ್ಲಿ, “ಕಳೆದ ಐದು ವರ್ಷಗಳಲ್ಲಿ ಬೆಲೆ ಏರಿಕೆ ಆಗಿದೆಯೇ?” ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಶೇ.71ರಷ್ಟು ಮಂದಿ ಹೌದು ಎಂದರೆ, ಶೇ. 13ರಷ್ಟು ಜನರು ಇಲ್ಲ ಎಂದಿದ್ದರು. ಶೇ. 13ರಷ್ಟು ಜನ ಯಥಾಸ್ಥಿತಿ ಇರುವುದಾಗಿ ಹೇಳಿದ್ದರು. ಬೆಲೆ ಏರಿಕೆ ಆಗಿದೆ ಎಂದವರಲ್ಲಿ ಶೇ. 76ರಷ್ಟು ಬಡವರು, ಶೇ.70ರಷ್ಟು ಅತಿ ಬಡವರು, ಶೇ.66 ಮಧ್ಯಮ ವರ್ಗ, ಶೇ. 68ರಷ್ಟು ಮೇಲ್ವರ್ಗದ ಜನರು ಇದ್ದಾರೆ. ಶೇ. 72ರಷ್ಟು ಗ್ರಾಮೀಣರು, ಶೇ. 69ರಷ್ಟು ಪಟ್ಟಣವಾಸಿಗಳು, ಶೇ. 33ರಷ್ಟು ನಗರ ವಾಸಿಗಳು ಬೆಲೆ ಏರಿಕೆಯಾಗಿದೆ ಎಂದಿರುವುದು ಗಮನಾರ್ಹ.

ವಿಶ್ವಾಸಾರ್ಹ ಸಮೀಕ್ಷೆಗಳು ಹೇಳುತ್ತಿರುವ ಸತ್ಯಗಳು ’ಬಿಜೆಪಿ’ಗೆ ಅಹಿತಕರವಾಗಿವೆ. ಬೆಲೆ ಏರಿಕೆಯ ನಡುವೆ ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿಗಳನ್ನು ಚುನಾವಣಾ ಅಸ್ತ್ರವಾಗಿ ಬಳಸುತ್ತಿರುವುದರಿಂದ ಬಯಲು ಸೀಮೆ ಉತ್ತರ ಕರ್ನಾಟಕದಲ್ಲಿ ಭಾರೀ ಪರಿಣಾಮ ಬೀರುವ ಸೂಚನೆ ಕಾಣುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...