ಜ್ಞಾನವಾಪಿ ವಿವಾದ | ದೇವಾಲಯದ ಅವಶೇಷದ ಮೇಲೆಯೇ ಮಸೀದಿ ನಿರ್ಮಾಣ: ಅರ್ಜಿದಾರರ ಪರ ವಕೀಲ

Date:

ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಸಮೀಕ್ಷಾ ವರದಿಯನ್ನು ಭಾರತೀಯ ಪುರಾತತ್ವ ಇಲಾಖೆ(ಎಎಸ್ಐ) ಬಹಿರಂಗಪಡಿಸಿದ್ದು, ಮೊದಲೇ ಅಸ್ತಿತ್ವದಲ್ಲಿದ್ದ ಹಿಂದೂ ದೇವಾಲಯದ ಅವಶೇಷಗಳ ಮೇಲೆಯೇ ಮಸೀದಿ ನಿರ್ಮಿಸಲಾಗಿದೆ ಎಂದು ಅರ್ಜಿದಾರ ಹಿಂದೂ ಮಹಿಳೆಯರ ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು ಗುರುವಾರ ರಾತ್ರಿ ಹೇಳಿಕೆ ನೀಡಿದ್ದಾರೆ.

839 ಪುಟಗಳ ಸಮೀಕ್ಷಾ ವರದಿಯ ಪ್ರತಿಗಳನ್ನು ಗುರುವಾರ ತಡರಾತ್ರಿ ನ್ಯಾಯಾಲಯವು ಸಂಬಂಧಪಟ್ಟ ಕಕ್ಷಿದಾರರಿಗೆ ನೀಡಿದೆ ಎಂದು ವಕೀಲ ಜೈನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹಿಂದೆ ಇದ್ದ ದೇವಸ್ಥಾನವನ್ನು ಕೆಡವಿದ ಅವಶೇಷಗಳ ಮೇಲೆ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಸಮೀಕ್ಷೆಯ ವರದಿ ಸ್ಪಷ್ಟಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಸ್ತಿತ್ವದಲ್ಲಿರುವ ರಚನೆಯನ್ನು ನಿರ್ಮಿಸುವ ಮೊದಲು ಒಂದು ದೊಡ್ಡ ಹಿಂದೂ ದೇವಾಲಯ ಅಸ್ತಿತ್ವದಲ್ಲಿತ್ತು ಎಂದು ಎಎಸ್ಐ ಹೇಳಿದ್ದು, ಎಎಸ್ಐನ ನಿರ್ಣಾಯಕ ಸಂಶೋಧನೆಯಾಗಿದೆ. ಸರ್ವೇ ವರದಿಯಲ್ಲಿ ಮಸೀದಿಗೂ ಮುನ್ನ ದೊಡ್ಡ ದೇಗುಲ ಇತ್ತು ಎಂಬುದಕ್ಕೆ ಸಾಕಷ್ಟು ಪುರಾವೆಗಳಿವೆ” ಎಂದು ವಿಷ್ಣು ಶಂಕರ್ ಜೈನ್ ತಿಳಿಸಿದ್ದಾರೆ.

“ಸಮೀಕ್ಷೆಯಲ್ಲಿ 32 ಸ್ಥಳಗಳಲ್ಲಿ ಪುರಾವೆಗಳು ಸಿಕ್ಕಿವೆ. ಮಸೀದಿ ನಿರ್ಮಾಣಕ್ಕೂ ಮುಂಚೆಯೇ ಹಿಂದೂ ದೇವಾಲಯವಿತ್ತು ಎಂದು ತೋರಿಸುತ್ತದೆ. 2 ಸೆಪ್ಟೆಂಬರ್ 1669 ರಂದು ದೇವಾಲಯವನ್ನು ಕೆಡವಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಜನಾರ್ದನ, ರುದ್ರ ಮತ್ತು ವಿಶ್ವೇಶ್ವರನ ಬಗ್ಗೆ ಶಾಸನಗಳು ಕಂಡುಬಂದಿವೆ. ಜ್ಞಾನವಾಪಿಯ ಪಶ್ಚಿಮ ಗೋಡೆಯು ಹಿಂದೂ ದೇವಾಲಯದ ಭಾಗವಾಗಿತ್ತು. ಅದನ್ನು ಸುಲಭವಾಗಿ ಗುರುತಿಸಬಹುದಾಗಿದೆ” ಎಂದು ಹಿಂದೂ ಪರ ವಕೀಲ ತಿಳಿಸಿದ್ದಾರೆ.

“ಮಸೀದಿಯನ್ನು ನಿರ್ಮಿಸಲು ದೇವಾಲಯವನ್ನು ನಾಶಪಡಿಸಲಾಗಿದೆ. ಸರ್ವೇ ವೇಳೆ ಕಟ್ಟಡದ ರಚನೆಗೆ ಯಾವುದೇ ಹಾನಿ ಉಂಟಾಗಿಲ್ಲ, ಶೋಧಿಸಿದ ಎಲ್ಲ ವಸ್ತುಗಳನ್ನು ದಾಖಲಿಸಲಾಗಿದೆ. ವೈಜ್ಞಾನಿಕ ಅಧ್ಯಯನದ ಆಧಾರದ ಮೇಲೆ, ಅಸ್ತಿತ್ವದಲ್ಲಿರುವ ರಚನೆಯಲ್ಲಿ ಹಿಂದಿನ ರಚನೆಯ ಕಂಬಗಳ ಬಳಕೆಯಾಗಿದೆ. ಸ್ತಂಭಗಳನ್ನು ವ್ಯವಸ್ಥಿತವಾಗಿ ಅಧ್ಯಯನ ಮಾಡಲಾಗಿದೆ” ಎಂದು ಎಎಸ್‌ಐ ವರದಿಯನ್ನು ಓದುತ್ತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಹೊಸ ರಚನೆಯ ನಿರ್ಮಾಣದಲ್ಲಿ ಮೊದಲೇ ಅಸ್ತಿತ್ವದಲ್ಲಿರುವ ದೇವಾಲಯದ ಭಾಗಗಳನ್ನು ಮರುಬಳಕೆ ಮಾಡಲಾಗಿದೆ. ದೇವಾಲಯವು ದೊಡ್ಡ ಕೇಂದ್ರವನ್ನು ಮಸೀದಿಯ ಸಭಾಂಗಣವಾಗಿ ಬಳಸಲಾಗುತ್ತಿದೆ. ಈಗಿರುವ ಮಸೀದಿಯಲ್ಲಿ ಹಿಂದಿನ ರಚನೆಯ 34 ಶಾಸನಗಳನ್ನು ಬಳಸಲಾಗಿದೆ. ಮರು ಬಳಕೆ ವೇಳೆ ಕುರುಹು ನಾಶ ಮಾಡಲಾಗಿದೆ. ಈ ಮಸೀದಿಯನ್ನು ನಿರ್ಮಿಸಲು ದೇವಾಲಯವನ್ನು ನಾಶಪಡಿಸಲಾಗಿದೆ. 17ನೇ ಶತಮಾನದಲ್ಲಿ ಈ ಮಂದಿರವನ್ನು ನಾಶ ಮಾಡಲಾಗಿದೆ ಎಂದು ಸಮೀಕ್ಷೆ ವರದಿಯಲ್ಲಿ ಉಲ್ಲೇಖಿಸಲಾಗಿದೆ” ಎಂದು ಅರ್ಜಿದಾರರಾದ ಐವರು ಹಿಂದೂ ಮಹಿಳೆಯರ ಪರ ವಕೀಲ ವಿಷ್ಣು ಶಂಕರ್ ಜೈನ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...