ಕೇಂದ್ರದ ಸಾಲಕ್ಕೂ, ತಾವು ಮಾಡಿರುವ ಸಾಲಕ್ಕೂ ವ್ಯತ್ಯಾಸವಿದೆ: ಸಿದ್ದರಾಮಯ್ಯಗೆ ಅಶೋಕ್ ತಿರುಗೇಟು

Date:

ಸಿಎಂ ಸಿದ್ದರಾಮಯ್ಯ ನವರೇ, ನಾನು ತಮ್ಮಂತೆ ಸ್ವಯಂ ಘೋಷಿತ ಆರ್ಥಿಕ ತಜ್ಞನಲ್ಲ. ಆದರೆ ತಮ್ಮಂತೆ ನನಗೊಬ್ಬನಿಗೇ ಎಲ್ಲವೂ ಗೊತ್ತು ಎಂಬ ಅಹಂಕಾರವೂ ಇಲ್ಲ. ಕೇಂದ್ರ ಸರ್ಕಾರ ಮಾಡಿರುವ ಸಾಲಕ್ಕೂ, ತಾವು ಮಾಡಿರುವ ಸಾಲಕ್ಕೂ ಅಜಗಜಾಂತರ ವ್ಯತ್ಯಾಸ ಇದೆ. ನಿಮಗೆ ಅರ್ಥವಾಗುವುದಿದ್ದರೆ ಓದಿಕೊಳ್ಳಿ” ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಅವರ ಎಕ್ಸ್‌ ತಾಣದ ಪೋಸ್ಟ್‌ಗೆ ಮರಳಿ ಪ್ರತಿಕ್ರಿಯಿಸಿರುವ ಅವರು, “ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ ಗಮನ ಹರಿಸಿದ್ದು, 2024ರ ಮಧ್ಯಂತರ ಬಜೆಟ್ನಲ್ಲಿ ಬಂಡವಾಳ ವೆಚ್ಚವನ್ನು ಸತತ ನಾಲ್ಕನೇ ವರ್ಷವೂ ಶೇ.11.1ರಷ್ಟು ಹೆಚ್ಚಿಸಿದೆ. ಇದರಿಂದ ಬಂಡವಾಳ ವೆಚ್ಚ 11.11 ಲಕ್ಷ ಕೋಟಿ ರೂ.ಗೆ ಏರಿಕೆಯಾಗಲಿದೆ. ಇದು ದೇಶದ ಜಿಡಿಪಿಯ ಶೇ. 3.4ರಷ್ಟು ಆಗಿದೆ. ಅದೇ ನಿಮ್ಮ ಕಾರ್ಯವೈಖರಿ ನೋಡಿ” ಎಂದಿದಾರೆ.

“2023-24 ರಲ್ಲಿ ತಾವು ಮಂಡಿಸಿದ ಬಜೆಟ್ ಗಾತ್ರ 3.27 ಲಕ್ಷ ಕೋಟಿ. ಅದರಲ್ಲಿ ಬಂಡವಾಳ ವೆಚ್ಚಕ್ಕೆ ತಾವು ಮೀಸಲಿಟ್ಟಿದ್ದು 54,000 ಕೋಟಿ. ಅದೇ 2024-2025ರ ಆರ್ಥಿಕ ಸಾಲಿಗೆ ತಾವು ಮಂಡಿಸಿರುವ ಕರ್ನಾಟಕದ ಬಜೆಟ್ ಗಾತ್ರ 3,71,383 ಕೋಟಿ. ಅಂದರೆ 2023-24 ರಲ್ಲಿ ತಾವು ಮಂಡಿಸಿದ 3.27 ಲಕ್ಷ ಕೋಟಿಗಿಂತ ದೊಡ್ಡದು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ವರ್ಷಕ್ಕಿಂತ ಸುಮಾರು 25 ಸಾವಿರ ಕೋಟಿ‌ ರೂ. ಹೆಚ್ಚಿನ ಸಾಲ ಕೂಡ ಮಾಡಿದ್ದೀರಿ. ಆದರೆ ಬಂಡವಾಳ ವೆಚ್ಚಕ್ಕೆ ತಾವು ಮೀಸಲಿಟ್ಟಿದ್ದು ಕೇವಲ 55,000 ಕೋಟಿ, ಅಂದರೆ ಕಳೆದ ವರ್ಷಕ್ಕಿಂತ ಹೆಚ್ಚಾದ ಮೊತ್ತ ಎಷ್ಟು? ಕೇವಲ 1,000 ಕೋಟಿ. ಅಂದರೆ ಬಂಡವಾಳ ವೆಚ್ಚ ಹೆಚ್ಚಳವಾಗಿದ್ದು ಕೇವಲ ಶೇ.1.85.” ಎಂದು ವಿವರಿಸಿದ್ದಾರೆ.

“ಬಜೆಟ್ ಗಾತ್ರ ಹೆಚ್ಚಾದರೂ, ಸಾಲ ಹೆಚ್ಚಾದರೂ, ಬಂಡವಾಳ ವೆಚ್ಚ ಮಾತ್ರ ಯಾಕೆ ಅದೇ ಪ್ರಮಾಣದಲ್ಲಿ ಹೆಚ್ಚಾಗುತ್ತಿಲ್ಲ ಸಿಎಂ ಸಿದ್ದರಾಮಯ್ಯ ನವರೇ? ಸಾಲದ ದುಡ್ಡೆಲ್ಲಾ ಎಲ್ಲಿ ಹೋಗುತ್ತಿದೆ? ಹೆಚ್ಚಾದ ಬಜೆಟ್ ಗಾತ್ರವೆಲ್ಲಾ ಎಲ್ಲಿ ಹೋಯ್ತು? ನಿಮ್ಮ ಬಳಿ ಇದಕ್ಕೆಲ್ಲಾ ಉತ್ತರ ಇದೆಯೇ” ಎಂದು ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...