ಮೋದಿಯ ನೆತ್ತಿಗೆ ಸುಪ್ರೀಂ ಕೋರ್ಟ್‌ ಸುತ್ತಿಗೆಯಿಂದ ಬಾರಿಸಿದ್ದಕ್ಕೆ ಸಿಕ್ತು ಪರಿಹಾರ: ದೇವನೂರು

Date:

“ಪ್ರಧಾನಿ ನರೇಂದ್ರ ಮೋದಿಯವರ ನೆತ್ತಿಗೆಗೆ ಸುಪ್ರೀಂಕೋರ್ಟ್ ಸುತ್ತಿಗೆಯಿಂದ ಬಾರಿಸಿದ್ದಕ್ಕೆ ಕೇಂದ್ರವು ಕರ್ನಾಟಕಕ್ಕೆ 3,454 ರೂಪಾಯಿ ಬರ ಪರಿಹಾರ ಕೊಟ್ಟಿದೆ. ಆದರೆ ಕರ್ನಾಟಕ ಕೇಳಿದ್ದು 18,174 ಕೋಟಿ ರೂಪಾಯಿ” ಎಂದು ಹಿರಿಯ ಸಾಹಿತಿ, ಕನ್ನಡದ ಸಾಕ್ಷಿ ಪ್ರಜ್ಞೆ ದೇವನೂರ ಮಹಾದೇವ ಅವರು ಪ್ರತಿಕ್ರಿಯಿಸಿದ್ದಾರೆ.

ಪರಿಹಾರ ಘೋಷಣೆಯಾದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಅವರು, “ಇಷ್ಟು ಅಲ್ಪ ಸ್ವಲ್ಪ ಹಣ ಕೊಡುವುದಕ್ಕೂ ಮೊದಲು ಮೋದಿ, ಅಮಿತ್ ಶಾ, ನಿರ್ಮಲಾ ಸೀತಾರಾಮನ್‌ ಮತ್ತು ಕರ್ನಾಟಕ ರಾಜ್ಯ ಬಿಜೆಪಿಯವರು ನವರಂಗಿ ಬಣ್ಣಬಣ್ಣದ ಆಟ ಆಡಿದರು; ಕರ್ನಾಟಕದ ಜುಟ್ಟಿಗೆ ಸುಳ್ಳಿನ ಹೂ ಮುಡಿಸಿದರು. ಸುಪ್ರೀಂ ಕೋರ್ಟ್ ಹೇಳಿದ ಮೇಲೆ ಆ ಆದೇಶ ಪಾಲಿಸಲೇಬೇಕಾಯ್ತು. ಅಲ್ಲಿ ಅವರ ಆಟ ನಡೆಯಲಿಲ್ಲ. ಅವರು ಈಗಲೂ ಸುಳ್ಳಿನ ಸುರುಸುರು ಬತ್ತಿ ಹಚ್ಚಬಹುದು. ಆದರೆ ಕರ್ನಾಟಕ ಜನತೆಗೆ ಸತ್ಯ ತಿಳಿದಿದೆ ಎಂಬ ನಂಬಿಕೆ ನನಗಿದೆ” ಎಂದು ಹೇಳಿದ್ದಾರೆ.

“ಈಗಾಲಾದರೂ ರಾಜ್ಯ ಬಿಜೆಪಿ ನಾಯಕರು ಮೋದಿ ಮುಂದೆ ಕೈ- ಬಾಯಿ ಕಟ್ಟಿಕೊಂಡು ನಿಲ್ಲುವ ಬದಲು ಕನಿಷ್ಠ ಬಾಯಿ ಬಿಡಲಿ. ಇಲ್ಲದಿದ್ದರೆ ಅವರಿಗೆ ಕರ್ನಾಟಕದವರು ಅನ್ನಿಸಿಕೊಳ್ಳುವ ಕನಿಷ್ಠ ಅರ್ಹತೆ ಇರುವುದಿಲ್ಲ, ನೆನಪಿರಲಿ” ಎಂದು ಎಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

6 5

ತನ್ನ ಬೆನ್ನು ತಾನೇ ತಟ್ಟಿಕೊಳ್ಳುತ್ತಿರುವ ಬಿಜೆಪಿ

ಬರ ಪರಿಹಾರ ಕೈಪಿಡಿ ನಿಗದಿ ಮಾಡಿರುವ ದಿನಾಂಕಕ್ಕಿಂತ ಮೊದಲೇ ಬರ ಘೋಷಣೆ ಮಾಡಿ, ಪರಿಹಾರಕ್ಕೆ ಮನವಿ ಮಾಡಿದ್ದರೂ ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಆದರೆ ಚುನಾವಣೆ ಘೋಷಣೆಯಾದ ಬಳಿಕ, “ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ತಡವಾಗಿ ಮನವಿ ಮಾಡಿದೆ, ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದೇವೆ, ಅದು ನೀಡುವ ಸೂಚನೆಯನ್ನು ಪಾಲಿಸಲಾಗುವುದು” ಎಂದು ಅಮಿತ್ ಶಾ ಮತ್ತು ಇತರ ಬಿಜೆಪಿ ನಾಯಕರು ಸುಳ್ಳು ಹೇಳಿದರು.

ಇದರ ನಡುವೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮೇಲೆ ಅಲ್ಪಮಟ್ಟಿಗಿನ ಪರಿಹಾರವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಆದರೆ ನೀತಿ ಸಂಹಿತೆಯ ನಡುವೆಯೇ ರಾಜ್ಯಕ್ಕೆ ಮೋದಿಯವರು ಪರಿಹಾರ ನೀಡಿದ್ದಾರೆಂದು ರಾಜ್ಯ ಬಿಜೆಪಿ ನಾಯಕರು ಮಾಡಿಕೊಳ್ಳುತ್ತಿರುವ ಪ್ರಚಾರ ಟೀಕೆಗೆ ಗುರಿಯಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...