ನಿಗದಿತ ಸಮಯಕ್ಕೆ ಸದನಕ್ಕೆ ಬಂದವರಿಗೆ ಬಹುಮಾನ ಘೋಷಿಸಿದ ಸ್ಪೀಕರ್‌ ಯು ಟಿ ಖಾದರ್‌

Date:

  • ಜುಲೈ 21ರವರೆಗೆ ವಿಧಾನಮಂಡಲ ಅಧಿವೇಶನ ನಡೆಸಲು ನಿರ್ಧಾರ
  • ಬಹುಮಾನದ ಬದಲು ಪ್ರಮಾಣ ಪತ್ರ ನೀಡಿ ಎಂದು ಶಾಸಕರ ಮನವಿ

ನಿಗದಿತ ಸಮಯಕ್ಕೆ ಸದನಕ್ಕೆ ಬಂದವರಿಗೆ ಬಹುಮಾನ ಘೋಷಣೆ ಮಾಡಲಾಗುವುದು ಎಂದು ಶಾಸಕರಿಗೆ ಸ್ಪೀಕರ್ ಯು ಟಿ ಖಾದರ್ ಘೋಷಣೆ ಮಾಡಿದ್ದಾರೆ.

ಮಂಗಳವಾರ ಸದನಕ್ಕೆ ನಿಗದಿತ ಸಮಯದಲ್ಲಿ ಆಗಮಿಸಿದ ಶಾಸಕರ ಹೆಸರು ಓದಿದ ಸ್ಪೀಕರ್ ಶಾಸಕರ ಬಗ್ಗೆ ಮೆಚ್ಚುಗೆ ಸೂಚಿಸಿದರು. ನಿಗದಿತ ಸಮಯಕ್ಕೆ ಸದನಕ್ಕೆ ಆಗಮಿಸಿದ್ದ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಕೌಜಲಗಿ ಮಹಾಂತೇಶ್, ಎಸ್ ಸುರೇಶ್ ಕುಮಾರ್, ಪ್ರದೀಪ್ ಈಶ್ವರ್, ಎಸ್ ಆರ್ ಶ್ರೀನಿವಾಸ್, ಲತಾ ಮಲ್ಲಿಕಾರ್ಜುನ, ಶಿವಲಿಂಗೇಗೌಡ ಸೇರಿದಂತೆ ಇತರ ಶಾಸಕರ ಹೆಸರು ಸ್ಪೀಕರ್ ಖಾದರ್ ಓದಿದರು.

ನಿಗದಿತ ಸಮಯಕ್ಕೆ ಸದನಕ್ಕೆ ಆಗಮಿಸಿದ ಶಾಸಕರಿಗೆ ಬಹುಮಾನ ಕೊಟ್ಟರೆ ತಪ್ಪು ಸಂದೇಶ ಹೋಗುತ್ತದೆ ಎಂದು ಸ್ಪೀಕರ್ ಖಾದರ್ ಅವರಿಗೆ ಶಾಸಕರೊಬ್ಬರು ಸಲಹೆ ಕೊಟ್ಟರು. ಬಹುಮಾನ ಘೋಷಣೆ ಬದಲಾಗಿ ಸರ್ಟಿಫಿಕೇಟ್ ಕೊಡಲು ಮನವಿ ಮಾಡಿದರು. ಬಹುಮಾನ ಎಂದರೆ ತಪ್ಪು ಸಂದೇಶ ಹೋಗುತ್ತದೆ. ಬದಲಾಗಿ ಪ್ರಮಾಣ ಪತ್ರ ನೀಡಿ ಎಂದು ಮನವಿ ಮಾಡಿದರು. ಶಾಸಕರ ಅಭಿಪ್ರಾಯಕ್ಕೆ ಸ್ಪೀಕರ್ ಸಮ್ಮತಿ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಸದನಕ್ಕೆ ನಿನ್ನೆ ಸರಿಯಾದ ಸಮಯಕ್ಕೆ ಬಂದಿದ್ದೇನೆ. ಆದರೆ, ನನ್ನ ಹೆಸರು ಇಲ್ಲ” ಎಂದು ಸುನೀಲ್ ಕುಮಾರ್ ಹಾಗೂ ನಾಡಗೌಡ ಹೇಳಿದರು. ಬಯೋಮೇಟ್ರಿಕ್ ಹಾಕಿ ಎಂದೂ ನಾಡಗೌಡ ಸಲಹೆ ನೀಡಿದರು. ಮತ್ತೊಂದು ಕಡೆಯಲ್ಲಿ ಶಾಸಕರಿಗೂ ಮತ್ತು ಸಚಿವರಿಗೂ ಈ ನಿಯಮ ಬೇಡ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ವಿಧಾನಸಭೆಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಂತ್ರಣ ಮತ್ತು ತಿದ್ದುಪಡಿ ವಿದೇಯಕ ಮಂಡನೆ

ಜು. 21ರವರೆಗೆ ವಿಧಾನಮಂಡಲ ಅಧಿವೇಶನ

ಬಜೆಟ್ ಅಧಿವೇಶನವನ್ನು ಜು. 21ರವರೆಗೆ ಮುಂದುವರಿಸಲು ನಿರ್ಧರಿಸಲಾಗಿದೆ. ಮಂಗಳವಾರ ನಡೆದ ಕಲಾಪ ಸಲಹಾ ಸಮಿತಿಯ ಸಭೆಯಲ್ಲಿ ಈ ಕುರಿತಂತೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪೀಕರ್‌ ಯು ಟಿ ಖಾದರ್ ವಿಧಾನಸಭೆಗೆ ವಿವರಣೆ ನೀಡಿದರು.

ಜು. 5ರಂದು ಈಗಾಗಲೇ ಸ್ವೀಕರಿಸಿರುವ ಮಸೂದೆಗಳನ್ನು ಮಂಡಿಸುವುದರ ಜೊತೆಗೆ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ನಡೆಸಲಾಗುವುದು. ಜು. 6ರಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ ಎಂದು ವಿವರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...