ಸೋಲಿನ ಭೀತಿಯಿಂದ ಐಟಿ, ಇಡಿ ಮೂಲಕ ನಮ್ಮನ್ನು ಬೆದರಿಸುವ ಪ್ರಯತ್ನ ನಡೆಯುತ್ತಿದೆ: ಡಿ.ಕೆ. ಸುರೇಶ್ ಆಕ್ರೋಶ

Date:

“ಬಿಜೆಪಿ ಹಾಗೂ ಮಾಜಿ ಪ್ರಧಾನಿಗಳ ಕೈಗೊಂಬೆಯಾಗಿರುವ ಐಟಿ ಅಧಿಕಾರಿಗಳು ನಮ್ಮ ಕಾರ್ಯಕರ್ತರ ಮನೆಯಲ್ಲಿ ಮಹಿಳೆಯರನ್ನು ತೀಕ್ಷ್ಣವಾಗಿ ಕಂಡು, ಯುವಕರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಸೋಲಿನ ಭೀತಿಯಿಂದ  ಈ ರೀತಿ ನಡೆದುಕೊಳ್ಳುತ್ತಿದ್ದಾರೆ” ಎಂದು ಸಂಸದ ಡಿ.ಕೆ. ಸುರೇಶ್ ಆಕ್ರೋಶ ಹೊರಹಾಕಿದರು.

ಆನೇಕಲ್‌ನಲ್ಲಿ ಪ್ರಚಾರದ ವೇಳೆ ಮಾಧ್ಯಮಗಳ ಪ್ರಶ್ನೆಗಳ ಜತೆ ಮಾತನಾಡಿದ ಅವರು, “ಚುನಾವಣೆ ಸೋಲಿನ ಭೀತಿಯಿಂದ ಐಟಿ, ಇಡಿ ಮೂಲಕ ನಮ್ಮ ಕಾರ್ಯಕರ್ತರನ್ನು ಬೆದರಿಸುವ ಪ್ರಯತ್ನ ನಡೆಯುತ್ತಿದೆ. ನಿನ್ನೆ ಕೆಲವು ಅಧಿಕಾರಿಗಳು ಬಂದು ನಮ್ಮ ಕಾರ್ಯಕರ್ತರನ್ನು, ಅವರ ಕುಟುಂಬದ ಹೆಣ್ಣು ಮಕ್ಕಳನ್ನು ಬೆದರಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುತ್ತಿದ್ದು, ಐಟಿ ಇಲಾಖೆ ಮುಖ್ಯಸ್ಥರ ಗಮನಕ್ಕೆ ತರುತ್ತೇನೆ. ಅವರ ಕೆಲಸ ಕೇವಲ ಪರಿಶೀಲನೆ ಮಾಡುವುದು ಮಾತ್ರ. ಅದನ್ನು ಬಿಟ್ಟು ಬಿಜೆಪಿ ಪರ ಪ್ರಚಾರ ಮಾಡುವುದು ಸರಿಯಲ್ಲ. ಇದು ಅಕ್ಷಮ್ಯ ಅಪರಾಧ. ಹೀಗೆ ಮುಂದುವರಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ಚಾಲಕರ ಮನೆಯಲ್ಲಿ ಅವರ ಕುಟುಂಬದವರನ್ನು ಎಳೆದಾಡಿದ್ದಾರೆ. ಮಹಿಳೆಯರನ್ನು ತೀಕ್ಷ್ಣವಾಗಿ ಕಂಡು, ಯುವಕರನ್ನು ಒಂಟಿ ಕಾಲಲ್ಲಿ ನಿಲ್ಲಿಸಿದ್ದಾರೆ. ಮಾಜಿ ಪ್ರಧಾನಮಂತ್ರಿಗಳು ಹಾಗೂ ಬಿಜೆಪಿಯವರ ಕೈಗೊಂಬೆಯಾಗಿ ಐಟಿ ಅಧಿಕಾರಿಗಳ ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗಿದೆ. ಅವರು ಚುನಾವಣೆಯಲ್ಲಿ ಜನರ ಮುಂದೆ ಹೋಗಿ ಹೋರಾಟ ಮಾಡಬೇಕು. ಅದನ್ನು ಬಿಟ್ಟು ಈ ರೀತಿ ಅಧಿಕಾರಿಗಳ ದುರ್ಬಳಕೆ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ” ಎಂದು ಡಿ ಕೆ ಸುರೇಶ್ ತಿಳಿಸಿದ್ದಾರೆ.

“ಚುನಾವಣೆ ನಿಷ್ಪಕ್ಷಪಾತವಾಗಿ ಚುನಾವಣೆ ಮಾಡಬೇಕು. ನಾನು ನನ್ನ ಕೆಲಸದ ಆಧಾರದ ಮೇಲೆ ಮತ ಕೇಳುತ್ತಿದ್ದೇನೆಯೇ ಹೊರತು, ನನಗೆ ಯಾರನ್ನು ಬೆದರಿಸುವ ಅಗತ್ಯವಿಲ್ಲ. ನಾನು ಆಸ್ತಿ, ಕುಟುಂಬ ಉಳಿಸಿಕೊಳ್ಳಲು ಬೇರೆಯವರ ಜತೆ ಸೇರಿ ರಾಜಕಾರಣ ಮಾಡುತ್ತಿಲ್ಲ” ಎಂದು ಪರೋಕ್ಷವಾಗಿ ಜೆಡಿಎಸ್‌ ಅನ್ನು ಕುಟುಕಿದರು.

“ಜೆಡಿಎಸ್‌ನವರು ಕ್ಷುಲ್ಲಕ ರಾಜಕಾರಣ ಮಾಡುವುದರಲ್ಲಿ ಹೆಸರುವಾಸಿ. ಅವರು ಹಿರಿಯರಿದ್ದಾರೆ. ಅವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಅವರು ಮಾಡಿರುವ ಆರೋಪಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುತ್ತೇವೆ. ನಾನು ಹಾಗೂ ಶಿವಕುಮಾರ್ ಅವರಿಗೆ ಕಲ್ಲು ಹೊಡೆದಿದ್ದಾರೆ ಎಂದು ಹೇಳುತ್ತಾರಲ್ಲ, ಅವರ ಕುಟುಂಬದಲ್ಲಿ ಯಾರೆಲ್ಲಾ ಎಲ್ಲಿ ಕಲ್ಲು ಹೊಡೆದಿದ್ದಾರೆ ಎಂದು ನಾನು ತೋರಿಸುತ್ತೇನೆ. ಅವರು ಯಾರ ಜಮೀನುಗಳನ್ನು ಯಾರ ಹೆಸರಲ್ಲಿ ಹಾಕಿಕೊಂಡಿದ್ದಾರೆ ಎಂಬುದನ್ನು ತೋರಿಸಬಹುದು. ಆದರೆ ಅದರ ಅಗತ್ಯ ನಮಗಿಲ್ಲ” ಎಂದು ಡಿ.ಕೆ. ಸುರೇಶ್ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...